ETV Bharat / state

ಮಂಗಳೂರು: ಕ್ರಿಕೆಟ್​ ಪಂದ್ಯದ ವೇಳೆ ಗುಂಪು ಹಲ್ಲೆಯಿಂದ ಅಪರಿಚಿತ ವ್ಯಕ್ತಿ ಸಾವು, 15 ಆರೋಪಿಗಳು ಅರೆಸ್ಟ್ - A MAN BEATEN TO DEATH BY MOB

ಅಪರಿಚಿತ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ 15 ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ತಿಳಿಸಿದ್ದಾರೆ.

man-beaten-to-death-by-mob-after-crikcet-dispute-in-mangaluru
ಅಪರಿಚಿತ ವ್ಯಕ್ತಿಯ ಹತ್ಯೆ ಮಾಡಿದ ಆರೋಪಿಗಳು (ETV Bharat)
author img

By ETV Bharat Karnataka Team

Published : April 29, 2025 at 5:29 PM IST

3 Min Read

ಮಂಗಳೂರು (ದಕ್ಷಿಣ ಕನ್ನಡ) : ಭಾನುವಾರ ಸಂಜೆ ಕುಡುಪುವಿನಲ್ಲಿ ಸಿಕ್ಕಿದ ಅಪರಿಚಿತ ಶವದ ತನಿಖೆ ನಡೆಸಿದ ಪೊಲೀಸರು, ಕ್ರಿಕೆಟ್ ಪಂದ್ಯಾವಳಿಯ ವೇಳೆ ವ್ಯಕ್ತಿಯನ್ನು 30 ಮಂದಿಯ ತಂಡ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆಗೈದು ಹತ್ಯೆ ಮಾಡಿದೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು, ಹತ್ಯೆ ಸಂಬಂಧ 25 ಆರೋಪಿಗಳನ್ನು ಗುರುತಿಸಲಾಗಿದೆ. ಈಗಾಗಲೇ 15 ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಮಾತನಾಡಿದರು (ETV Bharat)

ಸಚಿನ್ ಟಿ (26), ದೇವದಾಸ್ (50), ಮಂಜುನಾಥ್ (32), ಸಾಯಿದೀಪ್ (29), ನಿತೇಶ್ ಕುಮಾರ್ ಯಾನೆ ಸಂತೋಷ್ (33), ದೀಕ್ಷಿತ್ ಕುಮಾರ್, ಸಂದೀಪ್ (23), ವಿವಿಯನ್ ಆಳ್ವಾರೀಸ್ (41), ಶ್ರೀದತ್ತ (32), ರಾಹುಲ್ (23) ಪ್ರದೀಪ್ ಕುಮಾರ್ (35), ಮನೀಷ್ ಶೆಟ್ಟಿ (21), ಧನುಷ್ (31), ದೀಕ್ಷಿತ್ (27), ಕಿಶೋರ್ ಕುಮಾರ್ (37) ಬಂಧಿತರು ಎಂದು ಅವರು ತಿಳಿಸಿದರು.

ಪ್ರಕರಣ ಹಿನ್ನೆಲೆ: ಏಪ್ರಿಲ್ 27 ರಂದು ಸಂಜೆ ಸುಮಾರು 5:30 ಗಂಟೆಗೆ ಮಂಗಳೂರು ನಗರದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಲಭಿಸುತ್ತಿದ್ದಂತೆ, ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಅಪರಾಧ ಸ್ಥಳ ಪರಿಶೀಲನಾ ತಜ್ಞರು ಹಾಗೂ ಮೊಬೈಲ್ ಪೊರೆನ್ಸಿಕ್ ತಂಡಗಳನ್ನು ಸ್ಥಳಕ್ಕೆ ಕರೆಯಲಾಯಿತು ಎಂದರು.

