ETV Bharat / state

ಹುಬ್ಬಳ್ಳಿ ಫ್ಲೈ ಓವರ್​ ಕಾಮಗಾರಿ: ಚನ್ನಮ್ಮ ವೃತ್ತದ ಪ್ರಮುಖ ರಸ್ತೆಗಳು 4 ತಿಂಗಳು ಬಂದ್, ಬದಲಿ ಮಾರ್ಗಗಳ ವಿವರ ಇಲ್ಲಿದೆ - HUBBALLI FLYOVER WORK

ಹುಬ್ಬಳ್ಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಮುಖ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಎಂದು ಡಿಸಿ ದಿವ್ಯಪ್ರಭು ಮನವಿ ಮಾಡಿದ್ದಾರೆ.

CHANNAMMA CIRCLE ROADS CLOSED FOR 4 MONTHS DUE TO HUBBALLI FLYOVER WORK
ಡಿಸಿ ದಿವ್ಯಪ್ರಭು (ETV Bharat)
author img

By ETV Bharat Karnataka Team

Published : April 9, 2025 at 7:29 PM IST

3 Min Read

ಹುಬ್ಬಳ್ಳಿ: ನಗರದಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಶೇ.50 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಮುಖ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದ್ದಾರೆ.

ಹುಬ್ಬಳ್ಳಿ ನಗರದಲ್ಲಿಂದು ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸರ್ಕ್ಯೂಟ್ ಹೌಸ್​ನಲ್ಲಿ ಅವರು ಮಾತನಾಡಿದರು.

ಡಿಸಿ ದಿವ್ಯಪ್ರಭು (ETV Bharat)

ಹುಬ್ಬಳ್ಳಿ ನಗರದಲ್ಲಿ 2022 ರಿಂದ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ವಿಜಯಪುರ ರಸ್ತೆಯ ಕಡೆಯಿಂದ (710 ಮೀ.), ಗದಗ ರಸ್ತೆಯಿಂದ (700 ಮೀ.), ಚೆನ್ನಮ್ಮ ವೃತ್ತದಿಂದ ಹೊಸೂರ ವೃತ್ತದವರೆಗೆ (850 ಮೀ.), ಗೋಕುಲ ರಸ್ತೆಯಲ್ಲಿ ಏರ್‌ಪೋರ್ಟ್ ಕಡೆಗೆ (689 ಮೀ.), ಧಾರವಾಡ ರಸ್ತೆ ಕಡೆಗೆ (310 ಮೀ.) ಹಾಗೂ 350 ಮೀ. ಸೇರಿ ಒಟ್ಟು 3.600 ಕಿ.ಮೀ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

channamma circle roads closed for 4 months due to hubballi flyover work
ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಡಿಸಿ ದಿವ್ಯಪ್ರಭು (ETV Bharat)

ಏಪ್ರಿಲ್​ 20 ರಿಂದ ಆಗಸ್ಟ್​ 19ರ ವರೆಗೆ ಸುಮಾರು 4 ತಿಂಗಳ ಕಾಲ ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ (500 ಮೀ.), ವಿಜಯಪುರ ರಸ್ತೆಯಲ್ಲಿ ಚನ್ನಮ್ಮ ವೃತ್ತದಿಂದ ಕೋರ್ಟ್ ವೃತ್ತದವರೆಗೆ (150 ಮೀ.) ಹಾಗೂ ಚನ್ನಮ್ಮ ವೃತ್ತದಲ್ಲಿ ಆಯ್ದ ಭಾಗಗಳಲ್ಲಿ ಪಿಲ್ಲರ್ ಕಾಮಗಾರಿಗಳಿಗೆ ಬ್ಯಾರಿಕೇಡ್​ ಹಾಕಲು ಚನ್ನಮ್ಮ ವೃತ್ತಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುವುದು ಎಂದು ಹೇಳಿದರು.

channamma circle roads closed for 4 months due to hubballi flyover work
ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಡಿಸಿ ದಿವ್ಯಪ್ರಭು (ETV Bharat)

ಚೆನ್ನಮ್ಮ ವೃತ್ತದಿಂದ ಬಸವವನದವರೆಗೆ ಹಾಗೂ ವಿಜಯಪುರ ರಸ್ತೆಯಲ್ಲಿ 80 ಗಿರ್ಡರ್ ಹಾಗೂ 16 ಸ್ಲಾಬ್‌‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಚನ್ನಮ್ಮ ವೃತ್ತದಲ್ಲಿ ರೋಟರಿ ಕಾಮಗಾರಿಗಾಗಿ ಪೋರ್ಟ್‌ಲ್ ಕ್ಯಾಪ್ ಹಾಗೂ 8 ಪಿಲ್ಲರ್​ಗಳ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಸರ್ವಸಿದ್ಧತೆಯನ್ನು ಮಾಡಿಕೊಂಡಿದೆ ಎಂದರು.

