ETV Bharat / state

ಲೋಕಸಭೆಗೆ ಹಾವೇರಿ ಟಿಕೆಟ್ ಆಕಾಂಕ್ಷಿಯಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

author img

By ETV Bharat Karnataka Team

Published : Feb 17, 2024, 10:36 PM IST

ಲೋಕಸಭೆಗೆ ಹಾವೇರಿ ಟಿಕೆಟ್ ಆಕಾಂಕ್ಷಿಯಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಲೋಕಸಭೆಗೆ ಹಾವೇರಿ ಟಿಕೆಟ್ ಆಕಾಂಕ್ಷಿಯಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ ಲೋಕಸಭೆ ಚುನಾವಣೆ ಟಿಕೆಟ್​ ಆಕಾಂಕ್ಷಿ ಅಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರು/ನವದೆಹಲಿ: ನಾನು ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು.

ನಂತರ ಲೋಕಸಭಾ ಟಿಕೆಟ್​ ಆಕಾಂಕ್ಷಿ ಬಗ್ಗೆ ಪ್ರತಿಕ್ರಿಯಿಸಿ, ಹಾವೇರಿ ಲೋಕಸಭಾ ಟಿಕೆಟ್​ಗೆ ನಾನು ಯಾವುದೇ ಆಕಾಂಕ್ಷೆಯನ್ನು ಇಟ್ಟುಕೊಂಡಿಲ್ಲ. ಹಿಂದೆಯೂ ನಾನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು. ಹೈಕಮಾಂಡ್ ನಾಯಕರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ನಾವು ಕೆಲಸವನ್ನು ಮಾಡುತ್ತೇವೆ. ಈಗಾಗಲೇ ಹಾವೇರಿ ಮತ್ತು ಗದಗನ ಬಿಜೆಪಿಯ ನಾಯಕರ ಜೊತೆಗೆ ಸಭೆ ಮಾಡಲಾಗಿದೆ ಎಂದರು. ಶಿವಕುಮಾರ್ ಉದಾಸಿಯನ್ನು ಮತ್ತೊಮ್ಮೆ ಮನವೊಲಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಅವರು ಈ ಬಾರಿ ಸ್ಪರ್ಧಿಸಲ್ಲವೆಂದು ಗಟ್ಟಿ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.

ನಂತರ ಕಾರ್ಯಕಾರಿಣಿ ಸಭೆ ಬಗ್ಗೆ ಮಾತನಾಡಿ, ಈ ಸಭೆಯಲ್ಲೇ ಸುಮಾರು 10,000ಕ್ಕೂ ಹೆಚ್ಚಿನ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಇದು ಪಕ್ಷದ ಬೆಳವಣಿಗೆಯನ್ನು ಎತ್ತಿ ತೋರಿಸುತ್ತದೆ. ಈ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಕಾರ್ಯತಂತ್ರದ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದರು.

ಬಳಿಕ ಕಾಂಗ್ರೆಸ್​ನ ಅಜೆಂಡಾ ಕೇವಲ ಮೋದಿಯನ್ನು ನಿಂದಿಸುವುದಾಗಿದೆ ಎಂಬ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್​ ನವರು ಮೋದಿಯನ್ನು ದೂರುವುದರಲ್ಲೇ ತಮ್ಮೆಲ್ಲ ಶ್ರಮ ಮತ್ತು ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಉಪಯೋಗವಾಗಲ್ಲ. ಜನ ಎಲ್ಲವನ್ನು ನೋಡುತ್ತಿದ್ದಾರೆ. ಅಲ್ಲದೇ ಈ ಬಾರಿ ಮೋದಿ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರನ್ನು ಹೆದರಿಸುವ ಕೆಲಸವನ್ನು ಮಾಡುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮೋದಿ, ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಭ್ರಷ್ಟಾಚಾರ ಮಾಡಿದ್ದರೆ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದರೆ ಅಥವಾ ಜನ ಸಾಮಾನ್ಯರ ಹಣ ದೋಚಿದ್ದರೆ ಅಂತವರು ವಿಚಾರಣೆಗೆ ಒಳಪಡುತ್ತಾರೆ. ಅವರು ತಪ್ಪು ಮಾಡಿದ್ದರಿಂದಲೇ ತಪ್ಪಿಸಿಕೊಳ್ಳಲು ನೋಡುತ್ತಿದ್ದಾರೆ. ಅಲ್ಲದೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ದೆಹಲಿ ತಲುಪಿದ ಕಾಂಗ್ರೆಸ್​ ಕಟ್ಟಾಳು ಕಮಲ್ ನಾಥ್; ಬಿಜೆಪಿ ಸೇರುವ ವದಂತಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.