ಸ್ಥಳ ಪರಿಶೀಲನೆ ವೇಳೆ ಮೃತದೇಹದ ಮೈಮೇಲೆ ಸ್ಪಷ್ಟವಾದ ಹಾಗೂ ಗಂಭೀರ ಗಾಯಗಳು ಕಂಡುಬಾರದ ಕಾರಣ ಅಪರಾಧ ಸ್ಥಳ ಪರಿಶೀಲನಾ ತಜ್ಞರು ಮತ್ತು ಪೊರೆನ್ಸಿಕ್ ತಂಡಗಳು ಶವ ಪರೀಕ್ಷೆ (ಪೋಸ್ಟ್​ ಮಾರ್ಟಂ) ನಡೆಸುವಂತೆ ಶಿಫಾರಸು ಮಾಡಿದ್ದರು. ಅದರಂತೆ, ಪ್ರಾಥಮಿಕವಾಗಿ, ಅಪರಿಚಿತ ಮೃತದೇಹ ಕಂಡುಬಂದ ಬಗ್ಗೆ ಸ್ವೀಕೃತ ದೂರಿನಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ, ಅಸ್ವಾಭಾವಿಕ ಸಾವು ಪ್ರಕರಣವನ್ನು (UDR) ದಾಖಲಿಸಲಾಗಿತ್ತು. ಹಾಗೂ ಮೃತದೇಹವನ್ನು ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು ಎಂದು ಹೇಳಿದರು.

ತನಿಖೆಯಲ್ಲಿ ಲಭ್ಯವಾದ ಮಾಹಿತಿ ಹಾಗೂ ಸ್ಥಳೀಯ ವ್ಯಕ್ತಿಗಳ ಭಾಗವಹಿಸುವಿಕೆಯ ಬಗ್ಗೆ ಹೆಚ್ಚುತ್ತಿರುವ ಅನುಮಾನಗಳ ಆಧಾರದಲ್ಲಿ ಏಪ್ರಿಲ್ 28 ರಂದು ಅಪರಿಚಿತ ಮೃತದೇಹದ ಶವ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ನೀಡಿದ ಪ್ರಾಥಮಿಕ ವರದಿ ಪ್ರಕಾರ, ಮೃತನ ಬೆನ್ನು ಭಾಗದಲ್ಲಿ ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿರುತ್ತದೆ ಎಂದು ತಿಳಿಸಿದ್ದಾರೆ.

ತನಿಖೆಯಲ್ಲಿ ತಿಳಿದು ಬಂದಂತೆ ಏಪ್ರಿಲ್ 27 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ, ಅಪರಿಚಿತ ವ್ಯಕ್ತಿಗೆ ಕೆಲವರು ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾ ತದ್ವ ತುಳಿದು ಹಲ್ಲೆ ನಡೆಸಿದ್ದು, ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದು ಕಂಡುಬಂದಿರುತ್ತದೆ. ಈ ಸಂಬಂಧವಾಗಿ ದೀಪಕ್ ಕುಮಾರ್ ಎಂಬುವರು, 19 ಜನರು ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ 37/2025, 00: 103(2), 115(2), 189(2), 190, 191(1), 191(3), 240 ಭಾರತೀಯ ನ್ಯಾಯ ಸಂಹಿತೆ, 2023 (BNS, 2023) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಲಭ್ಯ ಮಾಹಿತಿಗಳ ಆಧಾರದಲ್ಲಿ ಸದರಿ ಕೃತ್ಯದಲ್ಲಿ ಸುಮಾರು 30 ಜನರು ಭಾಗವಹಿಸಿರುವ ಸಂಶಯವಿದ್ದು, ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪ್ರಥಮ ವರ್ತಮಾನ ವರದಿಯಲ್ಲಿ ಉಲ್ಲೇಖಿಸಲಾದ ಮತ್ತು ಕೃತ್ಯದಲ್ಲಿ ಭಾಗಿಯಾದ ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ, ಬಂಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕೊಲೆಯಾದ ವ್ಯಕ್ತಿಯ ಪತ್ತೆಯಾಗದ ಗುರುತು : ಗುಂಪು ಹತ್ಯೆಯಿಂದ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಈವರೆಗೂ ಸಾಧ್ಯವಾಗಿಲ್ಲ. ಸುಮಾರು 45 ವರ್ಷ ವಯಸ್ಸಿನ ಈ ವ್ಯಕ್ತಿ ಪಶ್ಚಿಮ ಬಂಗಾಳ ಅಥವಾ ಬಿಹಾರ ಮೂಲದವನಾಗಿರಬಹುದೆಂದು ಶಂಕಿಸಲಾಗಿದೆ. ಮತ್ತೊಂದೆಡೆ ಆತ ಮಲಯಾಳಂ ಮಾತನಾಡುತ್ತಿದ್ದ ಎಂಬ ಬಗ್ಗೆ ಮಾಹಿತಿ ಬಂದಿದ್ದು, ಕೇರಳದವನಾಗಿರಬಹುದೇ? ಎಂಬ ಸಂಶಯ ಮೂಡಿದೆ. ಈತನ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದು, ಈ ಸಂಬಂಧ ಪ್ರಕಟಣೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು: ಪಹಲ್ಗಾಮ್ ದಾಳಿಗೆ ಪಾಲ್ಗರ್ ಹತ್ಯೆ ತಳುಕು ಹಾಕಿ ಫೇಸ್‌ಬುಕ್ ಪೋಸ್ಟ್: ಪ್ರಕರಣ ದಾಖಲು - PROVOCATIVE POST CASE

