ETV Bharat / state

ಬಿಜೆಪಿ ಶಾಸಕರ ಅಮಾನತು ರದ್ದತಿ ಸಂಬಂಧ ಸಿಎಂ, ಸ್ಪೀಕರ್​ಗೆ ರಾಜ್ಯಪಾಲರಿಂದ ಪತ್ರ - BJP MLAS SUSPENSION

ಬಿಜೆಪಿ ಶಾಸಕರ ಅಮಾನತು ರದ್ದತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್​ಗೆ ರಾಜ್ಯಪಾಲರು​ ಪತ್ರ ಬರೆದಿದ್ದಾರೆ.

governor-wrote-letter-cm-speaker-regarding-cancellation-of-bjp-mlas-suspension
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ETV Bharat)
author img

By ETV Bharat Karnataka Team

Published : April 30, 2025 at 10:49 AM IST

1 Min Read

ಬೆಂಗಳೂರು: 18 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರನ್ನು ಭೇಟಿಯಾಗಿ ಶಾಸಕರ ಅಮಾನತು ಸಂಬಂಧ ಸೋಮವಾರ ದೂರು ನೀಡಿದ್ದರು. ಅಮಾನತು ತೆರವು‌‌‌ಗೊಳಿಸಿ ಶಾಸಕರಿಗೆ ತಮ್ಮ ಅಧಿಕಾರ ಚಲಾಯಿಸಲು ಅನುವು ಮಾಡಿಕೊಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತ್ತು. ಇದೀಗ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್​​ಗೆ ಪತ್ರ ಬರೆದು, 18 ಬಿಜೆಪಿ ಶಾಸಕರ ಅಮಾನತು ತೆರವುಗೊಳಿಸುವಂತೆ ಸಲಹೆ ನೀಡಿದ್ದಾರೆ.

ಉಭಯ ಸದನದ ಬಿಜೆಪಿ ವಿಪಕ್ಷ ನಾಯಕರು ನನ್ನನ್ನು ಭೇಟಿಯಾಗಿ 18 ಬಿಜೆಪಿ ಶಾಸಕರ ಅಮಾನತು ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ. 18 ಶಾಸಕರ ಅಮಾನತು ಆದೇಶವನ್ನು ಮರುಪರಿಗಣಿಸುವ ಅವರ ಕೋರಿಕೆಯನ್ನು ಸ್ಪೀಕರ್ ಹಾಗೂ ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ಹಾಗೂ ಜನ‌ಪ್ರತಿನಿಧಿಯಾಗಿ ಅಮಾನತುಗೊಂಡ ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪುನರಾರಂಭಿಸಲು ಅನುವು ಮಾಡಿಕೊಡಲು ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, 18 ಸದಸ್ಯರ ಅಮಾನತು ಆದೇಶ ರದ್ದತಿಗೆ ಅಗತ್ಯ ಕ್ರಮ ಕೈಗೊಳ್ಳಲು ಬಯಸುತ್ತೇನೆ.‌ ಈ ಸಂಬಂಧ ಕೈಗೊಳ್ಳಲಾದ ಕ್ರಮವನ್ನು ನನ್ನ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ.

ಇದನ್ನೂ ಓದಿ: ಆಸ್ತಿ, ಭೂದಾಖಲೆ ನಿರ್ವಹಣೆ: ಸಂಪೂರ್ಣ ಡಿಜಿಟಲೀಕರಣಕ್ಕೆ ಮುನ್ನುಡಿ ಬರೆದ ಕಂದಾಯ ಇಲಾಖೆ

ಬೆಂಗಳೂರು: 18 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರನ್ನು ಭೇಟಿಯಾಗಿ ಶಾಸಕರ ಅಮಾನತು ಸಂಬಂಧ ಸೋಮವಾರ ದೂರು ನೀಡಿದ್ದರು. ಅಮಾನತು ತೆರವು‌‌‌ಗೊಳಿಸಿ ಶಾಸಕರಿಗೆ ತಮ್ಮ ಅಧಿಕಾರ ಚಲಾಯಿಸಲು ಅನುವು ಮಾಡಿಕೊಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತ್ತು. ಇದೀಗ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್​​ಗೆ ಪತ್ರ ಬರೆದು, 18 ಬಿಜೆಪಿ ಶಾಸಕರ ಅಮಾನತು ತೆರವುಗೊಳಿಸುವಂತೆ ಸಲಹೆ ನೀಡಿದ್ದಾರೆ.

ಉಭಯ ಸದನದ ಬಿಜೆಪಿ ವಿಪಕ್ಷ ನಾಯಕರು ನನ್ನನ್ನು ಭೇಟಿಯಾಗಿ 18 ಬಿಜೆಪಿ ಶಾಸಕರ ಅಮಾನತು ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ. 18 ಶಾಸಕರ ಅಮಾನತು ಆದೇಶವನ್ನು ಮರುಪರಿಗಣಿಸುವ ಅವರ ಕೋರಿಕೆಯನ್ನು ಸ್ಪೀಕರ್ ಹಾಗೂ ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ಹಾಗೂ ಜನ‌ಪ್ರತಿನಿಧಿಯಾಗಿ ಅಮಾನತುಗೊಂಡ ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪುನರಾರಂಭಿಸಲು ಅನುವು ಮಾಡಿಕೊಡಲು ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, 18 ಸದಸ್ಯರ ಅಮಾನತು ಆದೇಶ ರದ್ದತಿಗೆ ಅಗತ್ಯ ಕ್ರಮ ಕೈಗೊಳ್ಳಲು ಬಯಸುತ್ತೇನೆ.‌ ಈ ಸಂಬಂಧ ಕೈಗೊಳ್ಳಲಾದ ಕ್ರಮವನ್ನು ನನ್ನ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ.

ಇದನ್ನೂ ಓದಿ: ಆಸ್ತಿ, ಭೂದಾಖಲೆ ನಿರ್ವಹಣೆ: ಸಂಪೂರ್ಣ ಡಿಜಿಟಲೀಕರಣಕ್ಕೆ ಮುನ್ನುಡಿ ಬರೆದ ಕಂದಾಯ ಇಲಾಖೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.