ETV Bharat / state

ಜಾತಿ ಗಣತಿ ವಿರೋಧಿಸಿದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಪ್ರಶ್ನೆ - DCM D K SHIVAKUMAR

ಎಲ್ಲಾ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳಿವಳಿಕೆ ನೀಡಿ, ಜಾತಿ ಗಣತಿಯ ಮರು ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

dcm-dk-shivakumar-spoke-about-caste-re-enumeration
ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : June 11, 2025 at 6:18 PM IST

2 Min Read

ಬೆಂಗಳೂರು/ನವದೆಹಲಿ: "ಜಾತಿ ಗಣತಿ ವಿರೋಧಿಸಿದ ಬಿಜೆಪಿ, ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಜಾತಿ ಗಣತಿ ವರದಿ ವಿರೋಧ ಮಾಡಿದವರು ಅವರಲ್ಲವೇ? ಅವರು ಜಾತಿ ಗಣತಿ ವರದಿಯನ್ನು ಯಾಕೆ ಸ್ವೀಕಾರ ಮಾಡಲಿಲ್ಲ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ - ಅಂಶಗಳು ಬಿಟ್ಟುಹೋಗಿವೆಯೋ ಅವರ ಮಾಹಿತಿಯನ್ನು ಸೇರಿಸಲು ಅವಕಾಶ ನೀಡಲಾಗುವುದು. ಈಗಾಗಲೇ ನೀಡಿರುವ ವರದಿಯನ್ನು ನಾವು ಬಳಸಿಕೊಳ್ಳುತ್ತೇವೆ. ಸಮಾಜಗಳಿಗೆ ನ್ಯಾಯ ಒದಗಿಸಬೇಕು, ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ" ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ (ETV Bharat)

ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ; ಈ ಬಾರಿ ವೈಜ್ಞಾನಿಕವಾಗಿ ಮಾಡಲಾಗುವುದೇ ಎಂದು ಕೇಳಿದಾಗ, "ನಾವು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಜೈನ, ಲಂಬಾಣಿ, ಬೆಸ್ತ ಸೇರಿದಂತೆ ಅನೇಕ ಸಮಾಜದ ಜನರು ನನ್ನನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದರು. ನಮ್ಮ ಶಾಸಕರುಗಳು ಅವರ ಅಭಿಪ್ರಾಯ ತಿಳಿಸಿದ್ದರು. ಈ ಹಿಂದೆಯೂ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗಿತ್ತು. ಮನೆ ಮನೆಗೆ ಹೋಗಿ ನಮ್ಮ ಅಧಿಕಾರಿಗಳು ಸಮೀಕ್ಷೆ ಮಾಡಿ ಚೀಟಿಯನ್ನು ಅಂಟಿಸಿದ್ದರು. ಅವರು ಮಾಡಿದ್ದು ವೈಜ್ಞಾನಿಕವಲ್ಲವೇ?'' ಎಂದು ಪ್ರಶ್ನೆ ಮಾಡಿದರು.

''ಕಳೆದ ಬಾರಿ ಅನೇಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ತಮ್ಮ ಸಮುದಾಯವನ್ನು ಹೇಳಿಕೊಳ್ಳಲು ಹಿಂಜರಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರವಾಗಿ ಹತ್ತಾರು ಬಾರಿ ಜಾಹೀರಾತು ನೀಡಲಾಗಿದೆ. ಅಧಿಕಾರಿಗಳು ಹಲವು ಬಾರಿ ಮನೆಗೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದಾರೆ. ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೊರ ರಾಜ್ಯದಲ್ಲಿ ಇರುವವರು ತಮ್ಮ ಮಾಹಿತಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಲಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ತಂದೆ ಸ್ಥಾನದಲ್ಲಿ ನಿಂತು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತಾರೆ. ಈ ಪ್ರಕ್ರಿಯೆಯಲ್ಲಿ 1 ಲಕ್ಷ ಜನರನ್ನು ಒಳಗೊಳ್ಳಬೇಕಾಗುತ್ತದೆ" ಎಂದು ತಿಳಿಸಿದರು.

ಜಾತಿ ಗಣತಿ ವಿಚಾರದಲ್ಲಿ ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿಯಲಾಗಿದೆ ಎಂದು ಕೇಳಿದಾಗ, "ನಾವು ಎಲ್ಲರ ಒತ್ತಡಕ್ಕೂ ಮಣಿದಿದ್ದೇವೆ. ನಾವು ಮಾಧ್ಯಮಗಳ ಒತ್ತಡಕ್ಕೂ ಮಣಿಯುತ್ತೇವೆ" ಎಂದರು.

