ಚಿಕ್ಕಮಗಳೂರು: ಟ್ವಿಟ್ಟರ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಹಾಗು ಸಿಎಂ ವಿರುದ್ಧ ಟ್ವೀಟ್ ಮಾಡಿದ್ದ ಪಾಂಡು ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ, ಕಾಂಗ್ರೆಸ್ ಮುಖಂಡರು ಚಿಕ್ಕಮಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದರು.
ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ವೋಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂ ಓಲೈಕೆ ಕುರಿತು ಬಿಜೆಪಿಗರ ಟೀಕೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿಕೆ ನೀಡಿರುವಂತೆ ನಕಲಿ ಪತ್ರಿಕೆಯ ಸುದ್ದಿಯನ್ನು ಟ್ವಿಟ್ಟರ್ಗೆ ಹಾಕಿ ಅಪಪ್ರಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ವಿರುದ್ಧ ನಕಲಿ ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲು - Fake News Against CM