ETV Bharat / state

ಕೊಪ್ಪಳ: ಅಕಾಲಿಕ ಮಳೆಗೆ ಬೆಳೆ ಹಾನಿ, ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ - CROP DAMAGE

ಅಕಾಲಿಕ ಮಳೆಗೆ ಕೊಪ್ಪಳ ಜಿಲ್ಲೆಯಲ್ಲಿ ಭತ್ತ, ಪಪ್ಪಾಯಿ, ಮೆಕ್ಕೆ ಜೋಳ ಬೆಳೆ ನಾಶವಾಗಿದೆ. ಇದರಿಂದ ಸರ್ಕಾರ ಸೂಕ್ತ ಪರಿಹಾರ ಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.

CROP DAMAGE
ಅಕಾಲಿಕ ಮಳೆಗೆ ಬೆಳೆ ಹಾನಿ (ETV Bharat)
author img

By ETV Bharat Karnataka Team

Published : April 19, 2025 at 8:07 PM IST

1 Min Read

ಕೊಪ್ಪಳ: ಕಳೆದ ಗುರುವಾರ ಸುರಿದ ಅಕಾಲಿಕ ಮಳೆಗೆ ಭತ್ತ, ಪಪ್ಪಾಯಿ, ಮೆಕ್ಕೆಜೋಳ ಬೆಳೆ ನಾಶವಾಗಿದೆ. 80 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆ ಜೋಳ, 285 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಸರ್ಕಾರ ಸೂಕ್ತ ಪರಿಹಾರ ಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಗಂಗಾವತಿ, ಕಾರಟಗಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾಗದಲ್ಲಿ ಸುಮಾರು 12,722 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಶಿವರಾಜ್ ತಂಗಡಗಿ, ಪರಿಹಾರ ನೀಡುವುದಾಗಿ ರೈತರಿಗೆ ಭರವಸೆ ನೀಡಿದರು.

ಚುಕ್ಕನಕಲ್ ರೈತ ಪ್ರಕಾಶ ಮಾತನಾಡಿ, "ಗಾಳಿ ಮಳೆಗೆ ಬಾಳೆ ಬೆಳೆಗೆ ಹಾನಿಯಾಗಿದೆ. ಇದರಿಂದ ಎರಡು ಲಕ್ಷ ರೂಪಾಯಿ ನಷ್ಟವಾಗಿದೆ. ನಮ್ಮ ಗ್ರಾಮದಲ್ಲಿ ಮೆಕ್ಕೆ ಜೋಳಕ್ಕೆ ಹಾನಿಯಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು" ಎಂದು ಮನವಿ ಮಾಡಿದರು.

ಅಕಾಲಿಕ ಮಳೆಗೆ ಬೆಳೆ ಹಾನಿ (ETV Bharat)

ಸಚಿವ ಶಿವರಾಜ್ ತಂಗಡಗಿ ಮಾತನಾಡಿ, "ಕಾರಟಗಿ ತಾಲೂಕಿನಲ್ಲಿ ಅತೀ ಹೆಚ್ಚು ಬೆಳೆ ನಾಶವಾಗಿದೆ. 12 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದು ಬೆಳೆ ಹಾನಿಯಾಗಿದೆ. ಕಾರಟಗಿಯಲ್ಲಿ ಒಟ್ಟಾರೆ 4,895 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 12,722 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ" ಎಂದು ತಿಳಿಸಿದರು.

ಮಾಜಿ ಶಾಸಕ ಬಸವರಾಜ ದಡೇಸಗೂರ ಮಾತನಾಡಿ, "ಬಿಜೆಪಿ ಸರ್ಕಾರದ ಅವಧಿಯಲ್ಲಿ ಭತ್ತ ಹಾನಿಯಾದಾಗ 62 ಕೋಟಿ ರೂಪಾಯಿ ಪರಿಹಾರ ನೀಡಿತ್ತು. ಅಂದು ಯಾವುದೇ ಕ್ಯಾಬಿನೆಟ್ ನೆಪ ಹೇಳದೆ ಸರ್ಕಾರ ಹಣ ನೀಡಿತ್ತು. ಆದರೆ, ಇದೀಗ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ. ಕೂಡಲೇ ಪರಿಹಾರ ನೀಡಬೇಕೆಂದು" ಆಗ್ರಹಿಸಿದರು.

