ETV Bharat / state

ಆಸ್ತಿ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಪತ್ರ: ಗ್ರಾಮಸ್ಥರಲ್ಲಿ ಆತಂಕ, ಡಿಸಿಗೆ ಮನವಿ - VILLAGERS APPEAL TO DC

ಮನವಿ ಪತ್ರ ಸ್ವೀಕರಿಸಿದ ಡಿಸಿ ಶಿಲ್ಪಾನಾಗ್, ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ. ನಿಮ್ಮ ಊರುಗಳು ಕಂದಾಯ ಗ್ರಾಮಗಳಾಗುವ ಹಂತದಲ್ಲಿದೆ ಎಂದು ಧೈರ್ಯ ಹೇಳಿದರು.

VILLAGERS APPEAL TO DC
ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಗ್ರಾಮಸ್ಥರು (ETV Bharat)
author img

By ETV Bharat Karnataka Team

Published : April 11, 2025 at 4:30 PM IST

2 Min Read

ಚಾಮರಾಜನಗರ: 4 ಸಾವಿರ ಎಕರೆಗೂ ಹೆಚ್ಚು ಆಸ್ತಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಅವರು ಪತ್ರ ಬರೆದ ಕಾರಣದಿಂದ ಹಲವು ಗ್ರಾಮಸ್ಥರು ವಿಚಲಿತರಾಗಿದ್ದಾರೆ.

ಸುಮಾರು 60-70 ವರ್ಷಗಳಿಂದ ಭೂಮಿ ನಂಬಿ ಜೀವನ ಸಾಗಿಸುತ್ತಿದ್ದ ತಮ್ಮ ಭೂಮಿಯನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಬದಲು ಅದು ರಾಜಮಾತೆಯ ಹೆಸರಿಗೆ ಖಾತೆ ಆಗುತ್ತದೋ ಎಂಬ ಅವ್ಯಕ್ತ ಆತಂಕ ಹೊತ್ತು ಇಂದು ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ, ಅಟ್ಟಗುಳಿಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ (ETV Bharat)

ಜಯಚಾಮರಾಜೇಂದ್ರ ಒಡೆಯರ್ ನಮಗೆ 1,035 ಎಕರೆ ಭೂಮಿ ದಾನ ನೀಡಿದ್ದಾರೆ. 1982ರಲ್ಲಿ ಸಚಿವರಾಗಿದ್ದ ಬಿ.ರಾಚಯ್ಯ ಕಾಲದಲ್ಲಿ ಸರ್ಕಾರ ಸಾಗುವಳಿ ಚೀಟಿ ನೀಡಿದೆ. ಈಗ ಪ್ರಮೋದಾದೇವಿ ಒಡೆಯರ್ ನಮ್ಮ ಊರಿನ ಸರ್ವೇ ನಂಬರ್​ಗಳನ್ನು ಉಲ್ಲೇಖಿಸಿ ಖಾತೆ ಮಾಡಿಕೊಡುವಂತೆ ಪತ್ರ ಬರೆದಿದ್ದಾರೆ ಎಂದು ಡಿಸಿ ಬಳಿ ಅವರು ಅಳಲು ತೋಡಿಕೊಂಡರು.

4000ಕ್ಕೂ ಹೆಚ್ಚು ಜನಸಂಖ್ಯೆ ಸಿದ್ದಯ್ಯನಪುರ ಗ್ರಾಮದಲ್ಲಿದ್ದು ಪ್ರಮೋದಾದೇವಿ ಅವರಿಗೆ ಖಾತೆ ಮಾಡಿಕೊಟ್ಟರೆ ಇಡೀ ಊರಿಗೆ ಊರೇ ಖಾಲಿ ಮಾಡಬೇಕಾಗುತ್ತದೆ. ಈ ಸಮಸ್ಯೆ ಬಗೆಹರಿಸಿ ಎಂದು ಕೇಳಿಕೊಂಡರು.