4 ತಿಂಗಳ ಕಾಲ ನಗರ ಸಾರಿಗೆ ನಿಲ್ದಾಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಐಟಿ ಪಾರ್ಕ್ ಹತ್ತಿರದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಅಲ್ಲದೇ ಉಪ ನಗರ ಬಸ್ ನಿಲ್ದಾಣವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ನಿರ್ವಹಣೆ ಹಾಗೂ ರಕ್ಷಣೆ ಮಾಡಬೇಕು. ವಿಜಯಪುರ ಮತ್ತು ಗದಗ ಹಾಗೂ ಉಳಿದ ಪ್ರದೇಶದಿಂದ ಬರುವ ಬಸ್​ಗಳಿಗೆ ಕಾರವಾರ ರಸ್ತೆ, ಸಿ.ಬಿ.ಟಿ. ಹಾಗೂ ಹೊಸೂರು ಬಸ್‌ ನಿಲ್ದಾಣಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಟ್ರಾಫಿಕ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್​ ಘಾಳಿ, ಡಿಸಿಪಿ ರವೀಶ್​ ಸಿ.ಆರ್., ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧೀಕ್ಷಕ ಅಭಿಯಂತರರಾದ ಟಿ.ಪ್ರದೀಪ್​ ಈ ವೇಳೆ ಇದ್ದರು.

ಧಾರವಾಡದಿಂದ ವಿಜಯಪುರ ಮತ್ತು ಗದಗಗೆ ಹೋಗುವ ಮಾರ್ಗ: ಹೊಸೂರು ವೃತ್ತದಿಂದ ಕಾಟನ್​ ಮಾರ್ಕೆಟ್, ಶಾರದಾ ಹೋಟೆಲ್, ದೇಸಾಯಿ ವೃತ್ತದ ಮೂಲಕ ಪಿಂಟೋ ವೃತ್ತ ಅಥವಾ ಕೋರ್ಟ್​ ವೃತ್ತದ ಮೂಲಕ ಗದಗ ಹಾಗೂ ವಿಜಯಪುರಕ್ಕೆ ಸಂಚರಿಸಬಹುದಾಗಿದೆ ಅಥವಾ ಹೊಸೂರು ವೃತ್ತದಿಂದ ಕಾಟನ್​ ಮಾರ್ಕೆಟ್, ನೀಲಿಜಿನ ರಸ್ತೆ, ಚನ್ನಮ್ಮ ವೃತ್ತ, ಸರ್. ಸಿದ್ದಪ್ಪ ಕಂಬಳಿ ರಸ್ತೆ ಮೂಲಕವಾಗಿಯೂ ಸಹ ಗದಗ ಹಾಗೂ ಸಿ.ಬಿ.ಟಿಗೆ ಸಂಚರಿಸಬಹುದಾಗಿದೆ.

ವಿಜಯಪುರದಿಂದ ಧಾರವಾಡ ಹೋಗುವ ಮಾರ್ಗ: ಸರ್ವೋದಯ ವೃತ್ತದಿಂದ ಡಿ.ಆರ್.ಎಮ್ ಆಫೀಸ್, ಸ್ಟೇಷನ್​ ರಸ್ತೆ, ಚನ್ನಮ್ಮ ವೃತ್ತ ಕಾರವಾರ ರಸ್ತೆ ಭಾರತ ಮಿಲ್ ವೃತ್ತ ಮತ್ತು ವಾಣಿ ವಿಲಾಸ ವೃತ್ತದ ಮೂಲಕ ಧಾರವಾಡಕ್ಕೆ ಸಂಚರಿಸಬಹುದಾಗಿದೆ.

ಗದಗದಿಂದ ಧಾರವಾಡ ಹೋಗುವ ಮಾರ್ಗ: ಸ್ಟೇಷನ್​ ರಸ್ತೆ, ಚನ್ನಮ್ಮ ವೃತ್ತ, ಕಾರವಾರ ರಸ್ತೆ, ಭಾರತ ಮಿಲ್ ವೃತ್ತ ಮತ್ತು ವಾಣಿ ವಿಲಾಸ ವೃತ್ತದ ಮೂಲಕ ಧಾರವಾಡಕ್ಕೆ ಸಂಚರಿಸಬಹುದಾಗಿದೆ.

