ETV Bharat / state

ಕೆಲಸ ಸರಿಯಾಗಿ ಮಾಡಿದರೆ ನಿಮಗೆ ತೊಂದರೆಯಾಗುವುದಿಲ್ಲ: ನಗರ ಪೊಲೀಸರಿಗೆ ನೂತನ ಕಮಿಷನರ್ ಅಭಯ - NEW COMMISSIONER ASSURANCE

ಈ ಹಿಂದೆ ಬೆಂಗಳೂರು ನಗರ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ನನ್ನ ನೇತೃತ್ವದಲ್ಲಿ ಒಳ್ಳೆಯ ಕೆಲಸ ಮಾಡಲಿದ್ಧಾರೆ ಎಂಬ ನಂಬಿಕೆಯಿದೆ ಎಂದು ಸೀಮಂತ್ ಕುಮಾರ್ ಸಿಂಗ್​ ತಿಳಿಸಿದರು.

NEW COMMISSIONER SEEMANT KUMAR SINGH
ಪೊಲೀಸ್​ ಕಮಿಷನರ್​ ಸೀಮಂತ್ ಕುಮಾರ್ ಸಿಂಗ್ (ETV Bharat)
author img

By ETV Bharat Karnataka Team

Published : June 6, 2025 at 3:42 PM IST

1 Min Read

ಬೆಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿ ಅಧಿಕಾರ ಸ್ವೀಕರಿಸುವ ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಧೈರ್ಯ ತುಂಬಿದ್ದಾರೆ. ಸರಿಯಾಗಿ ಕೆಲಸ ಮಾಡಿದರೆ ನಿಮಗೆ ತೊಂದರೆಯಾಗುವುದಿಲ್ಲ ಎಂದು ಅಭಯ ನೀಡಿದ್ಧಾರೆ.

ಅಮಾನತುಗೊಂಡ ಬಿ.ದಯಾನಂದ್​ ಅವರ ಜಾಗಕ್ಕೆ ಸೀಮಂತ್ ಕುಮಾರ್ ಅವರನ್ನು ಸರ್ಕಾರ ನೇಮಿಸಿದ್ದು, ಈಗಾಗಲೇ ಪದಗ್ರಹಣ ಮಾಡಿದ್ದಾರೆ.

ಪೊಲೀಸ್​ ಕಮಿಷನರ್​ ಸೀಮಂತ್ ಕುಮಾರ್ ಸಿಂಗ್ (ETV Bharat)

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, "ನಿನ್ನೆ ನಗರ ಪೊಲೀಸ್ ಆಯುಕ್ತನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನೈಟ್ ರೌಂಡ್ಸ್ ಹೋಗಿ ಪರಿಶೀಲನೆ ನಡೆಸಿದ್ದೇನೆ. ಚಾರ್ಜ್ ತೆಗೆದುಕೊಳ್ಳುವ ಮುನ್ನವೇ ನಮ್ಮ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಪ್ರಕರಣ ದಾಖಲಿಸಿ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ಧಾರೆ. ಪ್ರಕರಣದ ಹೆಚ್ಚಿನ ವಿವರಗಳು ಇಷ್ಟು ಬೇಗ ನೀಡುವುದು ಸರಿಯಲ್ಲ. ಸಮಗ್ರ ವಿಚಾರಣೆ ನಡೆಸಿದ ಬಳಿಕ ಮಾಹಿತಿ ನೀಡಲಾಗುವುದು" ಎಂದರು.

"ಈ ಹಿಂದೆ ಬೆಂಗಳೂರು ನಗರ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ನನ್ನ ನೇತೃತ್ವದಲ್ಲಿ ಒಳ್ಳೆಯ ಕೆಲಸ ಮಾಡಲಿದ್ಧಾರೆ ಎಂಬ ನಂಬಿಕೆಯಿದೆ. ಹಿಂದಿನಿಂದಲೂ ಸಿಸ್ಟಮ್ಯಾಟಿಕ್ ಆಗಿ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ನಡೆಯುತ್ತಿದೆ. ಕೆಲವೊಮ್ಮೆ ಸವಾಲಿನ ಸ್ಥಿತಿ ಎದುರಾದಾಗ ಅದನ್ನು ಸ್ವೀಕರಿಸಿ ಕೆಲಸ ಮಾಡಬೇಕಿದೆ. ಜನಸ್ನೇಹಿ ರೀತಿ ಕೆಲಸ ಮಾಡಿದರೆ ನಿಮಗೆ ಏನು ಆಗುವುದಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ತಿಳಿಸಿದರು.