ಆತಂಕ ಬೇಡ ಎಂದ ಜಿಲ್ಲಾಧಿಕಾರಿ: ಮನವಿ ಪತ್ರ ಸ್ವೀಕರಿಸಿದ ಡಿಸಿ ಶಿಲ್ಪಾನಾಗ್ ಮಾತನಾಡಿ, "ಈಗಾಗಲೇ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ, ಸರ್ಕಾರಿ ಜಾಗ ಎಂದು ಖಚಿತಪಡಿಸಿಕೊಂಡು ಕಂದಾಯ ಗ್ರಾಮವಾಗಿ ಘೋಷಣೆ ಮಾಡಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದರೂ ಕೂಡ ಯಾವುದೇ ಪೂರಕ ದಾಖಲೆ ಲಗತ್ತಿಸಿಲ್ಲ, ನ್ಯಾಯಾಲಯದ ಆದೇಶವಿಲ್ಲ‌. ಆದ್ದರಿಂದ, ಯಾವುದೇ ಆತಂಕ ಬೇಡ. ನಿಮ್ಮ ಊರುಗಳು ಕಂದಾಯ ಗ್ರಾಮಗಳಾಗುವ ಹಂತದಲ್ಲಿದೆ" ಎಂದರು.

ಏನಿದು ಪತ್ರ ವಿವಾದ?: ಮೈಸೂರು ರಾಜಮನೆತನ ಇಂದಿಗೂ ಕೂಡ ಹಲವು ಆಸ್ತಿಗಳ ವಿವಾದ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಸ್ವತ್ತು ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಈಗ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನು ನಡೆಸದಂತೆ ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾ.27ರಂದು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಮೈಸೂರು ಮಹಾರಾಜರು ಮತ್ತು ಭಾರತ ಸರ್ಕಾರದ ನಡುವೆ 1950ರ ಜ.6ರಲ್ಲಿ ನಡೆದ ಒಪ್ಪಂದದ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ 4 ಸಾವಿರಕ್ಕೂ ಅಧಿಕ ಎಕರೆ ಮಹಾರಾಜರ ಖಾಸಗಿ ಸ್ವತ್ತಾಗಿದೆ. ಆದ್ದರಿಂದ ಈ ಸ್ವತ್ತುಗಳಲ್ಲಿ ಯಾವುದೇ ರೀತಿಯ ಕಂದಾಯ ಗ್ರಾಮ ಮಾಡದೇ ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜಮಾತೆ ಕೋರಿದ್ದರು.

ಇದನ್ನೂ ಓದಿ: ಆಸ್ತಿ ರಕ್ಷಣೆಗಾಗಿ ಚಾಮರಾಜನಗರ ಡಿಸಿಗೆ ಪತ್ರ ಬರೆದ ಪ್ರಮೋದಾದೇವಿ ಒಡೆಯರ್

ಚಾಮರಾಜನಗರ: 4 ಸಾವಿರ ಎಕರೆಗೂ ಹೆಚ್ಚು ಆಸ್ತಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಅವರು ಪತ್ರ ಬರೆದ ಕಾರಣದಿಂದ ಹಲವು ಗ್ರಾಮಸ್ಥರು ವಿಚಲಿತರಾಗಿದ್ದಾರೆ.

ಸುಮಾರು 60-70 ವರ್ಷಗಳಿಂದ ಭೂಮಿ ನಂಬಿ ಜೀವನ ಸಾಗಿಸುತ್ತಿದ್ದ ತಮ್ಮ ಭೂಮಿಯನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಬದಲು ಅದು ರಾಜಮಾತೆಯ ಹೆಸರಿಗೆ ಖಾತೆ ಆಗುತ್ತದೋ ಎಂಬ ಅವ್ಯಕ್ತ ಆತಂಕ ಹೊತ್ತು ಇಂದು ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ, ಅಟ್ಟಗುಳಿಪುರ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ (ETV Bharat)

ಜಯಚಾಮರಾಜೇಂದ್ರ ಒಡೆಯರ್ ನಮಗೆ 1,035 ಎಕರೆ ಭೂಮಿ ದಾನ ನೀಡಿದ್ದಾರೆ. 1982ರಲ್ಲಿ ಸಚಿವರಾಗಿದ್ದ ಬಿ.ರಾಚಯ್ಯ ಕಾಲದಲ್ಲಿ ಸರ್ಕಾರ ಸಾಗುವಳಿ ಚೀಟಿ ನೀಡಿದೆ. ಈಗ ಪ್ರಮೋದಾದೇವಿ ಒಡೆಯರ್ ನಮ್ಮ ಊರಿನ ಸರ್ವೇ ನಂಬರ್​ಗಳನ್ನು ಉಲ್ಲೇಖಿಸಿ ಖಾತೆ ಮಾಡಿಕೊಡುವಂತೆ ಪತ್ರ ಬರೆದಿದ್ದಾರೆ ಎಂದು ಡಿಸಿ ಬಳಿ ಅವರು ಅಳಲು ತೋಡಿಕೊಂಡರು.