ಮಂಗಳೂರು (ದಕ್ಷಿಣ ಕನ್ನಡ) : ಭಾನುವಾರ ಸಂಜೆ ಕುಡುಪುವಿನಲ್ಲಿ ಸಿಕ್ಕಿದ ಅಪರಿಚಿತ ಶವದ ತನಿಖೆ ನಡೆಸಿದ ಪೊಲೀಸರು, ಕ್ರಿಕೆಟ್ ಪಂದ್ಯಾವಳಿಯ ವೇಳೆ ವ್ಯಕ್ತಿಯನ್ನು 30 ಮಂದಿಯ ತಂಡ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆಗೈದು ಹತ್ಯೆ ಮಾಡಿದೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು, ಹತ್ಯೆ ಸಂಬಂಧ 25 ಆರೋಪಿಗಳನ್ನು ಗುರುತಿಸಲಾಗಿದೆ. ಈಗಾಗಲೇ 15 ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಮಾತನಾಡಿದರು (ETV Bharat)

ಸಚಿನ್ ಟಿ (26), ದೇವದಾಸ್ (50), ಮಂಜುನಾಥ್ (32), ಸಾಯಿದೀಪ್ (29), ನಿತೇಶ್ ಕುಮಾರ್ ಯಾನೆ ಸಂತೋಷ್ (33), ದೀಕ್ಷಿತ್ ಕುಮಾರ್, ಸಂದೀಪ್ (23), ವಿವಿಯನ್ ಆಳ್ವಾರೀಸ್ (41), ಶ್ರೀದತ್ತ (32), ರಾಹುಲ್ (23) ಪ್ರದೀಪ್ ಕುಮಾರ್ (35), ಮನೀಷ್ ಶೆಟ್ಟಿ (21), ಧನುಷ್ (31), ದೀಕ್ಷಿತ್ (27), ಕಿಶೋರ್ ಕುಮಾರ್ (37) ಬಂಧಿತರು ಎಂದು ಅವರು ತಿಳಿಸಿದರು.

ಪ್ರಕರಣ ಹಿನ್ನೆಲೆ: ಏಪ್ರಿಲ್ 27 ರಂದು ಸಂಜೆ ಸುಮಾರು 5:30 ಗಂಟೆಗೆ ಮಂಗಳೂರು ನಗರದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಲಭಿಸುತ್ತಿದ್ದಂತೆ, ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಅಪರಾಧ ಸ್ಥಳ ಪರಿಶೀಲನಾ ತಜ್ಞರು ಹಾಗೂ ಮೊಬೈಲ್ ಪೊರೆನ್ಸಿಕ್ ತಂಡಗಳನ್ನು ಸ್ಥಳಕ್ಕೆ ಕರೆಯಲಾಯಿತು ಎಂದರು.

ಸ್ಥಳ ಪರಿಶೀಲನೆ ವೇಳೆ ಮೃತದೇಹದ ಮೈಮೇಲೆ ಸ್ಪಷ್ಟವಾದ ಹಾಗೂ ಗಂಭೀರ ಗಾಯಗಳು ಕಂಡುಬಾರದ ಕಾರಣ ಅಪರಾಧ ಸ್ಥಳ ಪರಿಶೀಲನಾ ತಜ್ಞರು ಮತ್ತು ಪೊರೆನ್ಸಿಕ್ ತಂಡಗಳು ಶವ ಪರೀಕ್ಷೆ (ಪೋಸ್ಟ್​ ಮಾರ್ಟಂ) ನಡೆಸುವಂತೆ ಶಿಫಾರಸು ಮಾಡಿದ್ದರು. ಅದರಂತೆ, ಪ್ರಾಥಮಿಕವಾಗಿ, ಅಪರಿಚಿತ ಮೃತದೇಹ ಕಂಡುಬಂದ ಬಗ್ಗೆ ಸ್ವೀಕೃತ ದೂರಿನಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ, ಅಸ್ವಾಭಾವಿಕ ಸಾವು ಪ್ರಕರಣವನ್ನು (UDR) ದಾಖಲಿಸಲಾಗಿತ್ತು. ಹಾಗೂ ಮೃತದೇಹವನ್ನು ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು ಎಂದು ಹೇಳಿದರು.

