ETV Bharat / state

ಜಾತಿಗಣತಿ ವರದಿ ಸಂಬಂಧ ಡಿಸಿಎಂ ನೇತೃತ್ವದಲ್ಲಿ ಕೈ ಒಕ್ಕಲಿಗ ಶಾಸಕರ ಸಭೆ: ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನ ಹೇಳುತ್ತೇವೆ ಎಂದ ಡಿಕೆಶಿ - CONGRESS VOKKALIGA MLAS MEETING

ಡಿಸಿಎಂ ಡಿ ಕೆ ಶಿವಕುಮಾರ್​ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಒಕ್ಕಲಿಗ ಸಚಿವರು, ಶಾಸಕರು, ರಾಜ್ಯಸಭೆ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು.

DCM D K Shivakumar Pressmeet
ಡಿಸಿಎಂ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ (ETV Bharat)
author img

By ETV Bharat Karnataka Team

Published : April 16, 2025 at 6:59 AM IST

Updated : April 16, 2025 at 10:36 AM IST

2 Min Read

ಬೆಂಗಳೂರು: "ಜಾತಿ ಸಮೀಕ್ಷೆ ವರದಿ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಒಕ್ಕಲಿಗ ಶಾಸಕರ ಸಭೆ ನಡೆಸಿದ್ದು, ಸಭೆಯ ತೀರ್ಮಾನವನ್ನು ಗುರುವಾರ ನಡೆಯುವ ವಿಶೇಷ ಸಭೆಯಲ್ಲಿ ಹೇಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರ ಪಾರ್ಕ್​ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಒಕ್ಕಲಿಗ ಸಚಿವರು, ಶಾಸಕರು, ರಾಜ್ಯಸಭೆ ಸದಸ್ಯರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಸಚಿವರಾದ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಎಂ.ಸಿ.ಸುಧಾಕರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಪ್ರೊ.ರಾಜೀವ್ ಗೌಡ, ಮಾಜಿ ಸಚಿವ, ಶಾಸಕರಾದ ಟಿ.ಬಿ.ಜಯಚಂದ್ರ, ಬಾಲಕೃಷ್ಣ, ಶಿವಲಿಂಗೇಗೌಡ, ಶರತ್ ಬಚ್ಚೆಗೌಡ, ಸಿ.ಪಿ ಯೋಗೇಶ್ವರ್, ಪ್ರಿಯಾ ಕೃಷ್ಣ, ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿ ಗೌಡ, ಎಸ್.ರವಿ, ದಿನೇಶ್ ಗೂಳಿಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಡಿಸಿಎಂ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ (ETV Bharat)

ವಾಸ್ತವಾಂಶ ಬಿಟ್ಟು ತಪ್ಪಾಗಿ ವರದಿ: ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ಜಾತಿ ಗಣತಿ ವರದಿ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಏ.17 ರಂದು ವಿಶೇಷ ಸಂಪುಟ ಸಭೆ ಇದೆ. ಶಾಸಕರು ಅವರ ಅಭಿಪ್ರಾಯ ತಿಳಿಸಿದ್ದಾರೆ. ಈ ಹಿಂದೆ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಆಗಬೇಕು ಅಂತ ನಾವೇ ಒಪ್ಪಿ ಸಮೀಕ್ಷೆ ಮಾಡಿಸಿದ್ದೇವೆ. ಕೋಟ್ಯಂತರ ರೂ. ಖರ್ಚು ಮಾಡಿ ಸರ್ವೇ ಮಾಡಲಾಗಿದೆ. ವಿಸ್ತೃತ ವರದಿ ಬೇಕು ಎಂದು ಶಾಸಕರು ಕೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ವಾಸ್ತವಾಂಶ ಬಿಟ್ಟು ತಪ್ಪಾಗಿ ವರದಿಯಾಗಿದೆ. ಮುಸ್ಲಿಮರು ಹೆಚ್ಚಿನ ಜನಸಂಖ್ಯೆಯಲ್ಲಿ ಇದ್ದಾರೆ ಎಂದು ವರದಿಯಾಗಿದೆ. ಅದು ಸುಳ್ಳು" ಎಂದು ಸ್ಪಷ್ಟಪಡಿಸಿದರು.

