ETV Bharat / state

ಜಾತಿಗಣತಿ ವರದಿ ಬಗ್ಗೆ ತೀರ್ಮಾನಿಸಲು ಇನ್ನೂ ಒಂದು ವರ್ಷವಾಗಬಹುದು, ಚರ್ಚೆಯಾಗಬೇಕಿದೆ: ಸಚಿವ ಸತೀಶ್ ಜಾರಕಿಹೊಳಿ - MINISTER SATISH JARKIHOLI

ಹಿಂದಿನ ಸರ್ಕಾರಕ್ಕಾದ ಹಾಗೆ ನಮಗೆ ತೊಂದರೆ ಆಗದಂತೆ, ಯಾವುದೇ ಸಮಾಜಕ್ಕೆ ನೋವಾಗದಂತೆ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕಿದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದರು.

Discussions at Minister K.H. Muniyappa's house
ಸಚಿವ ಕೆ.ಹೆಚ್.ಮುನಿಯಪ್ಪ ಮನೆಯಲ್ಲಿ ಮಾತುಕತೆ (ETV Bharat)
author img

By ETV Bharat Karnataka Team

Published : April 18, 2025 at 2:42 PM IST

1 Min Read

ಬೆಂಗಳೂರು: "ಜಾತಿಗಣತಿ ವರದಿ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು. ಬಹಳ ಜಟಿಲ ಸಮಸ್ಯೆ ಇದು. ಬಹಳಷ್ಟು ಚರ್ಚೆಯಾಗಬೇಕಿದೆ" ಎಂದು ಸಚಿವ ಸತೀಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಸಂಜಯನಗರ ನಿವಾಸದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ ಬಳಿಕ ಮಾತನಾಡಿದ ಅವರು, "ಜಾತಿಗಣತಿ ತೀರ್ಮಾನ ಕೈಗೊಳ್ಳಲು ಇನ್ನೂ ಒಂದು ವರ್ಷವಾಗಬಹುದು. ಬಹಳ ಜಟಿಲ ಸಮಸ್ಯೆ ಇದು. ಬಹಳಷ್ಟು ಚರ್ಚೆಯಾಗಬೇಕಿದೆ. ವರದಿ ಸ್ವೀಕಾರಕ್ಕೆ ಹತ್ತು ವರ್ಷ ತೆಗೆದುಕೊಂಡಿದೆ. ಹೀಗಾಗಿ ಇನ್ನೂ 1 ವರ್ಷವಾಗಬಹುದು. ಅಂಕಿ ಸಂಖ್ಯೆ ಜನರೇ ಬರೆಸಿದ್ದು ಅಲ್ವಾ. ಸಹಿ ಮಾಡಿದವರೆ ವಿರೋಧ ಮಾಡುತ್ತಿದ್ದಾರೆ. ಸಮಗ್ರ ಚರ್ಚೆಯಾಗಬೇಕು" ಎಂದರು.

"ಸಾದರ ಜನರನ್ನು ಕಡಿಮೆ ತೋರಿಸಲಾಗಿದೆ. 64 ಸಾವಿರ ಅಷ್ಟೆ ತೋರಿಸಿದ್ದಾರೆ. ಮೂರು ಜಿಲ್ಲೆಗಳಲ್ಲಿ ಅವರಿದ್ದಾರೆ. ಹೀಗಾಗಿ ಅವರು ಧ್ವನಿ ಎತ್ತಿದ್ದಾರೆ. ಮೀಸಲಾತಿ ಹೆಚ್ಚು ಮಾಡುವುದು ಈಗ ಅಸಾಧ್ಯ. ಶಿಫಾರಸು ಅವರು ಮಾಡಿದ್ದಾರೆ.‌ ಈಗ ಅಂಕಿ - ಅಂಶಗಳನ್ನು ಸರಿ ಮಾಡಬೇಕು.‌ ಅಂಕಿ ಅಂಶಗಳನ್ನು ಸರಿ ಮಾಡಲು ಅವಕಾಶ ನೀಡಬೇಕು" ಎಂದು ತಿಳಿಸಿದರು.

Minister Satish Jarkiholi And Minister Muniyappa
ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಮುನಿಯಪ್ಪ (ETV Bharat)

"ಜಾತಿಗಣತಿ ವರದಿ ಶಿಫಾರಸು ಸರಿಯಾಗಿ ಜಾರಿ ಆಗಬೇಕು. ಸರಿಯಾಗಿ ನಾವು ಮಾಡದಿದ್ದರೆ ಕಷ್ಟವಾಗುತ್ತದೆ. ನಾವು ಸರಿಯಾಗಿ ಜಾರಿ ಮಾಡಬೇಕು. ಇಲ್ಲವಾದರೆ ಹಿಂದಿನ ಸರ್ಕಾರದಂತೆ ನಮಗೆ ತೊಂದರೆಯಾಗುತ್ತದೆ. ಯಾವುದೇ ಸಮಾಜಕ್ಕೆ ನೋವಾಗಬಾರದು. ಇದಷ್ಟೇ ನಮ್ಮ ಉದ್ದೇಶ" ಎಂದು ಸ್ಪಷ್ಟಪಡಿಸಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, "ಜಾತಿಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಜಾತಿಗಣತಿ ಯಾರಿಗೂ ತೊಂದರೆಯಾಗಲ್ಲ. ಲಿಂಗಾಯತ, ಒಕ್ಕಲಿಗ ಯಾರಿಗೂ ತೊಂದರೆಯಾಗಲ್ಲ. ಎಲ್ಲ ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ‌ಮಾಡುತ್ತೇವೆ" ಎಂದರು.

