ETV Bharat / state

ಭೂಗತ ಪಾತಕಿ ಬನ್ನಂಜೆ ರಾಜನಿಗೆ 15 ದಿನಗಳ ಪೆರೋಲ್​ ಮಂಜೂರು - BANNANJE RAJA GETS PAROLE

ಭೂಗತ ಪಾತಕಿ ಬನ್ನಂಜೆ ರಾಜನಿಗೆ ಹೈಕೋರ್ಟ್​ 15 ದಿನಗಳ ಪೆರೋಲ್‌ ಮಂಜೂರು ಮಾಡಿದೆ.

HIGH COURT
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : April 29, 2025 at 8:11 PM IST

1 Min Read

ಬೆಂಗಳೂರು: ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ತನ್ನ ತಂದೆ ಉಡುಪಿಯ ಸುಂದರ ಶೆಟ್ಟಿಗಾರ್‌ ನಿಧನರಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮತ್ತು ಆ ನಂತರದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೈಕೋರ್ಟ್‌ ಷರತ್ತುಗಳನ್ನು ವಿಧಿಸಿ 15 ದಿನಗಳ ಪೆರೋಲ್‌ ಮಂಜೂರು ಮಾಡಿತು.

ಬನ್ನಂಜೆ ರಾಜನನ್ನು ಪೆರೋಲ್‌ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದ ಅವರ ತಂದೆ 86 ವರ್ಷದ ಬಾಪುತೋಟ ಮಲ್ಪೆಯ ಸುಂದರ ಶೆಟ್ಟಿಗಾರ್‌ ಅವರು ನಿಧನರಾದ ಹಿನ್ನೆಲೆಯಲ್ಲಿ ಅರ್ಜಿದಾರರ ಕೋರಿಕೆಯಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಬನ್ನಂಜೆ ರಾಜ ಬಿಡುಗಡೆಯಾಗುವ ದಿನಕ್ಕೆ ಅನ್ವಯಿಸಿ ಕಠಿಣ ಷರತ್ತುಗಳನ್ನು ವಿಧಿಸಿ ಪೆರೋಲ್‌ ಮಂಜೂರು ಮಾಡಲಾಗಿದೆ. ನಾಲ್ವರು ಪೊಲೀಸರು ಮತ್ತು ವಾಹನ ಒಳಗೊಂಡ ಎಸ್ಕಾರ್ಟ್‌ ಕಲ್ಪಿಸಲಾಗಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಬನ್ನಂಜೆ ರಾಜನೇ ಪಾವತಿಸಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ವಕೀಲ ರಾಹುಲ್‌ ಕಾರ್ಯಪ್ಪ, ಕೋಕಾ ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿರುವ ಪ್ರಕರಣಗಳೂ ಸೇರಿ ಬನ್ನಂಜೆ ರಾಜನ ವಿರುದ್ಧ 23 ಪ್ರಕರಣಗಳು ಬಾಕಿ ಇವೆ. ಹಲವು ಪ್ರಕರಣಗಳಲ್ಲಿ ಬನ್ನಂಜೆ ರಾಜ ದೋಷಿ ಎಂದು ಸಾಬೀತಾಗಿದ್ದು, ಉದ್ಯಮಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ನಾಲ್ವರು ಎಸ್ಕಾರ್ಟ್‌ ಪೊಲೀಸ್‌ ಮತ್ತು ವಾಹನಕ್ಕೆ ವೆಚ್ಚ ಪಾವತಿಸಲು ಆದೇಶಿಸಬೇಕು ಎಂದು ಕೋರಿದರು.

ಬನ್ನಂಜೆ ರಾಜ ಪರ ವಕೀಲರು, 24 ತಾಸಿಗೆ ಮೂವರು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸುತ್ತಾರೆ. ಇದು ನಮ್ಮ ಮಿತಿಗಿಂತ ಹೆಚ್ಚಿನ ವೆಚ್ಚವಾಗುತ್ತದೆ. ಇದಕ್ಕೆ 50 ಸಾವಿರ ಅಥವಾ ಒಂದು ಲಕ್ಷ ರೂಪಾಯಿ ಪಾವತಿಸಲಾಗುವುದು. ಬನ್ನಂಜೆ ರಾಜ ಅವರು 15 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಪೀಠ, ಸರ್ಕಾರದ ನಿಯಮದ ಪರ ಎಸ್ಕಾರ್ಟ್‌ಗೆ ಹಣ ಪಾವತಿಸಲೇಬೇಕು. ನಿಮ್ಮ ಇತಿಹಾಸವೇ ಹಾಗಿದೆ. ಏನೂ ಮಾಡಲಾಗದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಇದನ್ನೂ ಓದಿ: ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಿಸಿದ ಹೈಕೋರ್ಟ್ - HIGH COURT ON TAXI SERVICES

