ETV Bharat / state

ಒಳಮೀಸಲಾತಿ ಸಮೀಕ್ಷೆ ಅವಧಿ ಮತ್ತೆ ವಿಸ್ತರಣೆ; ಜೂ.22ವರೆಗೆ ಮಾಹಿತಿ ನೀಡಲು ಅವಕಾಶ - INTERNAL CAST SURVEY

ಒಳಮೀಸಲಾತಿ ಸಮೀಕ್ಷೆ ಅವಧಿ ಮತ್ತೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಮೀಕ್ಷೆಯಲ್ಲಿ ಶೇ.90 ರಷ್ಟು ಪ್ರಗತಿಯನ್ನು ಸಾಧಿಸಿದ್ದು, ಉಳಿದಂತೆ ಸುಮಾರು ಶೇ. 10ರಷ್ಟು ಪ್ರಗತಿ ಸಾಧಿಸಬೇಕಿದೆ.

File Photo
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : June 8, 2025 at 6:22 PM IST

2 Min Read

ಬೆಂಗಳೂರು: ಒಳ ಮೀಸಲಾತಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಜೂ. 22ರವರೆಗೆ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದೆ. ಆಯೋಗ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು 2025 ನೇ ಏಪ್ರಿಲ್ 5 ರಿಂದ ಕೈಗೊಳ್ಳಲಾಗಿದೆ.

ಶೇ. 90 ರಷ್ಟು ಪ್ರಗತಿ: ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ - 2025 ರನ್ನು 2025 ನೇ ಜೂನ್ 08 ರ ವರೆಗೆ ವಿಶೇಷ ಶಿಬಿರಗಳು ಹಾಗೂ online ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಈಗಾಗಲೇ 2025ನೇ ಜೂನ್ 06ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ. ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ.

ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ. ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರಿಕ ಸೇವಾ ಕೇಂದ್ರಗಳಾದ, "ಕರ್ನಾಟಕ ಒನ್" (Karnataka one) 'ಬೆಂಗಳೂರು ಒನ್" (Bengaluru one), (Grama one) ಹಾಗೂ 198 ಬಿ.ಬಿ.ಎಂ. ಪಿ ವಾರ್ಡ್ ಕಚೇರಿ" (BBMP ward offices) ಗಳಿಗೆ ಭೇಟಿ ನೀಡಿ 2025ನೇ ಜೂನ್ 22ರ ವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ. ಜೊತೆಗೆ online ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration ಲಿಂಕ್ ಮೂಲಕ 2025ನೇ ಜೂನ್ 22ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ: ಸಮೀಕ್ಷೆಯಲ್ಲಿ 1.35 ಕೋಟಿ ಕುಟುಂಬಗಳು ಭಾಗಿ; ಜಾತಿ ಗಣತಿ ಬಗ್ಗೆ ಸರ್ಕಾರದ ಅಧಿಕೃತ ಮಾಹಿತಿ

ಬೆಂಗಳೂರು: ಒಳ ಮೀಸಲಾತಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಜೂ. 22ರವರೆಗೆ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದೆ. ಆಯೋಗ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು 2025 ನೇ ಏಪ್ರಿಲ್ 5 ರಿಂದ ಕೈಗೊಳ್ಳಲಾಗಿದೆ.

ಶೇ. 90 ರಷ್ಟು ಪ್ರಗತಿ: ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ - 2025 ರನ್ನು 2025 ನೇ ಜೂನ್ 08 ರ ವರೆಗೆ ವಿಶೇಷ ಶಿಬಿರಗಳು ಹಾಗೂ online ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಈಗಾಗಲೇ 2025ನೇ ಜೂನ್ 06ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ. ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ.

ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ. ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರಿಕ ಸೇವಾ ಕೇಂದ್ರಗಳಾದ, "ಕರ್ನಾಟಕ ಒನ್" (Karnataka one) 'ಬೆಂಗಳೂರು ಒನ್" (Bengaluru one), (Grama one) ಹಾಗೂ 198 ಬಿ.ಬಿ.ಎಂ. ಪಿ ವಾರ್ಡ್ ಕಚೇರಿ" (BBMP ward offices) ಗಳಿಗೆ ಭೇಟಿ ನೀಡಿ 2025ನೇ ಜೂನ್ 22ರ ವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ. ಜೊತೆಗೆ online ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration ಲಿಂಕ್ ಮೂಲಕ 2025ನೇ ಜೂನ್ 22ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ: ಸಮೀಕ್ಷೆಯಲ್ಲಿ 1.35 ಕೋಟಿ ಕುಟುಂಬಗಳು ಭಾಗಿ; ಜಾತಿ ಗಣತಿ ಬಗ್ಗೆ ಸರ್ಕಾರದ ಅಧಿಕೃತ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.