"ವಾಸ್ತವಾಂಶ ತಿಳಿಸುವ ಕೆಲಸ ಮಾಡುತ್ತೇವೆ. ಸಭೆಯಲ್ಲಿನ ತೀರ್ಮಾನವನ್ನು ಒಟ್ಟಾಗಿ ಸಂಪುಟ ಸಭೆಯಲ್ಲಿ ಹೇಳುತ್ತೇವೆ. ಎಲ್ಲಾ ಆಫ್​ ದಿ ರೆಕಾರ್ಡ್​ಗೆ ನಾವು ತೆರೆ ಎಳೆಯುತ್ತೇವೆ. ಎಲ್ಲಾ ಸಮಾಜಕ್ಕೂ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಸಮೀಕ್ಷೆಯನ್ನು ಸರಿಯಾಗಿ ಮಾಡಲಾಗಿದೆ. ಆದರೆ ವಿಪಕ್ಷಗಳು ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಮುಂಚೆ ಮಾಹಿತಿ ಇದ್ದಿಲ್ಲ. ಹೀಗಾಗಿ ಈಗ ಮಾಹಿತಿ ಸಿಕ್ಕಿದೆ. ಅದನ್ನು ಶಾಸಕರಿಗೆ ಹಂಚಲಿದ್ದೇವೆ. ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಕೆಲವರು ರಾಜಕಾರಣ ಮಾಡುವವರು ಮಾಡೇ ಮಾಡುತ್ತಾರೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.

ಕೆಲ ಶಾಸಕರಿಂದ ಆಕ್ಷೇಪ: ಕೆಲ ಕೈ ಶಾಕಸರು ಸಭೆಯಲ್ಲಿ ಸಮೀಕ್ಷೆ ಅಂಕಿ - ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಹೋಗಿ ಸಮೀಕ್ಷೇನೆ ನಡೆಸಿಲ್ಲ. ಹೀಗಾಗಿ ವರದಿಯ ಅಂಕಿ - ಅಂಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಲ ಒಕ್ಕಲಿಗ ಕೈ ಶಾಸಕರು ಮರು ಸರ್ವೇ ಮಾಡಿಸುವ ಬಗ್ಗೆನೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

ಇದನ್ನೂ ಓದಿ: ರಾಜ್ಯದಲ್ಲಿ ಜನಗಣತಿ ಜಾರಿ ಮಾಡಿದ್ರೆ ಸರ್ಕಾರಕ್ಕೇ ಉಲ್ಟಾ ಹೊಡೆಯುತ್ತೆ: ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

ಬೆಂಗಳೂರು: "ಜಾತಿ ಸಮೀಕ್ಷೆ ವರದಿ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಒಕ್ಕಲಿಗ ಶಾಸಕರ ಸಭೆ ನಡೆಸಿದ್ದು, ಸಭೆಯ ತೀರ್ಮಾನವನ್ನು ಗುರುವಾರ ನಡೆಯುವ ವಿಶೇಷ ಸಭೆಯಲ್ಲಿ ಹೇಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರ ಪಾರ್ಕ್​ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಒಕ್ಕಲಿಗ ಸಚಿವರು, ಶಾಸಕರು, ರಾಜ್ಯಸಭೆ ಸದಸ್ಯರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಸಚಿವರಾದ ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಎಂ.ಸಿ.ಸುಧಾಕರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಪ್ರೊ.ರಾಜೀವ್ ಗೌಡ, ಮಾಜಿ ಸಚಿವ, ಶಾಸಕರಾದ ಟಿ.ಬಿ.ಜಯಚಂದ್ರ, ಬಾಲಕೃಷ್ಣ, ಶಿವಲಿಂಗೇಗೌಡ, ಶರತ್ ಬಚ್ಚೆಗೌಡ, ಸಿ.ಪಿ ಯೋಗೇಶ್ವರ್, ಪ್ರಿಯಾ ಕೃಷ್ಣ, ಡಾ.ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿ ಗೌಡ, ಎಸ್.ರವಿ, ದಿನೇಶ್ ಗೂಳಿಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಡಿಸಿಎಂ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ (ETV Bharat)