ನೀಲಿಜಿನ ರಸ್ತೆ: ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನೀಲಿಜಿನ ರಸ್ತೆಯನ್ನು ಕೇವಲ ವಾಯುವ್ಯ ಸಾರಿಗೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಇಲ್ಲಿ ಲಘು ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಉಪನಗರ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲು ಪ್ರಸ್ತಾಪಿತ ಮಾರ್ಗ: ಹೊಸೂರು ಸರ್ಕಲ್, ಕಾಟನ್ ಮಾರ್ಕೆಟ್ ರಸ್ತೆ, ಸಾಂಸ್ಕೃತಿಕ ಭವನ ಮುಂಚೆ ಬರುವ ಬಲ ತಿರುವು, ಉತ್ತರ ಸಂಚಾರ ಪೊಲೀಸ್​ ಠಾಣೆ ಪಕ್ಕದ ಬಲ ತಿರುವು, ಆಟೋ ಹೌಸ್ ಬಳಿ ಬಲ ತಿರುವು ಪಡೆದು, ಗ್ಲಾಸ್ ಹೌಸ್ ಕಂಪೌಂಡ್ ಪಕ್ಕದಲ್ಲಿರುವ ಬಸ್ ನಿಲುಗಡೆ ಮುಖಾಂತರ ಮರಳಿ ಹೊಸೂರು ಸರ್ಕಲ್ ತೆರಳುವುದು. ಈ ಸಂಪೂರ್ಣ ರಸ್ತೆಯನ್ನು ಉಪನಗರ ಸಾರಿಗೆ ನಿಲುಗಡೆ ಮತ್ತು ಕಾರ್ಯಾಚರಣೆ ಮಾಡಲಿದೆ. ಕಮರಿಪೇಟ ಪೊಲೀಸ್​ ಠಾಣೆಯಿಂದ ಚೆನ್ನಮ್ಮ ಸರ್ಕಲ್‌ಗೆ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಪಂಬನ್ ಸೇತುವೆ ಉದ್ಘಾಟನೆ: ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ಎಕ್ಸ್​​ಪ್ರೆಸ್ ರೈಲು ಪುನಾರಂಭ

ಇದನ್ನೂ ಓದಿ: ಹುಬ್ಬಳ್ಳಿ, ಬೆಳಗಾವಿ ಏರ್​ಪೋರ್ಟ್​​ ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಕೇಂದ್ರಕ್ಕೆ ಪತ್ರ ಬರೆಯಲು ಸೂಚನೆ

ಹುಬ್ಬಳ್ಳಿ: ನಗರದಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಶೇ.50 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಪ್ರಮುಖ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದ್ದಾರೆ.

ಹುಬ್ಬಳ್ಳಿ ನಗರದಲ್ಲಿಂದು ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿಯನ್ನು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸರ್ಕ್ಯೂಟ್ ಹೌಸ್​ನಲ್ಲಿ ಅವರು ಮಾತನಾಡಿದರು.

ಡಿಸಿ ದಿವ್ಯಪ್ರಭು (ETV Bharat)

ಹುಬ್ಬಳ್ಳಿ ನಗರದಲ್ಲಿ 2022 ರಿಂದ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ವಿಜಯಪುರ ರಸ್ತೆಯ ಕಡೆಯಿಂದ (710 ಮೀ.), ಗದಗ ರಸ್ತೆಯಿಂದ (700 ಮೀ.), ಚೆನ್ನಮ್ಮ ವೃತ್ತದಿಂದ ಹೊಸೂರ ವೃತ್ತದವರೆಗೆ (850 ಮೀ.), ಗೋಕುಲ ರಸ್ತೆಯಲ್ಲಿ ಏರ್‌ಪೋರ್ಟ್ ಕಡೆಗೆ (689 ಮೀ.), ಧಾರವಾಡ ರಸ್ತೆ ಕಡೆಗೆ (310 ಮೀ.) ಹಾಗೂ 350 ಮೀ. ಸೇರಿ ಒಟ್ಟು 3.600 ಕಿ.ಮೀ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

channamma circle roads closed for 4 months due to hubballi flyover work
ಪ್ರಗತಿಯಲ್ಲಿರುವ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಡಿಸಿ ದಿವ್ಯಪ್ರಭು (ETV Bharat)

