ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಭಸವಾಗಿ ಬಂದು ದ್ವಿ ಚಕ್ರ ವಾಹನ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಕಾಲು ತುಂಡಾಗಿ ತೀವ್ರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ.
ಬಸವರಾಜ್ (34) ಎಂಬ ವ್ಯಕ್ತಿ ತೀವ್ರ ಗಾಯಗೊಂಡಿರುವ ಬೈಕ್ಸವಾರ. ದಾವಣಗೆರೆ ಕೊಲ್ಕುಂಟೆ ಗ್ರಾಮದ ವ್ಯಕ್ತಿ ಬಸವರಾಜ್ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲದಲ್ಲಿ ಅಳವಡಿಸಿರುವ ಕಬ್ಬಿಣದ ಡಿವೈಡರ್ಗೆ ರಭಸದಿಂದ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಬಸವರಾಜ್ನ ಕಾಲು ಕಟ್ಟಾಗಿದ್ದು, ಮಧ್ಯೆ ರಸ್ತೆಯಲ್ಲಿ ತೀವ್ರ ನರಳಾಡಿದ್ದಾನೆ. ನರಳಾಡುತ್ತಿದ್ದ ಬೈಕ್ ಸವಾರ ಬಸವರಾಜ್ ನನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ರವಾನಿಸಿದರು. ದಾವಣಗೆರೆ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಂಜಲಿ ಅಂಬಿಗೆರ ಹತ್ಯೆ ಖಂಡಿಸಿ ಪ್ರತಿಭಟನೆ: ಹುಬ್ಬಳಿಯ ಅಂಜಲಿ ಅಂಬಿಗೆರ ಹತ್ಯೆ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಗಂಗಾಮತಸ್ಥ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಅಮಾಯಕ ಮಹಿಳೆಯರ ಹಾಗೂ ಯುವತಿಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಅದರಲ್ಲಿಯೂ ಹುಬ್ಬಳ್ಳಿಯಲ್ಲಿ ನೇಹಾ ಹಾಗೂ ಅಂಜಲಿ ಹತ್ಯೆ ಕೂಡ ನಡೆದಿವೆ. ಈ ಹತ್ಯೆ ನಡೆಸಿದ ಅರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು, ಆಗ ಮಾತ್ರ ಇಂಥ ಪ್ರಕರಣ ನಡೆಯದಿರಲು ಸಾಧ್ಯವಿದೆ. ಇಲ್ಲವಾದರೆ ಯುವತಿಯರು ಒಂಟಿಯಾಗಿ ಓಡಾಡುವುದು ಕೂಡ ಕಷ್ಟವಾಗುತ್ತದೆ. ಕೂಡಲೇ ಅರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಅಗ್ರಹಿಸಿದರು.
ಇದನ್ನೂಓದಿ:ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು - Horrific Road Accident