ETV Bharat / state

ಶುಕ್ರವಾರ ಕೋರ್ಟ್​ಗೆ ಹಾಜರಾಗ್ತೇನೆ: ಶಾಸಕ ವಿನಯ ಕುಲಕರ್ಣಿ - MLA VINAY KULAKARNI

ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ಆದೇಶಕ್ಕೆ ನಾನು ತಲೆಬಾಗುತ್ತೇನೆ ಎಂದು ಶಾಸಕ ವಿನಯ ಕುಲಕರ್ಣಿ ತಿಳಿಸಿದ್ದಾರೆ.

ಶಾಸಕ ವಿನಯ ಕುಲಕರ್ಣಿ ಯೋಗೀಶ ಗೌಡ ಕೊಲೆ
ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ (ETV Bharat)
author img

By ETV Bharat Karnataka Team

Published : June 10, 2025 at 5:55 PM IST

2 Min Read

ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ ಹಿಂದೆ ಈ ರೀತಿ ಕುತಂತ್ರ ಮಾಡುವುದು ಸಹಜ. ಇದಕ್ಕೆ ಏನು ಮಾಡೋಕೆ ಆಗುವುದಿಲ್ಲ, ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಶಾಸಕ ವಿನಯ ಕುಲಕರ್ಣಿ (ETV Bharat)

ನನ್ನ ಪಕ್ಷ, ಕ್ಷೇತ್ರದ ಜನರು ಜೊತೆಗಿದ್ದಾರೆ. ಪತ್ನಿ, ಮಕ್ಕಳು ಹೊರಗಡೆ ಇದ್ದು ಎಲ್ಲವನ್ನೂ ನೋಡಿಕೊಳ್ಳುತ್ತಾರೆ‌. ಹಾಗಾಗಿ, ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ. ಕೇಸ್ ಏನಾಗುತ್ತದೆ ನೋಡುತ್ತೇನೆ. ನನಗೆ ಸಚಿವ ಸ್ಥಾನ ನೀಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ನನ್ನ ವಿರುದ್ಧ ಕುತಂತ್ರ ಮಾಡಿದವರಿಗೆ ಸಂದೇಶ ಕೊಡುವ ಅವಶ್ಯಕತೆ ಇಲ್ಲ. ನನ್ನ ವಿರೋಧಿಗಳಿಗೆ ಕಾಲವೇ ಉತ್ತರಿಸುತ್ತದೆ. ಕಾಲಾಯ ತಸ್ಮೈ ನಮಃ ಎಂದಷ್ಟೇ ಎಂದು ಹೇಳಿದರು.

