ETV Bharat / state

ಎಚ್‌.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ - REVANNA ANTICIPATORY BAIL PLEA

author img

By ETV Bharat Karnataka Team

Published : May 4, 2024, 12:23 PM IST

ಎಚ್‌.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ
ಎಚ್‌.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ (ETV Bharat)

ಎಚ್​.ಡಿ.ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನಕ್ಕೆ ಮುಂದೂಡಿದೆ.

ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮಧ್ಯಾಹ್ನ 2.45ಕ್ಕೆ ಮೂಂದೂಡಿದೆ‌.

ಕೆ.ಆರ್‌.ನಗರ‌ ಪೊಲೀಸ್ ಠಾಣೆಯಲ್ಲಿ ಎಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುತ್ತಿದ್ದಂತೆ ವಾದ ಆರಂಭಿಸಿದ ಎಸ್ಐಟಿ ತಂಡದ ಪರ ವಕೀಲ ಬಿ‌.ಎನ್‌.ಜಗದೀಶ್, ನಿರೀಕ್ಷಣಾ ಜಾಮೀನು ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಮಾಯಾಕಾಶ ನೀಡಬೇಕು. ಅಪಹರಣ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ಆತನಿಂದ ಕೆಲ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಬೇಕು ಹೀಗಾಗಿ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ರೇವಣ್ಣ ಪರ ವಕೀಲ ಮೂರ್ತಿ ನಾಯಕ್, ಆಕ್ಷೇಪಣೆ ಸಲ್ಲಿಸಲು ಸಮಯಾಕಾಶ ನೀಡುವುದು ಸರಿಯಲ್ಲ ಐಪಿಸಿ 41 ಅಡಿ ನೊಟೀಸ್ ನೀಡಲಾಗಿದೆ. ಇಂದು‌ ಸಂಜೆ 5.30ರೊಳಗೆ ವಿಚಾರಣೆಗೆ ಹಾಜರಾಗಬೇಕಿದೆ. ಅಪಹರಣ ಆರೋಪಕ್ಕೆ ಸಂಬಂಧಿದಂತೆ ಉಲ್ಲೇಖಿಸಿರುವ ಎಫ್ಐಆರ್​ನಲ್ಲಿ ರೇವಣ್ಣ ಅವರೇ‌ ಕಿಡ್ನ್ಯಾಪ್ ಮಾಡಿದ್ದಾರೆ ಎಂದು ನಮೂದಿಸಿಲ್ಲ. ಈ ಪ್ರಕರಣದಲ್ಲಿ ರಕ್ಷಣೆ ಬೇಕಿದೆ ಎಂದು ವಾದಿಸಿದರು‌. ವಾದ - ಪ್ರತಿವಾದ ಆಲಿಸಿದ ನ್ಯಾಯಾಲಯವು ಎಸ್ಐಟಿಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ಮಧ್ಯಾಹ್ನ 2.45ಕ್ಕೆ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಎಫ್ಐಆರ್: ಸಂತ್ರಸ್ತೆಯ ದೂರಿನನ್ವಯ ಪ್ರಕರಣ ದಾಖಲಿಸಿದ ಸಿಐಡಿ - Hassan Video Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.