ETV Bharat / state

ರೈಲ್ವೆ ಕಾಮಗಾರಿ: ಹುಬ್ಬಳ್ಳಿ - ವಿಜಯವಾಡ ನಡುವಣ ರೈಲುಗಳ ಸಂಚಾರ ನಾಳೆಯಿಂದ ತಾತ್ಕಾಲಿಕವಾಗಿ ರದ್ದು - Trains Services suspended

author img

By ETV Bharat Karnataka Team

Published : May 15, 2024, 3:10 PM IST

ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಕಾಮಗಾರಿ ಕೈಗೊಂಡ ಕಾರಣ ಹುಬ್ಬಳ್ಳಿ ಮತ್ತು ವಿಜಯವಾಡ ನಡುವಿನ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರೈಲುಗಳ ಸಂಚಾರ ನಾಳೆಯಿಂದ ತಾತ್ಕಾಲಿಕವಾಗಿ ರದ್ದುrat
ರೈಲುಗಳ ಸಂಚಾರ ನಾಳೆಯಿಂದ ತಾತ್ಕಾಲಿಕವಾಗಿ ರದ್ದು (ETV Bharat)

ಹುಬ್ಬಳ್ಳಿ: ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡ ಪರಿಣಾಮ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ರೈಲುಗಳ ಸಂಚಾರವನ್ನು ನಾಳೆಯಿಂದ ತಾತ್ಕಾಲಿಕವಾಗಿ ರದ್ದು ಪಡಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.

ರದ್ದಾದ ರೈಲುಗಳು: ರೈಲು ಸಂಖ್ಯೆ 17329 ಎಸ್.ಎಸ್.ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್​​ಪ್ರೆಸ್ ರೈಲನ್ನು ಮೇ.16 ರಿಂದ 31 ರವರೆಗೆ ರದ್ದುಗೊಳಿಸಲಾಗುತ್ತಿದೆ. ರೈಲು ಸಂಖ್ಯೆ 17330 ವಿಜಯವಾಡ - ಎಸ್.ಎಸ್.ಎಸ್ ಹುಬ್ಬಳ್ಳಿ ಡೈಲಿ ಎಕ್ಸ್​​ಪ್ರೆಸ್ ರೈಲನ್ನು ಮೇ.17 ರಿಂದ ಜೂನ್ 1 ರವರೆಗೆ ರದ್ದುಗೊಳಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ‌ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೆಬ್ಬಾಳ ಫ್ಲೈ ಓವರ್‌ ಕಾಮಗಾರಿ, ಸಂಚಾರ ನಿರ್ಬಂಧ: ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ - HEBBAL FLYOVER work

ETV Bharat Logo

Copyright © 2024 Ushodaya Enterprises Pvt. Ltd., All Rights Reserved.