ನನ್ನ ಕೇಸ್ ಇರುವ ಹಿನ್ನೆಲೆಯಲ್ಲಿ ಇಂದು ಧಾರವಾಡ ಅಧಿಕಾರಿಗಳೊಂದಿಗೆ ಬೆಳಗಾವಿಯಲ್ಲಿ ಸಭೆ ಮಾಡಿದ್ದೇನೆ. ಜನರಿಗೆ ತೊಂದರೆ ಆಗಬಾರದು. ಪ್ರಗತಿಯಲ್ಲಿರುವ ಅಭಿವೃದ್ಧಿ ಕೆಲಸಗಳನ್ನು ಬೇಗನೆ ಮುಗಿಸಬೇಕು. ಮಳೆಗಾಲ ಆರಂಭವಾಗುತ್ತಿದ್ದು, ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಆಗುವ ಸಾಧ್ಯತೆ ಇದೆ. ಹಾಗಾಗಿ, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದೇನೆ ಎಂದರು.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಸಾವು ಪ್ರಕರಣದಲ್ಲಿ ತಪ್ಪಾಗಿರುವುದು ನಿಜ. ಅದರಲ್ಲಿ ಪ್ರಶ್ನೆಯೇ ಇಲ್ಲ. ಇಂಟಲಿಜೆನ್ಸ್ ಫೆಲ್ಯೂರೋ ಮತ್ತೊಂದೋ. ಆದರೆ, ಆ ಸ್ಟೇಡಿಯಂ ಸಾಮರ್ಥ್ಯವೇ 35 ಸಾವಿರ. ಬೆಂಗಳೂರು ಇತಿಹಾಸದಲ್ಲಿ ಅಷ್ಟೊಂದು ಜನ ಸೇರಿದ್ದು ಇದೇ ಮೊದಲು. ನಿರ್ವಹಣೆ ಮಾಡಬೇಕಿತ್ತು. ಆದರೆ, ನಿರ್ವಹಣೆ ಮಾಡದಷ್ಟು ಜನರು ಸೇರಿದ್ದರು. ಅಷ್ಟು ಜನರು ಸೇರುತ್ತಾರೆ ಅಂತಾ ಯಾರಿಗೂ ನಿರೀಕ್ಷೆ ಇರಲಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಪೂರ್ವಸಿದ್ಧತೆಗೆ ಸಮಯದ ಅವಶ್ಯಕತೆಯೂ ಇತ್ತು. ತರಾತುರಿಯಲ್ಲಿ ಸಿದ್ಧತೆ ಆಗಿದ್ದರಿಂದ ಸ್ವಲ್ಪ ಅಸ್ತವ್ಯಸ್ತವಾಗಿದೆ. ಜನರೂ ಕೂಡ ಬಹಳ ನಿರ್ಲಕ್ಷ್ಯ ವಹಿಸಿದ್ದಾರೆ‌. ಸಣ್ಣಪುಟ್ಟ ಮಕ್ಕಳನ್ನೂ ಕರೆದುಕೊಂಡು ಬಂದಿದ್ದರು. ಹೀಗಿದ್ದಾಗ ಯಾವುದೇ ಸರ್ಕಾರವಿದ್ದರೂ ನಿಯಂತ್ರಿಸುವುದು ಕಷ್ಟವಾಗುತ್ತದೆ ಎಂದು ವಿನಯ ಕುಲಕರ್ಣಿ ಹೇಳಿದರು.

ಇದನ್ನೂ ಓದಿ: ಯೋಗೇಶಗೌಡ ಹತ್ಯೆ ಕೇಸ್: ವಿನಯ್ ಕುಲಕರ್ಣಿ ಜಾಮೀನು ರದ್ದು: ಸಹೋದರ ಹೇಳೋದೇನು?

ಬೆಳಗಾವಿ: ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಕುರಿತು ಬೆಳಗಾವಿಯಲ್ಲಿಂದು ಶಾಸಕ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ. ಶುಕ್ರವಾರ ನಾನು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಮುಂದೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿರುವ ಆರೋಪಕ್ಕೆ, ಅದು ಸಹಜವಾಗಿ ಇದ್ದೇ ಇರುತ್ತದೆ. ಬಲಿಷ್ಠ ನಾಯಕರ ಹಿಂದೆ ಈ ರೀತಿ ಕುತಂತ್ರ ಮಾಡುವುದು ಸಹಜ. ಇದಕ್ಕೆ ಏನು ಮಾಡೋಕೆ ಆಗುವುದಿಲ್ಲ, ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ಶಾಸಕ ವಿನಯ ಕುಲಕರ್ಣಿ (ETV Bharat)

ನನ್ನ ಪಕ್ಷ, ಕ್ಷೇತ್ರದ ಜನರು ಜೊತೆಗಿದ್ದಾರೆ. ಪತ್ನಿ, ಮಕ್ಕಳು ಹೊರಗಡೆ ಇದ್ದು ಎಲ್ಲವನ್ನೂ ನೋಡಿಕೊಳ್ಳುತ್ತಾರೆ‌. ಹಾಗಾಗಿ, ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ. ಕೇಸ್ ಏನಾಗುತ್ತದೆ ನೋಡುತ್ತೇನೆ. ನನಗೆ ಸಚಿವ ಸ್ಥಾನ ನೀಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.

