ETV Bharat / state

ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರು ಕಾರಣ: ಹೆಚ್.ಡಿ.ಕುಮಾರಸ್ವಾಮಿ - H D Kumaraswamy

author img

By ETV Bharat Karnataka Team

Published : Apr 3, 2024, 6:48 PM IST

former-chief-minister-hd-kumaraswamy
ಮಾಜಿ ಮುಖ್ಯಮಂತ್ರಿ ಹೆಚ್.​ ಡಿ ಕುಮಾರಸ್ವಾಮಿ

ಕಾಂಗ್ರೆಸ್​ ಸರ್ಕಾರದವರು ನಾಡಿನ ತೆರಿಗೆ ಹಣವನ್ನು ದುಂದುವೆಚ್ಚ ಮಾಡಿ, ಸಾಲ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.​ ಡಿ ಕುಮಾರಸ್ವಾಮಿ

ತುಮಕೂರು: ನಾನು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಲು ಯಡಿಯೂರಪ್ಪನವರೇ ಕಾರಣ. ನಮಗಿಂತ ಹೆಚ್ಚು ಶಾಸಕರಿದ್ರೂ ನಮಗೆ ಅವಕಾಶ ಕೊಟ್ಟಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತುಮಕೂರಿನಲ್ಲಿಂದು ವಿ.ಸೋಮಣ್ಣ ಪರ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು-ಅವರು ಸೇರಿ 2006ರಲ್ಲಿ ಸರ್ಕಾರ ರಚಿಸಿದ್ದೆವು. 4 ಸಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಹಿರಿಯರಾದ ಯಡಿಯೂರಪ್ಪನವರು ಆಗಮಿಸಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ಕೊಡ್ತಿದ್ದರು ಎಂದರು.

ಆದ್ರೆ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ನಾವು ನುಡಿದಂತೆ ನಡೆದಿದ್ದೇವೆ ಅಂತಾ ಹೇಳ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಅಂತಾ ದೊಡ್ಡದಾಗಿ ಹೇಳಿಕೊಳ್ಳುತ್ತಿದ್ದಾರೆ. ನಾಡಿನ ತೆರಿಗೆಯ ಹಣವನ್ನು ದುಂದು ವೆಚ್ಚ ಮಾಡಿ, ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದಾರೆ. ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ನೀವು ಇದನ್ನು ಹೇಳಬೇಕಾಗುತ್ತೆ ಎಂದರು.

ಇದೇ ವೇಳೆ, ಯಾವ ಅಭಿವೃದ್ಧಿ ಕೆಲಸಗಳನ್ನೂ ಈ ಸರ್ಕಾರ ಮಾಡ್ತಿಲ್ಲ. ಐದು ಗ್ಯಾರಂಟಿಗಳನ್ನು ಕೊಟ್ಟಿದ್ದೀವಿ ಅಂತಾ ಜಾಹೀರಾತುಗಳನ್ನು ಕೊಟ್ಟು ಪ್ರಚಾರ ಪಡೀತಾ ಇದ್ದಾರೆ ಎಂದು ಟೀಕಿಸಿದರು.

ಕೊಬ್ಬರಿಗೆ ಬೆಂಬಲ ಬೆಲೆ ಕೊಡ್ತಿರೋದು ಕೇಂದ್ರ ಸರ್ಕಾರ. ಕೊಬ್ಬರಿ ಬೆಳೆಗಾರರಿಗೆ ಮುಂದಿನ ದಿನಗಳಲ್ಲಿ 15-16 ಸಾವಿರ ರೂ ಕೊಡೋದಕ್ಕೆ ನಾನು ಹೋರಾಟ ಮಾಡ್ತೀನಿ ಎಂದು ಭರವಸೆ ನೀಡದರು.

ಇದನ್ನೂ ಓದಿ: ಪ್ರತಾಪ್​ ಸಿಂಹಗೆ ಟಿಕೆಟ್​ ತಪ್ಪಿಸಿದ್ದು ದೇವೇಗೌಡರು ಎಂಬುದು ಎಂಟನೇ ಅದ್ಭುತ: ಸಿಎಂ ಆರೋಪಕ್ಕೆ ಹೆಚ್​ಡಿಕೆ ಟಾಂಗ್​ - HD Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.