ETV Bharat / state

ಮೈಸೂರು : ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಸಾವು - GRANDFATHER AND GRANDCHILDREN DIED

ಮೈಸೂರು ಜಿಲ್ಲೆಯ ತಿ. ನರಸೀಪುರ ಪಟ್ಟಣದ ಕಾವೇರಿ ನದಿ ನೀರಿನಲ್ಲಿ ಮುಳುಗಿ ತಾತ ಹಾಗೂ ಮೊಮ್ಮಕ್ಕಳು ಮೃತಪಟ್ಟಿದ್ದಾರೆ.

Grandfather-and-Grandchildren-died-after-drowned-in-river
ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಚೌಡಯ್ಯ (ETV Bharat)
author img

By ETV Bharat Karnataka Team

Published : March 15, 2025 at 7:37 PM IST

1 Min Read

ಮೈಸೂರು : ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳು ಜಲಸಮಾಧಿಯಾಗಿರುವ ಘಟನೆ ತಿ. ನರಸೀಪುರ ಪಟ್ಟಣದಲ್ಲಿ ನಡೆದಿದೆ.

ತಿ. ನರಸೀಪುರ ಪಟ್ಟಣದ ನಿವಾಸಿಗಳಾದ ಚೌಡಯ್ಯ (70) ಭರತ್ (13) ಧನುಷ್ (10) ಮೃತರು. ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ಮೊಮ್ಮಕ್ಕಳನ್ನು ಕಂಡ ತಾತ ಚೌಡಯ್ಯ ಮಕ್ಕಳ ರಕ್ಷಣೆಗೆ ನದಿಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯನೂ ಮುಳುಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದ ನಂತರ ತಿ. ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ತಿ.‌ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ವಿಜಯಪುರ: ಕಾಲು ಜಾರಿ ಬಾವಿಯೊಳಗೆ ಬಿದ್ದು ಬಾಲಕ ಸಾವು, ರಕ್ಷಿಸಲು ಹೋದ ಅಜ್ಜಿಯೂ ನೀರು ಪಾಲು - BOY AND GRANDMOTHER DIED IN WELL

ಮೈಸೂರು : ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳು ಜಲಸಮಾಧಿಯಾಗಿರುವ ಘಟನೆ ತಿ. ನರಸೀಪುರ ಪಟ್ಟಣದಲ್ಲಿ ನಡೆದಿದೆ.

ತಿ. ನರಸೀಪುರ ಪಟ್ಟಣದ ನಿವಾಸಿಗಳಾದ ಚೌಡಯ್ಯ (70) ಭರತ್ (13) ಧನುಷ್ (10) ಮೃತರು. ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ಮೊಮ್ಮಕ್ಕಳನ್ನು ಕಂಡ ತಾತ ಚೌಡಯ್ಯ ಮಕ್ಕಳ ರಕ್ಷಣೆಗೆ ನದಿಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯನೂ ಮುಳುಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದ ನಂತರ ತಿ. ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ತಿ.‌ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ವಿಜಯಪುರ: ಕಾಲು ಜಾರಿ ಬಾವಿಯೊಳಗೆ ಬಿದ್ದು ಬಾಲಕ ಸಾವು, ರಕ್ಷಿಸಲು ಹೋದ ಅಜ್ಜಿಯೂ ನೀರು ಪಾಲು - BOY AND GRANDMOTHER DIED IN WELL

ETV Bharat Logo

Copyright © 2025 Ushodaya Enterprises Pvt. Ltd., All Rights Reserved.