ETV Bharat / state

ಬೆಂಗಳೂರು: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ - Murder In Bengaluru

author img

By ETV Bharat Karnataka Team

Published : May 14, 2024, 11:11 AM IST

ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.

ಘಟನಾ ಸ್ಥಳ
ಘಟನಾ ಸ್ಥಳ (ETV Bharat)

ಬೆಂಗಳೂರು: ವ್ಯಕ್ತಿಯೊಬ್ಬನ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ತಡರಾತ್ರಿ ಜಯನಗರ 7ನೇ ಹಂತದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಬನಶಂಕರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತನ ವಿವರ ಇನ್ನೂ ಲಭ್ಯವಾಗಿಲ್ಲ.

ರಾತ್ರಿ ರಸ್ತೆ ಬದಿಯಲ್ಲಿ ಮಲಗಿದ್ದವನ ಮೇಲೆ ಮತ್ತೋರ್ವ ವ್ಯಕ್ತಿ ಬಂದು ಬಿದ್ದಿದ್ದು, ಇದೇ ವಿಚಾರವಾಗಿ ಇಬ್ಬರ ನಡುವೆ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ ಸಿಲುಕಿ 6 ದಿನಗಳ ಬಳಿಕ ಹೊರಬಂದ ಕಾರ್ಮಿಕ! - South Africa Building Collapse

ಡಿವೈಡರ್​ ಹಾರಿ ಟ್ರಕ್​ಗೆ ಗುದ್ದಿದ ಕಾರು​; ಸ್ಥಳದಲ್ಲೇ 6 ಜನ ಸಾವು - UP Road Accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.