ನನ್ನ ವಿರುದ್ಧ ಕುತಂತ್ರ ಮಾಡಿದವರಿಗೆ ಸಂದೇಶ ಕೊಡುವ ಅವಶ್ಯಕತೆ ಇಲ್ಲ. ನನ್ನ ವಿರೋಧಿಗಳಿಗೆ ಕಾಲವೇ ಉತ್ತರಿಸುತ್ತದೆ. ಕಾಲಾಯ ತಸ್ಮೈ ನಮಃ ಎಂದಷ್ಟೇ ಎಂದು ಹೇಳಿದರು.

ನನ್ನ ಕೇಸ್ ಇರುವ ಹಿನ್ನೆಲೆಯಲ್ಲಿ ಇಂದು ಧಾರವಾಡ ಅಧಿಕಾರಿಗಳೊಂದಿಗೆ ಬೆಳಗಾವಿಯಲ್ಲಿ ಸಭೆ ಮಾಡಿದ್ದೇನೆ. ಜನರಿಗೆ ತೊಂದರೆ ಆಗಬಾರದು. ಪ್ರಗತಿಯಲ್ಲಿರುವ ಅಭಿವೃದ್ಧಿ ಕೆಲಸಗಳನ್ನು ಬೇಗನೆ ಮುಗಿಸಬೇಕು. ಮಳೆಗಾಲ ಆರಂಭವಾಗುತ್ತಿದ್ದು, ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಆಗುವ ಸಾಧ್ಯತೆ ಇದೆ. ಹಾಗಾಗಿ, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದೇನೆ ಎಂದರು.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಸಾವು ಪ್ರಕರಣದಲ್ಲಿ ತಪ್ಪಾಗಿರುವುದು ನಿಜ. ಅದರಲ್ಲಿ ಪ್ರಶ್ನೆಯೇ ಇಲ್ಲ. ಇಂಟಲಿಜೆನ್ಸ್ ಫೆಲ್ಯೂರೋ ಮತ್ತೊಂದೋ. ಆದರೆ, ಆ ಸ್ಟೇಡಿಯಂ ಸಾಮರ್ಥ್ಯವೇ 35 ಸಾವಿರ. ಬೆಂಗಳೂರು ಇತಿಹಾಸದಲ್ಲಿ ಅಷ್ಟೊಂದು ಜನ ಸೇರಿದ್ದು ಇದೇ ಮೊದಲು. ನಿರ್ವಹಣೆ ಮಾಡಬೇಕಿತ್ತು. ಆದರೆ, ನಿರ್ವಹಣೆ ಮಾಡದಷ್ಟು ಜನರು ಸೇರಿದ್ದರು. ಅಷ್ಟು ಜನರು ಸೇರುತ್ತಾರೆ ಅಂತಾ ಯಾರಿಗೂ ನಿರೀಕ್ಷೆ ಇರಲಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಪೂರ್ವಸಿದ್ಧತೆಗೆ ಸಮಯದ ಅವಶ್ಯಕತೆಯೂ ಇತ್ತು. ತರಾತುರಿಯಲ್ಲಿ ಸಿದ್ಧತೆ ಆಗಿದ್ದರಿಂದ ಸ್ವಲ್ಪ ಅಸ್ತವ್ಯಸ್ತವಾಗಿದೆ. ಜನರೂ ಕೂಡ ಬಹಳ ನಿರ್ಲಕ್ಷ್ಯ ವಹಿಸಿದ್ದಾರೆ‌. ಸಣ್ಣಪುಟ್ಟ ಮಕ್ಕಳನ್ನೂ ಕರೆದುಕೊಂಡು ಬಂದಿದ್ದರು. ಹೀಗಿದ್ದಾಗ ಯಾವುದೇ ಸರ್ಕಾರವಿದ್ದರೂ ನಿಯಂತ್ರಿಸುವುದು ಕಷ್ಟವಾಗುತ್ತದೆ ಎಂದು ವಿನಯ ಕುಲಕರ್ಣಿ ಹೇಳಿದರು.

ಇದನ್ನೂ ಓದಿ: ಯೋಗೇಶಗೌಡ ಹತ್ಯೆ ಕೇಸ್: ವಿನಯ್ ಕುಲಕರ್ಣಿ ಜಾಮೀನು ರದ್ದು: ಸಹೋದರ ಹೇಳೋದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.