ETV Bharat / state

ರಾಮನಗರ: ಮಡದಿ ಜೊತೆ ಬಂದು ನಾಮಪತ್ರ ಸಲ್ಲಿಸಿದ ಡಾ. ಸಿ.ಎನ್​. ಮಂಜುನಾಥ್​ - DR MANJUNATH NOMINATION

author img

By ETV Bharat Karnataka Team

Published : Apr 4, 2024, 12:37 PM IST

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಡಾ.ಸಿ.ಎನ್​ ಮಂಜುನಾಥ್​ ಅವರು ಮಡದಿ ಸಮೇತ ಬಂದು ನಾಮಪತ್ರ ಸಲ್ಲಿಸಿದರು.

Dr. C. N. Manjunath filed nomination papers
ನಾಮಪತ್ರ ಸಲ್ಲಿಸಿದ ಡಾ.ಸಿ.ಎನ್​.ಮಂಜುನಾಥ್​

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣಾ ರಣಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್​ ಮಂಜುನಾಥ್ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ದಂಪತಿ ಸಮೇತ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು. ಮಾಜಿ ಡಿಸಿಎಂ ಡಾ. ಅಶ್ವತ್ಥನಾರಾಯಣ್​ ಹಾಗೂ ಪಕ್ಷದ ಮುಖಂಡರು ಸಾಥ್​ ನೀಡಿದರು. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಯಲ್ಲಿ ಮಂಜುನಾಥ್ ಅವರು ರೋಡ್ ಶೋ ನಡೆಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಾ. ಮಂಜುನಾಥ್, "ಈ ಬಾರಿ ಮೋದಿಯವರಿಗೆ ಹೆಚ್ಚು ಶಕ್ತಿ ನೀಡಬೇಕಾದರೆ ಬಿಜೆಪಿ ಹಾಗೂ ಜೆಡಿಎಸ್​ಗೆ ಮತ ನೀಡಬೇಕು. ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದು, ಮುಂದೆಯೂ ನಮಗೆ ಭ್ರಷ್ಟಾಚಾರ ಮುಕ್ತ ಆಡಳಿತ ಬೇಕು. ಮೋದಿ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ದಾಖಲಾಗಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ಹಾಗೆಯೇ ಪ್ರಾಮಾಣಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವಂತೆ" ಕರೆ ನೀಡಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ, ಯದುವೀರ್ ಒಡೆಯರ್​ ಸಾಥ್​ - HD Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.