ETV Bharat / state

'ಮೋದಿ, ಮನಮೋಹನ್ ಸಿಂಗ್​ ಅವಧಿಯ ತೆರಿಗೆ ಹಣ ಬಿಡುಗಡೆ ಕುರಿತು ಶ್ವೇತಪತ್ರ ಹೊರಡಿಸಲಿ'

author img

By ETV Bharat Karnataka Team

Published : Feb 5, 2024, 10:38 PM IST

Updated : Feb 5, 2024, 11:00 PM IST

Former MLA CT Ravi spoke to the media.
ಮಾಜಿ ಶಾಸಕ ಸಿ ಟಿ ರವಿ ಮಾಧ್ಯಮದವರ ಜೊತೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಒಂದು ದಿನವೂ ಜಿಎಸ್‍ಟಿ ಕೌನ್ಸಿಲ್ ಮೀಟಿಂಗ್​ಗೆ ಹೋಗಲಿಲ್ಲ. ಅನ್ಯಾಯ ಆಗಿದ್ರೆ ಜಿಎಸ್‍ಟಿ ಮೀಟಿಂಗ್‍ನಲ್ಲಿ ಪ್ರಶ್ನಿಸಿ ನ್ಯಾಯ ಕೇಳಬಹುದಿತ್ತು ಎಂದು ಸಿ.ಟಿ.ರವಿ ಹೇಳಿದರು.

ಮಾಜಿ ಸಚಿವ ಸಿ.ಟಿ.ರವಿ ಮಾಧ್ಯಮದವರ ಜೊತೆ ಮಾತನಾಡಿದರು.

ಚಿಕ್ಕಮಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. ಈ ಬಗ್ಗೆ ದಾಖಲೆಸಮೇತ ಶ್ವೇತಪತ್ರ ಹೊರಡಿಸಲಿ ಎಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಸವಾಲು ಹಾಕಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಕಾಲದಲ್ಲಿ ರಾಜ್ಯಕ್ಕೆ ಎಷ್ಟು ತೆರಿಗೆ ಹಣ ಬಂದಿದೆ, 2004-2014ರವರೆಗೆ ಎಷ್ಟು ತೆರಿಗೆ ಹಣ ಬಂದಿದೆ ಹಾಗೂ 2014-2024 ಫೆಬ್ರವರಿವರೆಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ತೆರಿಗೆ ಹಣದ ಕುರಿತು ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದ ಅವರು, ಯಾವ ಸರ್ಕಾರಗಳು ರಾಜ್ಯಕ್ಕೆ ಎಷ್ಟು ಹೆಚ್ಚು ತೆರಿಗೆ ಹಣ ವಾಪಸ್ ನೀಡಿವೆ ಅನ್ನುವುದು ಗೊತ್ತಾಗುತ್ತದೆ ಎಂದರು.

2004-2014ರವರೆಗೆ ಕೇಂದ್ರದಿಂದ ಬಂದ ತೆರಿಗೆ ಹಣ 81,795 ಕೋಟಿ, 2014-2023 ಡಿಸೆಂಬರ್ ವರೆಗೆ ಮೋದಿ ಕೊಟ್ಟಿದ್ದು 2,82,791 ಕೋಟಿ, 2004-2014ರವರೆಗೆ ಮನಮೋಹನ್ ಸಿಂಗ್ ಅವರು ಕೊಟ್ಟಿರುವ ಅನುದಾನ-ಸಹಾಯಧನ ಬರೀ 60,779 ಕೋಟಿ, 2014-2023ರವರೆಗೆ ಮೋದಿ ಸರ್ಕಾರ ಕರ್ನಾಟಕಕ್ಕೆ ಹೆಚ್ಚೂ ಕಡಿಮೆ ಮೂರುವರೆ ಲಕ್ಷ ಕೋಟಿ ಈವರೆಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಎಸ್‍ಟಿ ಕೌನ್ಸಿಲ್ ಮೀಟಿಂಗ್​ಗೆ ಹೋಗದ ಸಿಎಂ: ಸಿಎಂ ಸಿದ್ದರಾಮಯ್ಯ ಒಂದು ದಿನವೂ ಜಿಎಸ್‍ಟಿ ಕೌನ್ಸಿಲ್ ಮೀಟಿಂಗ್​ಗೆ ಹೋಗಲಿಲ್ಲ. ಅನ್ಯಾಯವಾಗಿದ್ರೆ ಜಿಎಸ್‍ಟಿ ಮೀಟಿಂಗ್‍ನಲ್ಲಿ ಪ್ರಶ್ನಿಸಿ ನ್ಯಾಯ ಕೇಳಬಹುದಿತ್ತು. ಕೃಷ್ಣ ಬೈರೇಗೌಡರನ್ನು ಮೀಟಿಂಗ್‌ಗೆ ಕಳುಹಿಸುತ್ತಿದ್ದರು. ಬೈರೇಗೌಡರು ಅಲ್ಲಿನ ಸಭೆಯಲ್ಲಿ ಕೇಂದ್ರದ ಜಿಎಸ್​ಟಿ ನೀತಿ ಸಮಾಧನಕರವಾಗಿದೆ ಎಂದು ಹೇಳಿ ಬರುತ್ತಿದ್ದರು. ಆದರೆ ಹೊರಗಡೆ ಬಂದು ಕೇಂದ್ರಕ್ಕೆ ಬೈಯುತ್ತಾ ಸುಳ್ಳು ಹೇಳಿ ರಾಜಕಾರಣ ಮಾಡುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.

ಇದನ್ನೂಓದಿ: ಸರ್ಕಾರ ಹೊರಡಿಸಿರುವ ಪರೀಕ್ಷಾ ವೇಳಾಪಟ್ಟಿ ಒಂದು ಸಮುದಾಯಕ್ಕೆ ಸೀಮಿತವಾಗಿದೆ: ಬಿ.ಸಿ.ನಾಗೇಶ್

Last Updated :Feb 5, 2024, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.