ಇದನ್ನೂ ಓದಿ: ಅಕಾಲಿಕ ಧಾರಾಕಾರ ಆಲಿಕಲ್ಲು ಮಳೆಗೆ 10 ಸಾವಿರ ಹೆಕ್ಟೇರ್ ಪ್ರದೇಶ, 110 ಕೋಟಿ ಮೊತ್ತದ ಬೆಳೆ ಹಾನಿ

ಇದನ್ನೂ ಓದಿ: ಕೊಪ್ಪಳದಲ್ಲಿ ಬಿರುಗಾಳಿ ಸಹಿತ ಮಳೆ: ಸಿಡಿಲು ಬಡಿದು ಇಬ್ಬರು ಸಾವು

ಕೊಪ್ಪಳ: ಕಳೆದ ಗುರುವಾರ ಸುರಿದ ಅಕಾಲಿಕ ಮಳೆಗೆ ಭತ್ತ, ಪಪ್ಪಾಯಿ, ಮೆಕ್ಕೆಜೋಳ ಬೆಳೆ ನಾಶವಾಗಿದೆ. 80 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆ ಜೋಳ, 285 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಸರ್ಕಾರ ಸೂಕ್ತ ಪರಿಹಾರ ಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಗಂಗಾವತಿ, ಕಾರಟಗಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾಗದಲ್ಲಿ ಸುಮಾರು 12,722 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಶಿವರಾಜ್ ತಂಗಡಗಿ, ಪರಿಹಾರ ನೀಡುವುದಾಗಿ ರೈತರಿಗೆ ಭರವಸೆ ನೀಡಿದರು.

ಚುಕ್ಕನಕಲ್ ರೈತ ಪ್ರಕಾಶ ಮಾತನಾಡಿ, "ಗಾಳಿ ಮಳೆಗೆ ಬಾಳೆ ಬೆಳೆಗೆ ಹಾನಿಯಾಗಿದೆ. ಇದರಿಂದ ಎರಡು ಲಕ್ಷ ರೂಪಾಯಿ ನಷ್ಟವಾಗಿದೆ. ನಮ್ಮ ಗ್ರಾಮದಲ್ಲಿ ಮೆಕ್ಕೆ ಜೋಳಕ್ಕೆ ಹಾನಿಯಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು" ಎಂದು ಮನವಿ ಮಾಡಿದರು.

ಅಕಾಲಿಕ ಮಳೆಗೆ ಬೆಳೆ ಹಾನಿ (ETV Bharat)

ಸಚಿವ ಶಿವರಾಜ್ ತಂಗಡಗಿ ಮಾತನಾಡಿ, "ಕಾರಟಗಿ ತಾಲೂಕಿನಲ್ಲಿ ಅತೀ ಹೆಚ್ಚು ಬೆಳೆ ನಾಶವಾಗಿದೆ. 12 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದು ಬೆಳೆ ಹಾನಿಯಾಗಿದೆ. ಕಾರಟಗಿಯಲ್ಲಿ ಒಟ್ಟಾರೆ 4,895 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 12,722 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ" ಎಂದು ತಿಳಿಸಿದರು.

ಮಾಜಿ ಶಾಸಕ ಬಸವರಾಜ ದಡೇಸಗೂರ ಮಾತನಾಡಿ, "ಬಿಜೆಪಿ ಸರ್ಕಾರದ ಅವಧಿಯಲ್ಲಿ ಭತ್ತ ಹಾನಿಯಾದಾಗ 62 ಕೋಟಿ ರೂಪಾಯಿ ಪರಿಹಾರ ನೀಡಿತ್ತು. ಅಂದು ಯಾವುದೇ ಕ್ಯಾಬಿನೆಟ್ ನೆಪ ಹೇಳದೆ ಸರ್ಕಾರ ಹಣ ನೀಡಿತ್ತು. ಆದರೆ, ಇದೀಗ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ. ಕೂಡಲೇ ಪರಿಹಾರ ನೀಡಬೇಕೆಂದು" ಆಗ್ರಹಿಸಿದರು.

ಇದನ್ನೂ ಓದಿ: ಅಕಾಲಿಕ ಧಾರಾಕಾರ ಆಲಿಕಲ್ಲು ಮಳೆಗೆ 10 ಸಾವಿರ ಹೆಕ್ಟೇರ್ ಪ್ರದೇಶ, 110 ಕೋಟಿ ಮೊತ್ತದ ಬೆಳೆ ಹಾನಿ

ಇದನ್ನೂ ಓದಿ: ಕೊಪ್ಪಳದಲ್ಲಿ ಬಿರುಗಾಳಿ ಸಹಿತ ಮಳೆ: ಸಿಡಿಲು ಬಡಿದು ಇಬ್ಬರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.