4000ಕ್ಕೂ ಹೆಚ್ಚು ಜನಸಂಖ್ಯೆ ಸಿದ್ದಯ್ಯನಪುರ ಗ್ರಾಮದಲ್ಲಿದ್ದು ಪ್ರಮೋದಾದೇವಿ ಅವರಿಗೆ ಖಾತೆ ಮಾಡಿಕೊಟ್ಟರೆ ಇಡೀ ಊರಿಗೆ ಊರೇ ಖಾಲಿ ಮಾಡಬೇಕಾಗುತ್ತದೆ. ಈ ಸಮಸ್ಯೆ ಬಗೆಹರಿಸಿ ಎಂದು ಕೇಳಿಕೊಂಡರು.

ಆತಂಕ ಬೇಡ ಎಂದ ಜಿಲ್ಲಾಧಿಕಾರಿ: ಮನವಿ ಪತ್ರ ಸ್ವೀಕರಿಸಿದ ಡಿಸಿ ಶಿಲ್ಪಾನಾಗ್ ಮಾತನಾಡಿ, "ಈಗಾಗಲೇ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ, ಸರ್ಕಾರಿ ಜಾಗ ಎಂದು ಖಚಿತಪಡಿಸಿಕೊಂಡು ಕಂದಾಯ ಗ್ರಾಮವಾಗಿ ಘೋಷಣೆ ಮಾಡಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದರೂ ಕೂಡ ಯಾವುದೇ ಪೂರಕ ದಾಖಲೆ ಲಗತ್ತಿಸಿಲ್ಲ, ನ್ಯಾಯಾಲಯದ ಆದೇಶವಿಲ್ಲ‌. ಆದ್ದರಿಂದ, ಯಾವುದೇ ಆತಂಕ ಬೇಡ. ನಿಮ್ಮ ಊರುಗಳು ಕಂದಾಯ ಗ್ರಾಮಗಳಾಗುವ ಹಂತದಲ್ಲಿದೆ" ಎಂದರು.

ಏನಿದು ಪತ್ರ ವಿವಾದ?: ಮೈಸೂರು ರಾಜಮನೆತನ ಇಂದಿಗೂ ಕೂಡ ಹಲವು ಆಸ್ತಿಗಳ ವಿವಾದ ಬಗೆಹರಿಸಲು ಪ್ರಯತ್ನಿಸುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಸ್ವತ್ತು ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಈಗ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನು ನಡೆಸದಂತೆ ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾ.27ರಂದು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಮೈಸೂರು ಮಹಾರಾಜರು ಮತ್ತು ಭಾರತ ಸರ್ಕಾರದ ನಡುವೆ 1950ರ ಜ.6ರಲ್ಲಿ ನಡೆದ ಒಪ್ಪಂದದ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ 4 ಸಾವಿರಕ್ಕೂ ಅಧಿಕ ಎಕರೆ ಮಹಾರಾಜರ ಖಾಸಗಿ ಸ್ವತ್ತಾಗಿದೆ. ಆದ್ದರಿಂದ ಈ ಸ್ವತ್ತುಗಳಲ್ಲಿ ಯಾವುದೇ ರೀತಿಯ ಕಂದಾಯ ಗ್ರಾಮ ಮಾಡದೇ ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜಮಾತೆ ಕೋರಿದ್ದರು.

ಇದನ್ನೂ ಓದಿ: ಆಸ್ತಿ ರಕ್ಷಣೆಗಾಗಿ ಚಾಮರಾಜನಗರ ಡಿಸಿಗೆ ಪತ್ರ ಬರೆದ ಪ್ರಮೋದಾದೇವಿ ಒಡೆಯರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.