ಬೆಂಗಳೂರು: ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ತನ್ನ ತಂದೆ ಉಡುಪಿಯ ಸುಂದರ ಶೆಟ್ಟಿಗಾರ್‌ ನಿಧನರಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮತ್ತು ಆ ನಂತರದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೈಕೋರ್ಟ್‌ ಷರತ್ತುಗಳನ್ನು ವಿಧಿಸಿ 15 ದಿನಗಳ ಪೆರೋಲ್‌ ಮಂಜೂರು ಮಾಡಿತು.

ಬನ್ನಂಜೆ ರಾಜನನ್ನು ಪೆರೋಲ್‌ ಮೇಲೆ ಬಿಡುಗಡೆ ಮಾಡುವಂತೆ ಕೋರಿದ್ದ ಅವರ ತಂದೆ 86 ವರ್ಷದ ಬಾಪುತೋಟ ಮಲ್ಪೆಯ ಸುಂದರ ಶೆಟ್ಟಿಗಾರ್‌ ಅವರು ನಿಧನರಾದ ಹಿನ್ನೆಲೆಯಲ್ಲಿ ಅರ್ಜಿದಾರರ ಕೋರಿಕೆಯಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಬನ್ನಂಜೆ ರಾಜ ಬಿಡುಗಡೆಯಾಗುವ ದಿನಕ್ಕೆ ಅನ್ವಯಿಸಿ ಕಠಿಣ ಷರತ್ತುಗಳನ್ನು ವಿಧಿಸಿ ಪೆರೋಲ್‌ ಮಂಜೂರು ಮಾಡಲಾಗಿದೆ. ನಾಲ್ವರು ಪೊಲೀಸರು ಮತ್ತು ವಾಹನ ಒಳಗೊಂಡ ಎಸ್ಕಾರ್ಟ್‌ ಕಲ್ಪಿಸಲಾಗಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಬನ್ನಂಜೆ ರಾಜನೇ ಪಾವತಿಸಬೇಕು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ವಕೀಲ ರಾಹುಲ್‌ ಕಾರ್ಯಪ್ಪ, ಕೋಕಾ ಮತ್ತು ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿರುವ ಪ್ರಕರಣಗಳೂ ಸೇರಿ ಬನ್ನಂಜೆ ರಾಜನ ವಿರುದ್ಧ 23 ಪ್ರಕರಣಗಳು ಬಾಕಿ ಇವೆ. ಹಲವು ಪ್ರಕರಣಗಳಲ್ಲಿ ಬನ್ನಂಜೆ ರಾಜ ದೋಷಿ ಎಂದು ಸಾಬೀತಾಗಿದ್ದು, ಉದ್ಯಮಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ನಾಲ್ವರು ಎಸ್ಕಾರ್ಟ್‌ ಪೊಲೀಸ್‌ ಮತ್ತು ವಾಹನಕ್ಕೆ ವೆಚ್ಚ ಪಾವತಿಸಲು ಆದೇಶಿಸಬೇಕು ಎಂದು ಕೋರಿದರು.

ಬನ್ನಂಜೆ ರಾಜ ಪರ ವಕೀಲರು, 24 ತಾಸಿಗೆ ಮೂವರು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸುತ್ತಾರೆ. ಇದು ನಮ್ಮ ಮಿತಿಗಿಂತ ಹೆಚ್ಚಿನ ವೆಚ್ಚವಾಗುತ್ತದೆ. ಇದಕ್ಕೆ 50 ಸಾವಿರ ಅಥವಾ ಒಂದು ಲಕ್ಷ ರೂಪಾಯಿ ಪಾವತಿಸಲಾಗುವುದು. ಬನ್ನಂಜೆ ರಾಜ ಅವರು 15 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು.

ಇದಕ್ಕೆ ಪೀಠ, ಸರ್ಕಾರದ ನಿಯಮದ ಪರ ಎಸ್ಕಾರ್ಟ್‌ಗೆ ಹಣ ಪಾವತಿಸಲೇಬೇಕು. ನಿಮ್ಮ ಇತಿಹಾಸವೇ ಹಾಗಿದೆ. ಏನೂ ಮಾಡಲಾಗದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಇದನ್ನೂ ಓದಿ: ಓಲಾ, ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಿಸಿದ ಹೈಕೋರ್ಟ್ - HIGH COURT ON TAXI SERVICES

ETV Bharat Logo

Copyright © 2025 Ushodaya Enterprises Pvt. Ltd., All Rights Reserved.