ETV Bharat / state

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: SIT ತನಿಖಾ ತಂಡ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನ - 40 PERCENT COMMISSION ALLEGATION

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40 ಪರ್ಸೆಂಟ್ ಕಮಿಷನ್​ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್​ಐಟಿ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

Minister H.K. Patil
ಸಚಿವ ಹೆಚ್.ಕೆ.ಪಾಟೀಲ್ (ETV Bharat)
author img

By ETV Bharat Karnataka Team

Published : April 11, 2025 at 8:45 PM IST

2 Min Read

ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40 ಪರ್ಸೆಂಟ್ ಕಮಿಷನ್​ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್​ಐಟಿ ರಚಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ವಿಧಾನಸೌಧದಲ್ಲಿ ಇಂದು ನಡೆದ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನಾಗಮೋಹನ್ ದಾಸ್​ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ನಾಗಮೋಹನ್​ ದಾಸ್ ಅವರು ವಿಚಾರಣಾ ವರದಿ ಸಲ್ಲಿಸಿದ ಬಳಿಕ ಸಂಪುಟದಲ್ಲಿ ಮಂಡಿಸಲಾಗಿದೆ. ಕೆಲವು ವಿವರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಇನ್ನಷ್ಟು ವಿವರವಾಗಿ ಚರ್ಚೆಯ ಅಗತ್ಯವಿದೆ ಎಂದು ಹೇಳಿದರು.

ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್​ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಎರಡ್ಮೂರು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟದ ಉಪಸಮಿತಿ ರಚನೆ: ಬೆಂಗಳೂರು - ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನೈಸ್ ಸಂಸ್ಥೆಯ ಕಾರ್ಯನಿರ್ವಹಣೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ರಚಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

ನೈಸ್ ಯೋಜನೆ ವಿಳಂಬದ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟಕ್ಕೆ ಅನುಕೂಲವಾಗುವಂತೆ ಶಿಫಾರಸುಗಳನ್ನು ಮಾಡಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಯೋಜನೆಗಳ ಜಮೀನುಗಳಿಗೆ ಭೂ ವ್ಯಾಜ್ಯ ಕುರಿತು ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ ಇವೆ. ಎಂಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ತೀರ್ಪು ನೀಡಿ ಭೂಸ್ವಾಧೀನವನ್ನು ರದ್ದುಗೊಳಿಸಿವೆ ಎಂದು ವಿವರಿಸಿದರು.

ಎಫ್​ಡಬ್ಲ್ಯೂಎಯಂತೆ 13237 ಎಕರೆ ಖಾಸಗಿ ಜಮೀನು ಮತ್ತು 6956 ಸರ್ಕಾರಿ ಜಮೀನು ಒಟ್ಟು 20193 ಎಕರೆ ಭೂಸ್ವಾಧೀನ ಪಡಿಸಿಕೊಂಡು ನೀಡಲು ನೈಸ್ ಕಂಪನಿಯೊಂದಿಗೆ ಒಪ್ಪಂದವಿದೆ. 1998-99 ರಲ್ಲಿ 23625 ಎಕರೆ ಖಾಸಗಿ ಜಮೀನು ಹಾಗೂ 5688 ಎಕರೆ ಸರ್ಕಾರಿ ಜಮೀನು ಒಟ್ಟು 29313 ಎಕರೆ ಜಮೀನಿಗೆ ಭೂಸ್ವಾಧೀನ ಮಾಡಿಕೊಳ್ಳಲು ಸಚಿವ ಸಂಪುಟದ ಅನುಮೋದನೆ ಪಡೆಯದೆಯೇ ಕೆಐಎಡಿಬಿ ಒಪ್ಪಂದ ಮಾಡಿಕೊಂಡಿದೆ ಎಂದರು.

ಅನುಕಂಪದ ಆಧಾರದ ಮೇಲೆ ನೇಮಕಾತಿ: ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 5ನ್ನು ಸಡಿಲಗೊಳಿಸಿ. ಇದೊಂದು ವಿಶೇಷ ಪ್ರಕರಣಗಳೆಂದು ಪರಿಗಣಿಸಿ, ಇದು ಯಾವುದೇ ಪ್ರಕರಣಕ್ಕೂ ಪೂರ್ವ ನಿರ್ದೇಶನವಾಗದ ಷರತ್ತಿಗೊಳಪಡಿಸಿ ಶ್ರೀ ಶ್ರವಣಕುಮಾರ್ ಇವರಿಗೆ ಅನುಕಂಪದ ಆಧಾರದ ನೇಮಕಾತಿ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಸಚಿವರು ತಿಳಿಸಿದರು.

ಇಎಸ್​ಐ ಆಸ್ಪತ್ರೆಗೆ ಪರಿಕರಗಳ ಖರೀದಿ: ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ, 2023-24ರ ಆಯವ್ಯಯ ಭಾಷಣದಲ್ಲಿ ಘೋಷಣೆಯಾಗಿರುವ ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಅನುಬಂಧ 1ರಲ್ಲಿ ನಮೂದಿಸಿರುವ ವಿವಿಧ ಉಪಕರಣಗಳನ್ನು ಒಟ್ಟು ಅಂದಾಜು 64.00 ಕೋಟಿ ರೂ.ಗಳ ವೆಚ್ಚದಲ್ಲಿ ಕೆಟಿಪಿಪಿ ಕಾಯ್ದೆಯನುಸರಿಸಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕ‌ದ ಈಗಿನ ಸರ್ಕಾರ ಭ್ರಷ್ಟಾಚಾರದಲ್ಲಿ‌ ದೇಶದಲ್ಲಿಯೇ ನಂಬರ್ ಒನ್‌: ವಿಜಯೇಂದ್ರ ಆರೋಪ

