ETV Bharat / state

ರಾಯಚೂರು: ಹೃದಯಾಘಾತದಿಂದ ಕರ್ತವ್ಯನಿರತ ಚುನಾವಣಾ ಸಿಬ್ಬಂದಿ ಸಾವು - election staff died

author img

By ETV Bharat Karnataka Team

Published : May 7, 2024, 5:29 PM IST

Updated : May 7, 2024, 7:34 PM IST

ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು
ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿ ಸಾವು (ETV Bharat)

ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಬೂತ್ ಮಟ್ಟದ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದೇವದುರ್ಗದಲ್ಲಿ ನಡೆದಿದೆ.

ರಾಯಚೂರು: ಚುನಾವಣಾ ಕರ್ತವ್ಯ ನಿರತ ಬೂತ್ ಮಟ್ಟದ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಜಾಗೀರಜಾಡಲದಿನ್ನಿ‌ ಗ್ರಾಮದ ಮತಗಟ್ಟೆಯಲ್ಲಿ ನಡೆದಿದೆ. ಬಸವರಾಜ್ (56) ಮೃತರು.

ಮುಖ್ಯೋಪಾಧ್ಯಾಯರಾಗಿದ್ದ ಬಸವರಾಜ್ ಅವರನ್ನು ಬಿಎಲ್​ಒ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯದ ವೇಳೆ ಏಕಾಏಕಿ ಕುಸಿದುಬಿದ್ದ ಬಸವರಾಜ್​ರನ್ನು ಇತರೆ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆಯೇ ಬಸವರಾಜ್​ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ದಾವಣಗೆರೆ : ಸಖಿ ವಿಶೇಷ ಮತಗಟ್ಟೆಯಲ್ಲಿ ಮಂಗಳಮುಖಿಯರಿಂದ ಮತದಾನ - TRANSGENDERS VOTING

Last Updated :May 7, 2024, 7:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.