ಇದನ್ನೂ ಓದಿ: ಲಿಂಗಾಯತರ ಭದ್ರಕೋಟೆ ದಾವಣಗೆರೆಯಲ್ಲಿ ಜಾತಿ ಗಣತಿ ಬಗ್ಗೆ ಪರ-ವಿರೋಧದ ಚರ್ಚೆ: ಸ್ವಾಮೀಜಿಗಳು, ಸಚಿವರು, ಶಾಸಕರು ಹೇಳಿದ್ದಿಷ್ಟು

ಬೆಂಗಳೂರು: "ಜಾತಿಗಣತಿ ವರದಿ ತೀರ್ಮಾನಕ್ಕೆ ಬರಲು ಇನ್ನೂ ಒಂದು ವರ್ಷವಾಗಬಹುದು. ಬಹಳ ಜಟಿಲ ಸಮಸ್ಯೆ ಇದು. ಬಹಳಷ್ಟು ಚರ್ಚೆಯಾಗಬೇಕಿದೆ" ಎಂದು ಸಚಿವ ಸತೀಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಸಂಜಯನಗರ ನಿವಾಸದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಭೇಟಿ ಬಳಿಕ ಮಾತನಾಡಿದ ಅವರು, "ಜಾತಿಗಣತಿ ತೀರ್ಮಾನ ಕೈಗೊಳ್ಳಲು ಇನ್ನೂ ಒಂದು ವರ್ಷವಾಗಬಹುದು. ಬಹಳ ಜಟಿಲ ಸಮಸ್ಯೆ ಇದು. ಬಹಳಷ್ಟು ಚರ್ಚೆಯಾಗಬೇಕಿದೆ. ವರದಿ ಸ್ವೀಕಾರಕ್ಕೆ ಹತ್ತು ವರ್ಷ ತೆಗೆದುಕೊಂಡಿದೆ. ಹೀಗಾಗಿ ಇನ್ನೂ 1 ವರ್ಷವಾಗಬಹುದು. ಅಂಕಿ ಸಂಖ್ಯೆ ಜನರೇ ಬರೆಸಿದ್ದು ಅಲ್ವಾ. ಸಹಿ ಮಾಡಿದವರೆ ವಿರೋಧ ಮಾಡುತ್ತಿದ್ದಾರೆ. ಸಮಗ್ರ ಚರ್ಚೆಯಾಗಬೇಕು" ಎಂದರು.

"ಸಾದರ ಜನರನ್ನು ಕಡಿಮೆ ತೋರಿಸಲಾಗಿದೆ. 64 ಸಾವಿರ ಅಷ್ಟೆ ತೋರಿಸಿದ್ದಾರೆ. ಮೂರು ಜಿಲ್ಲೆಗಳಲ್ಲಿ ಅವರಿದ್ದಾರೆ. ಹೀಗಾಗಿ ಅವರು ಧ್ವನಿ ಎತ್ತಿದ್ದಾರೆ. ಮೀಸಲಾತಿ ಹೆಚ್ಚು ಮಾಡುವುದು ಈಗ ಅಸಾಧ್ಯ. ಶಿಫಾರಸು ಅವರು ಮಾಡಿದ್ದಾರೆ.‌ ಈಗ ಅಂಕಿ - ಅಂಶಗಳನ್ನು ಸರಿ ಮಾಡಬೇಕು.‌ ಅಂಕಿ ಅಂಶಗಳನ್ನು ಸರಿ ಮಾಡಲು ಅವಕಾಶ ನೀಡಬೇಕು" ಎಂದು ತಿಳಿಸಿದರು.

Minister Satish Jarkiholi And Minister Muniyappa
ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಮುನಿಯಪ್ಪ (ETV Bharat)

"ಜಾತಿಗಣತಿ ವರದಿ ಶಿಫಾರಸು ಸರಿಯಾಗಿ ಜಾರಿ ಆಗಬೇಕು. ಸರಿಯಾಗಿ ನಾವು ಮಾಡದಿದ್ದರೆ ಕಷ್ಟವಾಗುತ್ತದೆ. ನಾವು ಸರಿಯಾಗಿ ಜಾರಿ ಮಾಡಬೇಕು. ಇಲ್ಲವಾದರೆ ಹಿಂದಿನ ಸರ್ಕಾರದಂತೆ ನಮಗೆ ತೊಂದರೆಯಾಗುತ್ತದೆ. ಯಾವುದೇ ಸಮಾಜಕ್ಕೆ ನೋವಾಗಬಾರದು. ಇದಷ್ಟೇ ನಮ್ಮ ಉದ್ದೇಶ" ಎಂದು ಸ್ಪಷ್ಟಪಡಿಸಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, "ಜಾತಿಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಜಾತಿಗಣತಿ ಯಾರಿಗೂ ತೊಂದರೆಯಾಗಲ್ಲ. ಲಿಂಗಾಯತ, ಒಕ್ಕಲಿಗ ಯಾರಿಗೂ ತೊಂದರೆಯಾಗಲ್ಲ. ಎಲ್ಲ ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ‌ಮಾಡುತ್ತೇವೆ" ಎಂದರು.

ಇದನ್ನೂ ಓದಿ: ಲಿಂಗಾಯತರ ಭದ್ರಕೋಟೆ ದಾವಣಗೆರೆಯಲ್ಲಿ ಜಾತಿ ಗಣತಿ ಬಗ್ಗೆ ಪರ-ವಿರೋಧದ ಚರ್ಚೆ: ಸ್ವಾಮೀಜಿಗಳು, ಸಚಿವರು, ಶಾಸಕರು ಹೇಳಿದ್ದಿಷ್ಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.