ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ಪ್ರಕರಣ ಹೆಚ್ಚಳವನ್ನು ಗಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ಪ್ರಕರಣ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿ, ಇದಕ್ಕೆ ಏನಾದ್ರೂ ಉಪಾಯ ಕಂಡು ಹಿಡಿಯಬೇಕಿದೆ. ಇಂತ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಇಂತಹ ಮನಸ್ಥಿತಿ ಇರುವವರನ್ನು ಗುರುತಿಸಬೇಕು. ಯಾವುದಾದರೂ ಸಂಘಟನೆ ಇದ್ಯಾ, ಇಂಡುವಿಶ್ಯುಲ್ ಇದ್ದಾರಾ ನೋಡಬೇಕು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಈ ಕುರಿತಂತೆ ಸೂಚನೆ ನೀಡಿರುವೆ ಎಂದರು.
ಮೈಕ್ರೋ ಫೈನಾನ್ಸ್ ದೋಖಾ ವಿಚಾರವಾಗಿ ಪ್ರತಿಕ್ರಿಯಿಸಿ, ಹಣಕಾಸು ಇಲಾಖೆ ಇದಕ್ಕೆ ದಾರಿ ಹುಡುಕಬೇಕು. ನಾವು ಮಾಡುವುದಕ್ಕೆ ಬರಲ್ಲ. ಇನ್ನು ಬೀದರ್, ಮಂಗಳೂರು ದರೋಡೆ ಪ್ರಕರಣದ ಮಾಹಿತಿ ಕಲೆಹಾಕಲಾಗಿದೆ. ಶೀಘ್ರವಾಗಿ ಸೆಕ್ಯೂರ್ ಮಾಡುತ್ತೇವೆ. ಅವರು ಬೇರೆ ರಾಜ್ಯದವರು ಅಂತ ಮಾಹಿತಿ ಇದೆ ಎಂದು ಪರಮೇಶ್ವರ್ ಹೇಳಿದರು.
ಸಭಾಪತಿ ಹೊರಟ್ಟಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾವ ಹಂತದಲ್ಲಿ ಚರ್ಚೆಯಾಗಿದೆ ಗೊತ್ತಿಲ್ಲ. ಬಿಜೆಪಿ ನಮಗೆ ಒಡೆದ ಮನೆ ಅಂತಿದ್ರು. ಅವರ ಮನೆಗೆ ಎಷ್ಟು ಬಾಗಿಲು ಹೇಳಬೇಕಲ್ಲ?. ನಮಗೆ ಹೇಳ್ತಿದ್ರಲ್ವಾ?. ಈಗ ಏನು ಮಾಡ್ತೀರಾ ಅಂತ ಕೇಳ್ತೇನೆ ಎಂದರು.
ಸೆಂಟ್ರಲ್ ಜೈಲ್ ವಿಭಜನೆ ವಿಚಾರವಾಗಿ ಮಾತನಾಡಿ, ಜೈಲಿನ ಸೆಕ್ಯೂರಿಟಿ ಟೈಟ್ ಆಗಬೇಕು. ಜೈಲ್ ಸಿಬ್ಬಂದಿ ರಿಕ್ರೂಟ್ ಆಗಬೇಕು. ಜೈಲ್ ಡಿವೈಡ್ ಸದ್ಯಕ್ಕೆ ಪ್ರಪೋಸಲ್ ಇಲ್ಲ ಎಂದರು.