ತನಿಖೆಯಲ್ಲಿ ಲಭ್ಯವಾದ ಮಾಹಿತಿ ಹಾಗೂ ಸ್ಥಳೀಯ ವ್ಯಕ್ತಿಗಳ ಭಾಗವಹಿಸುವಿಕೆಯ ಬಗ್ಗೆ ಹೆಚ್ಚುತ್ತಿರುವ ಅನುಮಾನಗಳ ಆಧಾರದಲ್ಲಿ ಏಪ್ರಿಲ್ 28 ರಂದು ಅಪರಿಚಿತ ಮೃತದೇಹದ ಶವ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ನೀಡಿದ ಪ್ರಾಥಮಿಕ ವರದಿ ಪ್ರಕಾರ, ಮೃತನ ಬೆನ್ನು ಭಾಗದಲ್ಲಿ ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿರುತ್ತದೆ ಎಂದು ತಿಳಿಸಿದ್ದಾರೆ.

ತನಿಖೆಯಲ್ಲಿ ತಿಳಿದು ಬಂದಂತೆ ಏಪ್ರಿಲ್ 27 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ, ಅಪರಿಚಿತ ವ್ಯಕ್ತಿಗೆ ಕೆಲವರು ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾ ತದ್ವ ತುಳಿದು ಹಲ್ಲೆ ನಡೆಸಿದ್ದು, ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದು ಕಂಡುಬಂದಿರುತ್ತದೆ. ಈ ಸಂಬಂಧವಾಗಿ ದೀಪಕ್ ಕುಮಾರ್ ಎಂಬುವರು, 19 ಜನರು ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ 37/2025, 00: 103(2), 115(2), 189(2), 190, 191(1), 191(3), 240 ಭಾರತೀಯ ನ್ಯಾಯ ಸಂಹಿತೆ, 2023 (BNS, 2023) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಲಭ್ಯ ಮಾಹಿತಿಗಳ ಆಧಾರದಲ್ಲಿ ಸದರಿ ಕೃತ್ಯದಲ್ಲಿ ಸುಮಾರು 30 ಜನರು ಭಾಗವಹಿಸಿರುವ ಸಂಶಯವಿದ್ದು, ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪ್ರಥಮ ವರ್ತಮಾನ ವರದಿಯಲ್ಲಿ ಉಲ್ಲೇಖಿಸಲಾದ ಮತ್ತು ಕೃತ್ಯದಲ್ಲಿ ಭಾಗಿಯಾದ ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ, ಬಂಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕೊಲೆಯಾದ ವ್ಯಕ್ತಿಯ ಪತ್ತೆಯಾಗದ ಗುರುತು : ಗುಂಪು ಹತ್ಯೆಯಿಂದ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಈವರೆಗೂ ಸಾಧ್ಯವಾಗಿಲ್ಲ. ಸುಮಾರು 45 ವರ್ಷ ವಯಸ್ಸಿನ ಈ ವ್ಯಕ್ತಿ ಪಶ್ಚಿಮ ಬಂಗಾಳ ಅಥವಾ ಬಿಹಾರ ಮೂಲದವನಾಗಿರಬಹುದೆಂದು ಶಂಕಿಸಲಾಗಿದೆ. ಮತ್ತೊಂದೆಡೆ ಆತ ಮಲಯಾಳಂ ಮಾತನಾಡುತ್ತಿದ್ದ ಎಂಬ ಬಗ್ಗೆ ಮಾಹಿತಿ ಬಂದಿದ್ದು, ಕೇರಳದವನಾಗಿರಬಹುದೇ? ಎಂಬ ಸಂಶಯ ಮೂಡಿದೆ. ಈತನ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದು, ಈ ಸಂಬಂಧ ಪ್ರಕಟಣೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು: ಪಹಲ್ಗಾಮ್ ದಾಳಿಗೆ ಪಾಲ್ಗರ್ ಹತ್ಯೆ ತಳುಕು ಹಾಕಿ ಫೇಸ್‌ಬುಕ್ ಪೋಸ್ಟ್: ಪ್ರಕರಣ ದಾಖಲು - PROVOCATIVE POST CASE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.