ETV Bharat / state

ಹಾವೇರಿ: ಏಳುವರೆ ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ ಆರೋಪ - ASSAULT ON MINOR GIRL

ಅಪ್ರಾಪ್ತೆ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಗ್ಗೆ ಹಾವೇರಿಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ.

case-registered-for-assault-on-minor-girl-against-60-year-old-man
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : April 26, 2025 at 8:29 PM IST

1 Min Read

ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.

ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದಿತ್ತು ಬಾಲಕಿ ಕೊಲೆ: ಆಟವಾಡುತ್ತಿದ್ದ ಬಾಲಕಿಗೆ ಸಿಹಿ ತಿನಿಸು ಕೊಡಿಸುವುದಾಗಿ ನಂಬಿಸಿ ಕರೆದೊಯ್ದ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಬಳಿಕ ವಶಕ್ಕೆ ಪಡೆಯಲಾದ ಆರೋಪಿಯನ್ನು ಘಟನಾ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಪೊಲೀಸರು ಗುಂಡು ಹಾರಿಸಿದ್ದು, ತೀವ್ರ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮೃತಪಟ್ಟಿದ್ದ. ಆತ ಬಿಹಾರ ಮೂಲದ ರಿತೇಶಕುಮಾರ (35) ಎಂಬುದು ಪೊಲೀಸ್​ ತನಿಖೆಯಲ್ಲಿ ಗೊತ್ತಾಗಿತ್ತು. ಕಾಮುಕನ ಅಮಾನುಷ ಕೃತ್ಯಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪೊಲೀಸರಿಗೆ ಹೆದರಿ ನ್ಯಾಯಾಧೀಶರ ಕೊಠಡಿಗೆ ನುಗ್ಗಿದ ರೌಡಿಶೀಟರ್ ಬಂಧನ

ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ.

ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದಿತ್ತು ಬಾಲಕಿ ಕೊಲೆ: ಆಟವಾಡುತ್ತಿದ್ದ ಬಾಲಕಿಗೆ ಸಿಹಿ ತಿನಿಸು ಕೊಡಿಸುವುದಾಗಿ ನಂಬಿಸಿ ಕರೆದೊಯ್ದ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ ಪ್ರಕರಣ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಬಳಿಕ ವಶಕ್ಕೆ ಪಡೆಯಲಾದ ಆರೋಪಿಯನ್ನು ಘಟನಾ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಪೊಲೀಸರು ಗುಂಡು ಹಾರಿಸಿದ್ದು, ತೀವ್ರ ಗಾಯಗೊಂಡಿದ್ದ ಆತ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮೃತಪಟ್ಟಿದ್ದ. ಆತ ಬಿಹಾರ ಮೂಲದ ರಿತೇಶಕುಮಾರ (35) ಎಂಬುದು ಪೊಲೀಸ್​ ತನಿಖೆಯಲ್ಲಿ ಗೊತ್ತಾಗಿತ್ತು. ಕಾಮುಕನ ಅಮಾನುಷ ಕೃತ್ಯಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಪೊಲೀಸರಿಗೆ ಹೆದರಿ ನ್ಯಾಯಾಧೀಶರ ಕೊಠಡಿಗೆ ನುಗ್ಗಿದ ರೌಡಿಶೀಟರ್ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.