ETV Bharat / state

ಅಭಿಯೋಗ, ಸರ್ಕಾರಿ ವ್ಯಾಜ್ಯಗಳ ಇಲಾಖೆ ಅಧಿಕಾರಿ ನೇಮಕ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ನೋಟಿಸ್ - HIGH COURT

ಅಭಿಯೋಗ ಹಾಗೂ ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಹಿರಿಯ ಆಡಳಿತ ಅಧಿಕಾರಿ ನೇಮಕ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ಕುರಿತಂತೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

hc-notice-to-government-regarding-petition-questioning-appointment-of-prosecution-and-government-litigation-department-officer
ಹೈಕೋರ್ಟ್ (ETV Bharat)
author img

By ETV Bharat Karnataka Team

Published : March 26, 2025 at 8:05 AM IST

1 Min Read

ಬೆಂಗಳೂರು: ನ್ಯಾಯಾಲಯದ ಆದೇಶ, ಲೋಕಾಯುಕ್ತ ಶಿಫಾರಸು ಹಾಗೂ ಇಲಾಖಾ ಮುಖ್ಯಸ್ಥರ ವರದಿಯ ಹೊರತಾಗಿಯೂ 2013-14ನೇ ಸಾಲಿನ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ನೇಮಕ ಅಕ್ರಮ ಹಗರಣದ ಪ್ರಮುಖ ಆರೋಪಿ ನಾರಾಯಣಸ್ವಾಮಿ ಅವರನ್ನು ಅಭಿಯೋಗ ಹಾಗೂ ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಹಿರಿಯ ಆಡಳಿತ ಅಧಿಕಾರಿಯಾಗಿ ಹುದ್ದೆಗೆ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಮಂಗಳವಾರ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಕೀಲೆ ಸುಧಾ ಕಾಟ್ವ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್‌ ಜಾರಿ ಮಾಡಿತು.

ಅಲ್ಲದೆ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಅಭಿಯೋಗ ನಿರ್ದೇಶಕರು ಹಾಗೂ ಹಿರಿಯ ಕಾನೂನು ಅಧಿಕಾರಿ ಹುದ್ದೆಗೆ ನೇಮಕಗೊಂಡಿರುವ ನಾರಾಯಣಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲ ವಾದ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ ವಾದ ಮಂಡಿಸಿ, ''ಎಪಿಪಿ ನೇಮಕ ಹಗರಣ ಬೆಳಕಿಗೆ ಬಂದ ಮೇಲೆ 2019ರಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇಲಾಖಾ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವ ಅಭ್ಯರ್ಥಿಗಳು ಹುದ್ದೆಗಳು ನಿರ್ವಹಿಸದಂತೆ 2021ರಲ್ಲಿ ಹೈಕೋರ್ಟ್ ಆದೇಶ ನೀಡಿತ್ತು'' ಎಂದು ಪೀಠಕ್ಕೆ ತಿಳಿಸಿದರು.

''ಅದರಂತೆ, 60 ಮಂದಿ ಈವರೆಗೆ ಯಾವುದೇ ಹುದ್ದೆ ಇಲ್ಲದೆ ಇದ್ದಾರೆ. ಆದರೆ, ನ್ಯಾಯಾಲಯದ ಆದೇಶ, ಲೋಕಾಯುಕ್ತದ ಶಿಫಾರಸು ಹಾಗೂ ಇಲಾಖಾ ಮುಖ್ಯಸ್ಥರ ವರದಿಯ ಹೊರತಾಗಿಯೂ ಇಲಾಖಾ ವಿಚಾರಣೆ ಮತ್ತು ಕ್ರಿಮಿನಲ್ ಪ್ರಕರಣ ಬಾಕಿ ಇದ್ದರೂ ನಾರಾಯಣಸ್ವಾಮಿ ಅವರನ್ನು ಹಿರಿಯ ಆಡಳಿತ ಅಧಿಕಾರಿ ಹುದ್ದೆಗೆ 2024ರ ಡಿಸೆಂಬರ್ 7ರಂದು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ತಿದ್ದಿದ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಸಹಿ ನಕಲು ಮಾಡಿದ ಗಂಭೀರ ಆರೋಪ ನಾರಾಯಣಸ್ವಾಮಿ ಅವರ ಮೇಲಿದೆ'' ಎಂದು ಪೀಠಕ್ಕೆ ಎಸ್.ಉಮಾಪತಿ ವಿವರಿಸಿದರು.

