ETV Bharat / state

ಚಿತ್ರದುರ್ಗ ಲೋಕಸಭೆಗೆ ಎಂಪಿ ದಾರಕೇಶ್ವರಯ್ಯ ನಾಮಪತ್ರ: ಚುನಾವನಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ - High Court Notice

author img

By ETV Bharat Karnataka Team

Published : Apr 19, 2024, 9:19 AM IST

ಹೈಕೋರ್ಟ್
ಹೈಕೋರ್ಟ್

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ದಾರಕೇಶ್ವರಯ್ಯಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದನ್ನು ಆಕ್ಷೇಪಿಸಿ ದಾಸರಹಳ್ಳಿಯ ಎಂ.ಚಂದ್ರ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಪೀಠ ಬೇಡ ಜಂಗಮ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಧಿಸಿದೆ.

ಬೆಂಗಳೂರು : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ದಾರಕೇಶ್ವರಯ್ಯಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿರುವ ಅವರ ಹೆಸರ‍ನ್ನು ಇವಿಎಂನಿಂದ ತೆಗೆಸುವಂತೆ ಆದೇಶಿಸಬೇಕೆಂದು ಕೋರಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಹೊಸದುರ್ಗ ತಾಲೂಕಿನ ಗೂಳಿಹಟ್ಟಿಯ ಆರ್.ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿವಾದಿ ದಾರಕೇಶ್ವರಯ್ಯ ಅವರಿಗೆ ಜಾತಿ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಧಿಸಲಾಗಿದೆ. ಆದರೆ, ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದಿರುವ ಎಂ.ಪಿ.ದಾರಕೇಶ್ವರಯ್ಯ ಪರಿಶಿಷ್ಟ ಜಾತಿಗೆ ಮೀಸಲಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರ ಉಮೇದುವಾರಿಕೆ ಸಿಂಧುವಾಗಿದೆ. ಹಾಗಾಗಿ ಅವರ ಹೆಸರನ್ನು ಇವಿಎಂನಿಂದ ತೆಗೆಯುವಂತೆ ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಇದೇ ವಿಚಾರದ ಮತ್ತೊಂದು ಅರ್ಜಿ ಶುಕ್ರವಾರ ವಿಚಾರಣೆಗೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಅರ್ಜಿಯನ್ನೂ ಸಹ ಅದರ ಜತೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿ ವಿಚಾರಣೆ ಮುಂದೂಡಿದೆ.

ಎಂ.ಪಿ.ದಾರಕೇಶ್ವರಯ್ಯಗೆ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದನ್ನು ಆಕ್ಷೇಪಿಸಿ ದಾಸರಹಳ್ಳಿಯ ಎಂ.ಚಂದ್ರ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಪೀಠ ಬೇಡ ಜಂಗಮ ಪ್ರಮಾಣಪತ್ರ ಬಳಸದಂತೆ ನಿರ್ಬಂಧ ವಿಧಿಸಿದೆ.

ಸರ್ಕಾರ ಪರ ವಾದಿಸಿದ ವಿಶೇಷ ವಕೀಲ ಸಿ.ಜಗದೀಶ್, ದಾರಕೇಶ್ವರಯ್ಯ ಈ ಮೊದಲು ಬೆಂಗಳೂರು ಉತ್ತರ ತಹಶೀಲ್ದಾರ್ ಅವರಿಂದ ಪಡೆದಿದ್ದ ಬೇಡ ಜಂಗಮ ಜಾತಿ ಪ್ರಮಾಣಪತ್ರ ರದ್ದಾಗಿತ್ತು. ಈಗ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಅವರಿಂದ ಇದೇ ರೀತಿಯ ಜಾತಿ ಪ್ರಮಾಣಪತ್ರ ಪಡೆದು ಅನ್ಯಾಯ ಎಸಗುತ್ತಿದ್ದಾರೆ. ಎರಡೆರಡು ಬಾರಿ ಇಂತಹ ಪ್ರಮಾಣಪತ್ರ ಪಡೆದು ಬಣ್ಣ ಬದಲಾಯಿಸುವ ಮೂಲಕ ಕಾನೂನಿನ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಊಸರವಳ್ಳಿ ತರ ಬಣ್ಣ ಬದಲಾಯಿಸುವ ಮೂಲಕ ಬೇಡ ಜಂಗಮ ಜಾತಿಯ ಪ್ರಮಾಣ ಪತ್ರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದರು.

ಇದನ್ನೂ ಓದಿ: ಕೆಎಸ್‌ಪಿಸಿಬಿ ಅಧ್ಯಕ್ಷ, ಸದಸ್ಯರ ನೇಮಕ ಸಂಬಂಧ ಮಾರ್ಗಸೂಚಿಗೆ ಮಾರ್ಪಡು ಮಾಡದ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.