ಇದನ್ನೂ ಓದಿ: ರಾತ್ರೋರಾತ್ರಿ ಬೆಂಗಳೂರು ಪೊಲೀಸ್​ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾಗಿ ಅಧಿಕಾರ ಸ್ವೀಕರಿಸುವ ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಧೈರ್ಯ ತುಂಬಿದ್ದಾರೆ. ಸರಿಯಾಗಿ ಕೆಲಸ ಮಾಡಿದರೆ ನಿಮಗೆ ತೊಂದರೆಯಾಗುವುದಿಲ್ಲ ಎಂದು ಅಭಯ ನೀಡಿದ್ಧಾರೆ.

ಅಮಾನತುಗೊಂಡ ಬಿ.ದಯಾನಂದ್​ ಅವರ ಜಾಗಕ್ಕೆ ಸೀಮಂತ್ ಕುಮಾರ್ ಅವರನ್ನು ಸರ್ಕಾರ ನೇಮಿಸಿದ್ದು, ಈಗಾಗಲೇ ಪದಗ್ರಹಣ ಮಾಡಿದ್ದಾರೆ.

ಪೊಲೀಸ್​ ಕಮಿಷನರ್​ ಸೀಮಂತ್ ಕುಮಾರ್ ಸಿಂಗ್ (ETV Bharat)

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್, "ನಿನ್ನೆ ನಗರ ಪೊಲೀಸ್ ಆಯುಕ್ತನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನೈಟ್ ರೌಂಡ್ಸ್ ಹೋಗಿ ಪರಿಶೀಲನೆ ನಡೆಸಿದ್ದೇನೆ. ಚಾರ್ಜ್ ತೆಗೆದುಕೊಳ್ಳುವ ಮುನ್ನವೇ ನಮ್ಮ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಪ್ರಕರಣ ದಾಖಲಿಸಿ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ಧಾರೆ. ಪ್ರಕರಣದ ಹೆಚ್ಚಿನ ವಿವರಗಳು ಇಷ್ಟು ಬೇಗ ನೀಡುವುದು ಸರಿಯಲ್ಲ. ಸಮಗ್ರ ವಿಚಾರಣೆ ನಡೆಸಿದ ಬಳಿಕ ಮಾಹಿತಿ ನೀಡಲಾಗುವುದು" ಎಂದರು.

"ಈ ಹಿಂದೆ ಬೆಂಗಳೂರು ನಗರ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ನನ್ನ ನೇತೃತ್ವದಲ್ಲಿ ಒಳ್ಳೆಯ ಕೆಲಸ ಮಾಡಲಿದ್ಧಾರೆ ಎಂಬ ನಂಬಿಕೆಯಿದೆ. ಹಿಂದಿನಿಂದಲೂ ಸಿಸ್ಟಮ್ಯಾಟಿಕ್ ಆಗಿ ನಗರ ಪೊಲೀಸ್ ಇಲಾಖೆಯಲ್ಲಿ ಕೆಲಸ ನಡೆಯುತ್ತಿದೆ. ಕೆಲವೊಮ್ಮೆ ಸವಾಲಿನ ಸ್ಥಿತಿ ಎದುರಾದಾಗ ಅದನ್ನು ಸ್ವೀಕರಿಸಿ ಕೆಲಸ ಮಾಡಬೇಕಿದೆ. ಜನಸ್ನೇಹಿ ರೀತಿ ಕೆಲಸ ಮಾಡಿದರೆ ನಿಮಗೆ ಏನು ಆಗುವುದಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ತಿಳಿಸಿದರು.

ಇದನ್ನೂ ಓದಿ: ರಾತ್ರೋರಾತ್ರಿ ಬೆಂಗಳೂರು ಪೊಲೀಸ್​ ಆಯುಕ್ತರಾಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.