ಇದನ್ನೂ ಓದಿ: ಬಿಬಿಎಂಪಿ ಅಕ್ರಮ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧದ ಆರೋಪ ಕೈಬಿಟ್ಟ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶ, ಲೋಕಾಯುಕ್ತ ಶಿಫಾರಸು ಹಾಗೂ ಇಲಾಖಾ ಮುಖ್ಯಸ್ಥರ ವರದಿಯ ಹೊರತಾಗಿಯೂ 2013-14ನೇ ಸಾಲಿನ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ನೇಮಕ ಅಕ್ರಮ ಹಗರಣದ ಪ್ರಮುಖ ಆರೋಪಿ ನಾರಾಯಣಸ್ವಾಮಿ ಅವರನ್ನು ಅಭಿಯೋಗ ಹಾಗೂ ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಹಿರಿಯ ಆಡಳಿತ ಅಧಿಕಾರಿಯಾಗಿ ಹುದ್ದೆಗೆ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಮಂಗಳವಾರ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಕೀಲೆ ಸುಧಾ ಕಾಟ್ವ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್‌ ಜಾರಿ ಮಾಡಿತು.

ಅಲ್ಲದೆ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಅಭಿಯೋಗ ನಿರ್ದೇಶಕರು ಹಾಗೂ ಹಿರಿಯ ಕಾನೂನು ಅಧಿಕಾರಿ ಹುದ್ದೆಗೆ ನೇಮಕಗೊಂಡಿರುವ ನಾರಾಯಣಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲ ವಾದ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ ವಾದ ಮಂಡಿಸಿ, ''ಎಪಿಪಿ ನೇಮಕ ಹಗರಣ ಬೆಳಕಿಗೆ ಬಂದ ಮೇಲೆ 2019ರಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇಲಾಖಾ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವ ಅಭ್ಯರ್ಥಿಗಳು ಹುದ್ದೆಗಳು ನಿರ್ವಹಿಸದಂತೆ 2021ರಲ್ಲಿ ಹೈಕೋರ್ಟ್ ಆದೇಶ ನೀಡಿತ್ತು'' ಎಂದು ಪೀಠಕ್ಕೆ ತಿಳಿಸಿದರು.

''ಅದರಂತೆ, 60 ಮಂದಿ ಈವರೆಗೆ ಯಾವುದೇ ಹುದ್ದೆ ಇಲ್ಲದೆ ಇದ್ದಾರೆ. ಆದರೆ, ನ್ಯಾಯಾಲಯದ ಆದೇಶ, ಲೋಕಾಯುಕ್ತದ ಶಿಫಾರಸು ಹಾಗೂ ಇಲಾಖಾ ಮುಖ್ಯಸ್ಥರ ವರದಿಯ ಹೊರತಾಗಿಯೂ ಇಲಾಖಾ ವಿಚಾರಣೆ ಮತ್ತು ಕ್ರಿಮಿನಲ್ ಪ್ರಕರಣ ಬಾಕಿ ಇದ್ದರೂ ನಾರಾಯಣಸ್ವಾಮಿ ಅವರನ್ನು ಹಿರಿಯ ಆಡಳಿತ ಅಧಿಕಾರಿ ಹುದ್ದೆಗೆ 2024ರ ಡಿಸೆಂಬರ್ 7ರಂದು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ತಿದ್ದಿದ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ಸಹಿ ನಕಲು ಮಾಡಿದ ಗಂಭೀರ ಆರೋಪ ನಾರಾಯಣಸ್ವಾಮಿ ಅವರ ಮೇಲಿದೆ'' ಎಂದು ಪೀಠಕ್ಕೆ ಎಸ್.ಉಮಾಪತಿ ವಿವರಿಸಿದರು.

ಇದನ್ನೂ ಓದಿ: ಬಿಬಿಎಂಪಿ ಅಕ್ರಮ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧದ ಆರೋಪ ಕೈಬಿಟ್ಟ ಆದೇಶ ರದ್ದುಗೊಳಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.