ವಾಸ್ತವಾಂಶ ಬಿಟ್ಟು ತಪ್ಪಾಗಿ ವರದಿ: ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ಜಾತಿ ಗಣತಿ ವರದಿ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಏ.17 ರಂದು ವಿಶೇಷ ಸಂಪುಟ ಸಭೆ ಇದೆ. ಶಾಸಕರು ಅವರ ಅಭಿಪ್ರಾಯ ತಿಳಿಸಿದ್ದಾರೆ. ಈ ಹಿಂದೆ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಆಗಬೇಕು ಅಂತ ನಾವೇ ಒಪ್ಪಿ ಸಮೀಕ್ಷೆ ಮಾಡಿಸಿದ್ದೇವೆ. ಕೋಟ್ಯಂತರ ರೂ. ಖರ್ಚು ಮಾಡಿ ಸರ್ವೇ ಮಾಡಲಾಗಿದೆ. ವಿಸ್ತೃತ ವರದಿ ಬೇಕು ಎಂದು ಶಾಸಕರು ಕೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ವಾಸ್ತವಾಂಶ ಬಿಟ್ಟು ತಪ್ಪಾಗಿ ವರದಿಯಾಗಿದೆ. ಮುಸ್ಲಿಮರು ಹೆಚ್ಚಿನ ಜನಸಂಖ್ಯೆಯಲ್ಲಿ ಇದ್ದಾರೆ ಎಂದು ವರದಿಯಾಗಿದೆ. ಅದು ಸುಳ್ಳು" ಎಂದು ಸ್ಪಷ್ಟಪಡಿಸಿದರು.

"ವಾಸ್ತವಾಂಶ ತಿಳಿಸುವ ಕೆಲಸ ಮಾಡುತ್ತೇವೆ. ಸಭೆಯಲ್ಲಿನ ತೀರ್ಮಾನವನ್ನು ಒಟ್ಟಾಗಿ ಸಂಪುಟ ಸಭೆಯಲ್ಲಿ ಹೇಳುತ್ತೇವೆ. ಎಲ್ಲಾ ಆಫ್​ ದಿ ರೆಕಾರ್ಡ್​ಗೆ ನಾವು ತೆರೆ ಎಳೆಯುತ್ತೇವೆ. ಎಲ್ಲಾ ಸಮಾಜಕ್ಕೂ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಸಮೀಕ್ಷೆಯನ್ನು ಸರಿಯಾಗಿ ಮಾಡಲಾಗಿದೆ. ಆದರೆ ವಿಪಕ್ಷಗಳು ಗೊಂದಲ ಸೃಷ್ಟಿಸುತ್ತಿದ್ದಾರೆ. ಈ ಮುಂಚೆ ಮಾಹಿತಿ ಇದ್ದಿಲ್ಲ. ಹೀಗಾಗಿ ಈಗ ಮಾಹಿತಿ ಸಿಕ್ಕಿದೆ. ಅದನ್ನು ಶಾಸಕರಿಗೆ ಹಂಚಲಿದ್ದೇವೆ. ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಕೆಲವರು ರಾಜಕಾರಣ ಮಾಡುವವರು ಮಾಡೇ ಮಾಡುತ್ತಾರೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.

ಕೆಲ ಶಾಸಕರಿಂದ ಆಕ್ಷೇಪ: ಕೆಲ ಕೈ ಶಾಕಸರು ಸಭೆಯಲ್ಲಿ ಸಮೀಕ್ಷೆ ಅಂಕಿ - ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಹೋಗಿ ಸಮೀಕ್ಷೇನೆ ನಡೆಸಿಲ್ಲ. ಹೀಗಾಗಿ ವರದಿಯ ಅಂಕಿ - ಅಂಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಲ ಒಕ್ಕಲಿಗ ಕೈ ಶಾಸಕರು ಮರು ಸರ್ವೇ ಮಾಡಿಸುವ ಬಗ್ಗೆನೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

ಇದನ್ನೂ ಓದಿ: ರಾಜ್ಯದಲ್ಲಿ ಜನಗಣತಿ ಜಾರಿ ಮಾಡಿದ್ರೆ ಸರ್ಕಾರಕ್ಕೇ ಉಲ್ಟಾ ಹೊಡೆಯುತ್ತೆ: ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

Last Updated : April 16, 2025 at 10:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.