ಏಪ್ರಿಲ್​ 20 ರಿಂದ ಆಗಸ್ಟ್​ 19ರ ವರೆಗೆ ಸುಮಾರು 4 ತಿಂಗಳ ಕಾಲ ಚನ್ನಮ್ಮ ವೃತ್ತದಿಂದ ಬಸವ ವನದವರೆಗೆ (500 ಮೀ.), ವಿಜಯಪುರ ರಸ್ತೆಯಲ್ಲಿ ಚನ್ನಮ್ಮ ವೃತ್ತದಿಂದ ಕೋರ್ಟ್ ವೃತ್ತದವರೆಗೆ (150 ಮೀ.) ಹಾಗೂ ಚನ್ನಮ್ಮ ವೃತ್ತದಲ್ಲಿ ಆಯ್ದ ಭಾಗಗಳಲ್ಲಿ ಪಿಲ್ಲರ್ ಕಾಮಗಾರಿಗಳಿಗೆ ಬ್ಯಾರಿಕೇಡ್​ ಹಾಕಲು ಚನ್ನಮ್ಮ ವೃತ್ತಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುವುದು ಎಂದು ಹೇಳಿದರು.

channamma circle roads closed for 4 months due to hubballi flyover work
ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಡಿಸಿ ದಿವ್ಯಪ್ರಭು (ETV Bharat)

ಚೆನ್ನಮ್ಮ ವೃತ್ತದಿಂದ ಬಸವವನದವರೆಗೆ ಹಾಗೂ ವಿಜಯಪುರ ರಸ್ತೆಯಲ್ಲಿ 80 ಗಿರ್ಡರ್ ಹಾಗೂ 16 ಸ್ಲಾಬ್‌‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಚನ್ನಮ್ಮ ವೃತ್ತದಲ್ಲಿ ರೋಟರಿ ಕಾಮಗಾರಿಗಾಗಿ ಪೋರ್ಟ್‌ಲ್ ಕ್ಯಾಪ್ ಹಾಗೂ 8 ಪಿಲ್ಲರ್​ಗಳ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಸರ್ವಸಿದ್ಧತೆಯನ್ನು ಮಾಡಿಕೊಂಡಿದೆ ಎಂದರು.

4 ತಿಂಗಳ ಕಾಲ ನಗರ ಸಾರಿಗೆ ನಿಲ್ದಾಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಐಟಿ ಪಾರ್ಕ್ ಹತ್ತಿರದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಅಲ್ಲದೇ ಉಪ ನಗರ ಬಸ್ ನಿಲ್ದಾಣವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ನಿರ್ವಹಣೆ ಹಾಗೂ ರಕ್ಷಣೆ ಮಾಡಬೇಕು. ವಿಜಯಪುರ ಮತ್ತು ಗದಗ ಹಾಗೂ ಉಳಿದ ಪ್ರದೇಶದಿಂದ ಬರುವ ಬಸ್​ಗಳಿಗೆ ಕಾರವಾರ ರಸ್ತೆ, ಸಿ.ಬಿ.ಟಿ. ಹಾಗೂ ಹೊಸೂರು ಬಸ್‌ ನಿಲ್ದಾಣಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಟ್ರಾಫಿಕ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್​ ಘಾಳಿ, ಡಿಸಿಪಿ ರವೀಶ್​ ಸಿ.ಆರ್., ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧೀಕ್ಷಕ ಅಭಿಯಂತರರಾದ ಟಿ.ಪ್ರದೀಪ್​ ಈ ವೇಳೆ ಇದ್ದರು.

ಧಾರವಾಡದಿಂದ ವಿಜಯಪುರ ಮತ್ತು ಗದಗಗೆ ಹೋಗುವ ಮಾರ್ಗ: ಹೊಸೂರು ವೃತ್ತದಿಂದ ಕಾಟನ್​ ಮಾರ್ಕೆಟ್, ಶಾರದಾ ಹೋಟೆಲ್, ದೇಸಾಯಿ ವೃತ್ತದ ಮೂಲಕ ಪಿಂಟೋ ವೃತ್ತ ಅಥವಾ ಕೋರ್ಟ್​ ವೃತ್ತದ ಮೂಲಕ ಗದಗ ಹಾಗೂ ವಿಜಯಪುರಕ್ಕೆ ಸಂಚರಿಸಬಹುದಾಗಿದೆ ಅಥವಾ ಹೊಸೂರು ವೃತ್ತದಿಂದ ಕಾಟನ್​ ಮಾರ್ಕೆಟ್, ನೀಲಿಜಿನ ರಸ್ತೆ, ಚನ್ನಮ್ಮ ವೃತ್ತ, ಸರ್. ಸಿದ್ದಪ್ಪ ಕಂಬಳಿ ರಸ್ತೆ ಮೂಲಕವಾಗಿಯೂ ಸಹ ಗದಗ ಹಾಗೂ ಸಿ.ಬಿ.ಟಿಗೆ ಸಂಚರಿಸಬಹುದಾಗಿದೆ.

