ETV Bharat / state

ಅಪಾಯಕಾರಿ ಶ್ವಾನಗಳ ಸಂತಾನೋತ್ಪತ್ತಿಗೆ ನಿಷೇಧ: ಕೇಂದ್ರದ ಕ್ರಮಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ - High Court

author img

By ETV Bharat Karnataka Team

Published : Apr 7, 2024, 7:26 AM IST

ಅತ್ಯಂತ ಅಪಾಯಕಾರಿ ಹಾಗೂ ಕ್ರೂರ ಶ್ವಾನಗಳ ತಳಿಗಳ ಸಂತಾನೋತ್ಪತ್ತಿಗೆ ನಿಷೇಧ ಸಂಬಂಧ ಹೈಕೋರ್ಟ್ ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿದೆ.

karnataka-high-court
ಅಪಾಯಕಾರಿ ಶ್ವಾನಗಳ ಸಂತಾನೋತ್ಪತ್ತಿಗೆ ನಿಷೇಧ: ಕೇಂದ್ರದ ಕ್ರಮಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ಶ್ವಾನಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಾಗೂ ಕ್ರೂರವಾಗಿರುವ ತಳಿಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕರ್ನಾಟಕ ರಾಜ್ಯಕ್ಕೆ ಸೀಮಿತವಾಗಿ ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ.

ಬೆಂಗಳೂರು ನಗರದಲ್ಲಿ ವಾಸವಿರುವ ಕಿಂಗ್ ಸೋಲ್ಮನ್ ಡೇವಿಡ್ ಮತ್ತು ಮರ್ಡೋನಾ ಜಾನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ. ಅಲ್ಲದೆ, ಮುಂದಿನ ವಿಚಾರಣೆ ವೇಳೆಗೆ ಈ ಸಂಬಂಧ ಸೂಕ್ತ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಕಳೆದ‌ ಬಾರಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಮನುಷ್ಯನ ಜೀವಕ್ಕೆ ಅಪಾಯಕಾರಿ ಮತ್ತು ಉಗ್ರವಾಗಿ ವರ್ತಿಸುವ ತಳಿಯ ಶ್ವಾನಗಳನ್ನು ಗುರುತಿಸುವುದಕ್ಕೆ ಆಳವಾದ ಅಧ್ಯಯನ ಅಗತ್ಯವಿದೆ. ಆದರೆ, ಸುತ್ತೋಲೆಯಲ್ಲಿ ಉಲ್ಲೇಖಿಸದ ಹಲವು ತಳಿಗಳು ಕ್ರೂರ ವರ್ಗಕ್ಕೆ ಸೇರಲಿವೆ'' ಎಂದು ಪೀಠಕ್ಕೆ ವಿವರಿಸಿದ್ದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, ''ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ವೇಳೆ ದೆಹಲಿ ನ್ಯಾಯಾಲಯ ಈ ಸಂಬಂಧ ನಿರ್ದೇಶನ ನೀಡಿದೆ. ಅಲ್ಲದೆ, ಕೇಂದ್ರ ಸರ್ಕಾರವು ಸಂಬಂಧಪಟ್ಟವರೊಂದಿಗೆ ಚರ್ಚೆ ನಡೆಸಬೇಕು. ಜೊತೆಗೆ, ಅರ್ಜಿದಾರರ ಮನವಿಯನ್ನು ಪರಿಗಣಿಸಿ ಆದೇಶದ ಪ್ರತಿ ಲಭ್ಯವಾದ ಮೂರು ತಿಂಗಳೊಳಗೆ ಈ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ'' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನೂ ಓದಿ: ಫಲವಂತಿಕೆ, ನಿಶ್ಶಕ್ತಿ ಬಗ್ಗೆ ಪತಿ-ಪತ್ನಿ ಕಿತ್ತಾಟ: ಗಂಡನ ಸಾಮರ್ಥ್ಯ ಪರೀಕ್ಷೆಗೆ ಸುಪ್ರೀಂ ಕೋರ್ಟ್​ ಅವಕಾಶ - Supreme Court

ಕ್ರೂರ ಹಾಗೂ ಅಪಾಯಕಾರಿ ಶ್ವಾನಗಳ ತಳಿಗಳ (ಅಮೆರಿಕನ್ ಸ್ಟಾಫರ್ಡ್ ಶೈರ್, ಟೆರಿಯರ್, ಡೋಗೋ ಅರ್ಜೆಂಟೇನೋ, ಬುಲ್ ಡಾಗ್, ಕಂಗಲ್, ಸೆಂಟ್ರಲ್ ಏಷ್ಯನ್ ಷಫರ್ಡ್ ಡಾಗ್ ಸೇರಿದಂತೆ ಮಿಶ್ರ ತಳಿಯ ಶ್ವಾನಗಳ) ಸಂತಾನೋತ್ಪತ್ತಿ ನಿಷೇಧಿಸುವ ಸಲುವಾಗಿ ಅವುಗಳ ಮಾಲೀಕರು ಸಂತಾನ ಹರಣಕ್ಕಾಗಿ ಅಗತ್ಯವಿರುವ ಔಷಧಿಗಳನ್ನು ಬಳಕೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿತ್ತು. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ 2024 ರ ಮಾರ್ಚ್ 12 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಈ ಬಗ್ಗೆ ತಿಳಿಸಲಾಗಿತ್ತು. ಇದನ್ನು ಅರ್ಜಿದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಸ್ತೆ ವಿಸ್ತರಣೆ: ನಾಗವನ ಉಳಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್​ಹೆಚ್‌ಎಐಗೆ ಸೂಚನೆ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.