ಜನ ಮಾಹಿತಿ ಒದಗಿಸುವಂತೆ ಸ್ವಾಮೀಜಿಗಳು ಮಾಡಬೇಕು: ಸರ್ಕಾರದ ತೀರ್ಮಾನವನ್ನು ವೀರಶೈವ ಸಮಾಜ ಸ್ವಾಗತಿಸಿದೆ ಎಂದು ಕೇಳಿದಾಗ, "ವೀರಶೈವ, ಒಕ್ಕಲಿಗ ಸೇರಿದಂತೆ ಬೇರೆ ಸಮಾಜಗಳ ಸ್ವಾಮೀಜಿಗಳು ನನಗೆ ಕರೆ ಮಾಡಿ ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಎಲ್ಲ ಸಮಾಜಗಳ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳಿವಳಿಕೆ ನೀಡಿ, ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು. ಈ ಸಮೀಕ್ಷೆಯಲ್ಲಿ ಎಲ್ಲರೂ ತಮ್ಮ ಸಮುದಾಯದ ಬಗ್ಗೆ ಸರಿಯಾಗಿ ವಿವರ ನೀಡಬೇಕು" ಎಂದು ಕರೆ ನೀಡಿದರು.

ಜಾತಿ ಗಣತಿ ವಿಚಾರದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ.ಶಿವಕುಮಾರ್ ಮೇಲುಗೈ ಸಾಧಿಸಿದರೇ ಎಂದು ಕೇಳಿದಾಗ, "ಇದರಲ್ಲಿ ಯಾರ ಕೈ ಮೇಲಾಗುವ ವಿಚಾರವಿಲ್ಲ" ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿ ಗಣತಿ ಮಾಡುವಾಗ ರಾಜ್ಯ ಸರ್ಕಾರ ಮಾಡುವ ಅಗತ್ಯವಿದೆಯೇ ಎಂಬ ಪ್ರಶ್ನೆಗೆ, "ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ. ಇದನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ. ಜಾತಿ ಗಣತಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ" ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮಕ್ಕೂ ನಮ್ಮ ಶಾಸಕರು, ಸಂಸದರಿಗೂ ಸಂಬಂಧವಿಲ್ಲ: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇ.ಡಿ ದಾಳಿ ವಿಚಾರವಾಗಿ ಕೇಳಿದಾಗ, "ಈ ವಾಲ್ಮೀಕಿ ನಿಗಮದ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇ.90ರಷ್ಟು ಹಣವನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ" ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗುತ್ತೇನೆ: ವಿನಯ್ ಕುಲಕರ್ಣಿ

ಬೆಂಗಳೂರು/ನವದೆಹಲಿ: "ಜಾತಿ ಗಣತಿ ವಿರೋಧಿಸಿದ ಬಿಜೆಪಿ, ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಜಾತಿ ಗಣತಿ ವರದಿ ವಿರೋಧ ಮಾಡಿದವರು ಅವರಲ್ಲವೇ? ಅವರು ಜಾತಿ ಗಣತಿ ವರದಿಯನ್ನು ಯಾಕೆ ಸ್ವೀಕಾರ ಮಾಡಲಿಲ್ಲ? ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಈ ವರದಿಯಲ್ಲಿ ಯಾರ ಅಂಕಿ - ಅಂಶಗಳು ಬಿಟ್ಟುಹೋಗಿವೆಯೋ ಅವರ ಮಾಹಿತಿಯನ್ನು ಸೇರಿಸಲು ಅವಕಾಶ ನೀಡಲಾಗುವುದು. ಈಗಾಗಲೇ ನೀಡಿರುವ ವರದಿಯನ್ನು ನಾವು ಬಳಸಿಕೊಳ್ಳುತ್ತೇವೆ. ಸಮಾಜಗಳಿಗೆ ನ್ಯಾಯ ಒದಗಿಸಬೇಕು, ಗೊಂದಲಗಳನ್ನು ಬಗೆಹರಿಸಲು ನಾವು ಮುಂದಾಗಿದ್ದೇವೆ" ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ (ETV Bharat)

ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ; ಈ ಬಾರಿ ವೈಜ್ಞಾನಿಕವಾಗಿ ಮಾಡಲಾಗುವುದೇ ಎಂದು ಕೇಳಿದಾಗ, "ನಾವು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಜೈನ, ಲಂಬಾಣಿ, ಬೆಸ್ತ ಸೇರಿದಂತೆ ಅನೇಕ ಸಮಾಜದ ಜನರು ನನ್ನನ್ನು ಭೇಟಿ ಮಾಡಿ ಆತಂಕ ವ್ಯಕ್ತಪಡಿಸಿದ್ದರು. ನಮ್ಮ ಶಾಸಕರುಗಳು ಅವರ ಅಭಿಪ್ರಾಯ ತಿಳಿಸಿದ್ದರು. ಈ ಹಿಂದೆಯೂ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗಿತ್ತು. ಮನೆ ಮನೆಗೆ ಹೋಗಿ ನಮ್ಮ ಅಧಿಕಾರಿಗಳು ಸಮೀಕ್ಷೆ ಮಾಡಿ ಚೀಟಿಯನ್ನು ಅಂಟಿಸಿದ್ದರು. ಅವರು ಮಾಡಿದ್ದು ವೈಜ್ಞಾನಿಕವಲ್ಲವೇ?'' ಎಂದು ಪ್ರಶ್ನೆ ಮಾಡಿದರು.