ವಿಜಯಪುರದಿಂದ ಧಾರವಾಡ ಹೋಗುವ ಮಾರ್ಗ: ಸರ್ವೋದಯ ವೃತ್ತದಿಂದ ಡಿ.ಆರ್.ಎಮ್ ಆಫೀಸ್, ಸ್ಟೇಷನ್​ ರಸ್ತೆ, ಚನ್ನಮ್ಮ ವೃತ್ತ ಕಾರವಾರ ರಸ್ತೆ ಭಾರತ ಮಿಲ್ ವೃತ್ತ ಮತ್ತು ವಾಣಿ ವಿಲಾಸ ವೃತ್ತದ ಮೂಲಕ ಧಾರವಾಡಕ್ಕೆ ಸಂಚರಿಸಬಹುದಾಗಿದೆ.

ಗದಗದಿಂದ ಧಾರವಾಡ ಹೋಗುವ ಮಾರ್ಗ: ಸ್ಟೇಷನ್​ ರಸ್ತೆ, ಚನ್ನಮ್ಮ ವೃತ್ತ, ಕಾರವಾರ ರಸ್ತೆ, ಭಾರತ ಮಿಲ್ ವೃತ್ತ ಮತ್ತು ವಾಣಿ ವಿಲಾಸ ವೃತ್ತದ ಮೂಲಕ ಧಾರವಾಡಕ್ಕೆ ಸಂಚರಿಸಬಹುದಾಗಿದೆ.

ನೀಲಿಜಿನ ರಸ್ತೆ: ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನೀಲಿಜಿನ ರಸ್ತೆಯನ್ನು ಕೇವಲ ವಾಯುವ್ಯ ಸಾರಿಗೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಇಲ್ಲಿ ಲಘು ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಉಪನಗರ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲು ಪ್ರಸ್ತಾಪಿತ ಮಾರ್ಗ: ಹೊಸೂರು ಸರ್ಕಲ್, ಕಾಟನ್ ಮಾರ್ಕೆಟ್ ರಸ್ತೆ, ಸಾಂಸ್ಕೃತಿಕ ಭವನ ಮುಂಚೆ ಬರುವ ಬಲ ತಿರುವು, ಉತ್ತರ ಸಂಚಾರ ಪೊಲೀಸ್​ ಠಾಣೆ ಪಕ್ಕದ ಬಲ ತಿರುವು, ಆಟೋ ಹೌಸ್ ಬಳಿ ಬಲ ತಿರುವು ಪಡೆದು, ಗ್ಲಾಸ್ ಹೌಸ್ ಕಂಪೌಂಡ್ ಪಕ್ಕದಲ್ಲಿರುವ ಬಸ್ ನಿಲುಗಡೆ ಮುಖಾಂತರ ಮರಳಿ ಹೊಸೂರು ಸರ್ಕಲ್ ತೆರಳುವುದು. ಈ ಸಂಪೂರ್ಣ ರಸ್ತೆಯನ್ನು ಉಪನಗರ ಸಾರಿಗೆ ನಿಲುಗಡೆ ಮತ್ತು ಕಾರ್ಯಾಚರಣೆ ಮಾಡಲಿದೆ. ಕಮರಿಪೇಟ ಪೊಲೀಸ್​ ಠಾಣೆಯಿಂದ ಚೆನ್ನಮ್ಮ ಸರ್ಕಲ್‌ಗೆ ಬರುವ ವಾಹನಗಳನ್ನು ನಿರ್ಬಂಧಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಪಂಬನ್ ಸೇತುವೆ ಉದ್ಘಾಟನೆ: ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ಎಕ್ಸ್​​ಪ್ರೆಸ್ ರೈಲು ಪುನಾರಂಭ

ಇದನ್ನೂ ಓದಿ: ಹುಬ್ಬಳ್ಳಿ, ಬೆಳಗಾವಿ ಏರ್​ಪೋರ್ಟ್​​ ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಕೇಂದ್ರಕ್ಕೆ ಪತ್ರ ಬರೆಯಲು ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.