ಇದನ್ನೂ ಓದಿ: ಕಾಂಗ್ರೆಸ್​ನವರು ಹಿಂದೂ, ದಲಿತ ವಿರೋಧಿಗಳು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40 ಪರ್ಸೆಂಟ್ ಕಮಿಷನ್​ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್​ಐಟಿ ರಚಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ವಿಧಾನಸೌಧದಲ್ಲಿ ಇಂದು ನಡೆದ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನಾಗಮೋಹನ್ ದಾಸ್​ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ನಾಗಮೋಹನ್​ ದಾಸ್ ಅವರು ವಿಚಾರಣಾ ವರದಿ ಸಲ್ಲಿಸಿದ ಬಳಿಕ ಸಂಪುಟದಲ್ಲಿ ಮಂಡಿಸಲಾಗಿದೆ. ಕೆಲವು ವಿವರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಇನ್ನಷ್ಟು ವಿವರವಾಗಿ ಚರ್ಚೆಯ ಅಗತ್ಯವಿದೆ ಎಂದು ಹೇಳಿದರು.

ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್​ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಎರಡ್ಮೂರು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟದ ಉಪಸಮಿತಿ ರಚನೆ: ಬೆಂಗಳೂರು - ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನೈಸ್ ಸಂಸ್ಥೆಯ ಕಾರ್ಯನಿರ್ವಹಣೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ರಚಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

ನೈಸ್ ಯೋಜನೆ ವಿಳಂಬದ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟಕ್ಕೆ ಅನುಕೂಲವಾಗುವಂತೆ ಶಿಫಾರಸುಗಳನ್ನು ಮಾಡಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಯೋಜನೆಗಳ ಜಮೀನುಗಳಿಗೆ ಭೂ ವ್ಯಾಜ್ಯ ಕುರಿತು ವಿವಿಧ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ ಇವೆ. ಎಂಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ತೀರ್ಪು ನೀಡಿ ಭೂಸ್ವಾಧೀನವನ್ನು ರದ್ದುಗೊಳಿಸಿವೆ ಎಂದು ವಿವರಿಸಿದರು.

ಎಫ್​ಡಬ್ಲ್ಯೂಎಯಂತೆ 13237 ಎಕರೆ ಖಾಸಗಿ ಜಮೀನು ಮತ್ತು 6956 ಸರ್ಕಾರಿ ಜಮೀನು ಒಟ್ಟು 20193 ಎಕರೆ ಭೂಸ್ವಾಧೀನ ಪಡಿಸಿಕೊಂಡು ನೀಡಲು ನೈಸ್ ಕಂಪನಿಯೊಂದಿಗೆ ಒಪ್ಪಂದವಿದೆ. 1998-99 ರಲ್ಲಿ 23625 ಎಕರೆ ಖಾಸಗಿ ಜಮೀನು ಹಾಗೂ 5688 ಎಕರೆ ಸರ್ಕಾರಿ ಜಮೀನು ಒಟ್ಟು 29313 ಎಕರೆ ಜಮೀನಿಗೆ ಭೂಸ್ವಾಧೀನ ಮಾಡಿಕೊಳ್ಳಲು ಸಚಿವ ಸಂಪುಟದ ಅನುಮೋದನೆ ಪಡೆಯದೆಯೇ ಕೆಐಎಡಿಬಿ ಒಪ್ಪಂದ ಮಾಡಿಕೊಂಡಿದೆ ಎಂದರು.

ಅನುಕಂಪದ ಆಧಾರದ ಮೇಲೆ ನೇಮಕಾತಿ: ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 5ನ್ನು ಸಡಿಲಗೊಳಿಸಿ. ಇದೊಂದು ವಿಶೇಷ ಪ್ರಕರಣಗಳೆಂದು ಪರಿಗಣಿಸಿ, ಇದು ಯಾವುದೇ ಪ್ರಕರಣಕ್ಕೂ ಪೂರ್ವ ನಿರ್ದೇಶನವಾಗದ ಷರತ್ತಿಗೊಳಪಡಿಸಿ ಶ್ರೀ ಶ್ರವಣಕುಮಾರ್ ಇವರಿಗೆ ಅನುಕಂಪದ ಆಧಾರದ ನೇಮಕಾತಿ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಸಚಿವರು ತಿಳಿಸಿದರು.

ಇಎಸ್​ಐ ಆಸ್ಪತ್ರೆಗೆ ಪರಿಕರಗಳ ಖರೀದಿ: ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ, 2023-24ರ ಆಯವ್ಯಯ ಭಾಷಣದಲ್ಲಿ ಘೋಷಣೆಯಾಗಿರುವ ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಅನುಬಂಧ 1ರಲ್ಲಿ ನಮೂದಿಸಿರುವ ವಿವಿಧ ಉಪಕರಣಗಳನ್ನು ಒಟ್ಟು ಅಂದಾಜು 64.00 ಕೋಟಿ ರೂ.ಗಳ ವೆಚ್ಚದಲ್ಲಿ ಕೆಟಿಪಿಪಿ ಕಾಯ್ದೆಯನುಸರಿಸಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕ‌ದ ಈಗಿನ ಸರ್ಕಾರ ಭ್ರಷ್ಟಾಚಾರದಲ್ಲಿ‌ ದೇಶದಲ್ಲಿಯೇ ನಂಬರ್ ಒನ್‌: ವಿಜಯೇಂದ್ರ ಆರೋಪ

ಇದನ್ನೂ ಓದಿ: ಕಾಂಗ್ರೆಸ್​ನವರು ಹಿಂದೂ, ದಲಿತ ವಿರೋಧಿಗಳು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.