''ಕಳೆದ ಬಾರಿ ಅನೇಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದೇ ತಮ್ಮ ಸಮುದಾಯವನ್ನು ಹೇಳಿಕೊಳ್ಳಲು ಹಿಂಜರಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರವಾಗಿ ಹತ್ತಾರು ಬಾರಿ ಜಾಹೀರಾತು ನೀಡಲಾಗಿದೆ. ಅಧಿಕಾರಿಗಳು ಹಲವು ಬಾರಿ ಮನೆಗೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದಾರೆ. ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೊರ ರಾಜ್ಯದಲ್ಲಿ ಇರುವವರು ತಮ್ಮ ಮಾಹಿತಿ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಲಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ತಂದೆ ಸ್ಥಾನದಲ್ಲಿ ನಿಂತು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತಾರೆ. ಈ ಪ್ರಕ್ರಿಯೆಯಲ್ಲಿ 1 ಲಕ್ಷ ಜನರನ್ನು ಒಳಗೊಳ್ಳಬೇಕಾಗುತ್ತದೆ" ಎಂದು ತಿಳಿಸಿದರು.

ಜಾತಿ ಗಣತಿ ವಿಚಾರದಲ್ಲಿ ಪ್ರಬಲ ಜಾತಿಗಳ ಒತ್ತಡಕ್ಕೆ ಮಣಿಯಲಾಗಿದೆ ಎಂದು ಕೇಳಿದಾಗ, "ನಾವು ಎಲ್ಲರ ಒತ್ತಡಕ್ಕೂ ಮಣಿದಿದ್ದೇವೆ. ನಾವು ಮಾಧ್ಯಮಗಳ ಒತ್ತಡಕ್ಕೂ ಮಣಿಯುತ್ತೇವೆ" ಎಂದರು.

ಜನ ಮಾಹಿತಿ ಒದಗಿಸುವಂತೆ ಸ್ವಾಮೀಜಿಗಳು ಮಾಡಬೇಕು: ಸರ್ಕಾರದ ತೀರ್ಮಾನವನ್ನು ವೀರಶೈವ ಸಮಾಜ ಸ್ವಾಗತಿಸಿದೆ ಎಂದು ಕೇಳಿದಾಗ, "ವೀರಶೈವ, ಒಕ್ಕಲಿಗ ಸೇರಿದಂತೆ ಬೇರೆ ಸಮಾಜಗಳ ಸ್ವಾಮೀಜಿಗಳು ನನಗೆ ಕರೆ ಮಾಡಿ ಈ ತೀರ್ಮಾನವನ್ನು ಸ್ವಾಗತಿಸಿದ್ದಾರೆ. ಎಲ್ಲ ಸಮಾಜಗಳ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳಿವಳಿಕೆ ನೀಡಿ, ಈ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು. ಈ ಸಮೀಕ್ಷೆಯಲ್ಲಿ ಎಲ್ಲರೂ ತಮ್ಮ ಸಮುದಾಯದ ಬಗ್ಗೆ ಸರಿಯಾಗಿ ವಿವರ ನೀಡಬೇಕು" ಎಂದು ಕರೆ ನೀಡಿದರು.

ಜಾತಿ ಗಣತಿ ವಿಚಾರದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ.ಶಿವಕುಮಾರ್ ಮೇಲುಗೈ ಸಾಧಿಸಿದರೇ ಎಂದು ಕೇಳಿದಾಗ, "ಇದರಲ್ಲಿ ಯಾರ ಕೈ ಮೇಲಾಗುವ ವಿಚಾರವಿಲ್ಲ" ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿ ಗಣತಿ ಮಾಡುವಾಗ ರಾಜ್ಯ ಸರ್ಕಾರ ಮಾಡುವ ಅಗತ್ಯವಿದೆಯೇ ಎಂಬ ಪ್ರಶ್ನೆಗೆ, "ಇದು ನಮ್ಮ ಪಕ್ಷದ ರಾಜಕೀಯ ಅಜೆಂಡಾ. ಇದನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ. ಜಾತಿ ಗಣತಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ" ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಅಕ್ರಮಕ್ಕೂ ನಮ್ಮ ಶಾಸಕರು, ಸಂಸದರಿಗೂ ಸಂಬಂಧವಿಲ್ಲ: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇ.ಡಿ ದಾಳಿ ವಿಚಾರವಾಗಿ ಕೇಳಿದಾಗ, "ಈ ವಾಲ್ಮೀಕಿ ನಿಗಮದ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇ.90ರಷ್ಟು ಹಣವನ್ನು ಮತ್ತೆ ವಶಕ್ಕೆ ಪಡೆಯಲಾಗಿದೆ" ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗುತ್ತೇನೆ: ವಿನಯ್ ಕುಲಕರ್ಣಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.