ETV Bharat / state

ಕೋಲಾರ ಟಿಕೆಟ್​ ಹಂಚಿಕೆ ಗೊಂದಲ: ಸಿಎಂ, ಡಿಸಿಎಂ ಭೇಟಿಯಾದ ಸಚಿವ ಕೆ.ಹೆಚ್.ಮುನಿಯಪ್ಪ - Minister KH Muniyappa

author img

By ETV Bharat Karnataka Team

Published : Mar 29, 2024, 8:41 AM IST

ಸಚಿವ ಕೆ.ಹೆಚ್ ಮುನಿಯಪ್ಪ
ಸಚಿವ ಕೆ.ಹೆಚ್ ಮುನಿಯಪ್ಪ

ಕಾಂಗ್ರೆಸ್​ ಪಕ್ಷಕ್ಕೆ ಕಗ್ಗಂಟಾಗಿರುವ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್​ ಹಂಚಿಕೆ ವಿಚಾರವಾಗಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸಿಎಂ ಮತ್ತು ಡಿಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ವಿವಾದ ಕುರಿತು ಸಚಿವ ಕೆ.ಹೆಚ್.ಮುನಿಯಪ್ಪ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.‌ ಗುರುವಾರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಕೆ.ಹೆಚ್.ಮುನಿಯಪ್ಪ, ಟಿಕೆಟ್ ವಿಚಾರವಾಗಿ ಸಚಿವರು ಸೇರಿ ಕೋಲಾರ ಶಾಸಕರ ರಾಜೀನಾಮೆ ಪ್ರಹಸನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹೈಕಮಾಂಡ್ ತಮ್ಮ ಅಳಿಯನಿಗೆ ಟಕೆಟ್ ಕೊಡಲು ಒಲವು ತೋರಿದ್ದರೂ, ಅದರ ವಿರುದ್ಧ ಕೋಲಾರ ಶಾಸಕರು ರಾಜೀನಾಮೆ ನಾಟಕವಾಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

ನನ್ನ ಅಳಿಯನಿಗೆ ಟಿಕೆಟ್ ನೀಡಿದರೆ ಗೆಲ್ಲಿಸುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುನಿಯಪ್ಪ ಹೇಳಿದರು. ಇದಕ್ಕೆ ಸಿಎಂ ಹಾಗೂ ಡಿಸಿಎಂ ಪ್ರತಿಕ್ರಿಯಿಸಿ, ಹೈಕಮಾಂಡ್‌ಗೆ ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡುವುದಾಗಿ ತಿಳಿಸಿದರು. ಸಿಎಂ, ಡಿಸಿಎಂ‌ ಮಾತಿಗೆ ಸಹಮತ ವ್ಯಕ್ತಪಡಿಸಿ ಮುನಿಯಪ್ಪ ತೆರಳಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಮುನಿಯಪ್ಪ, ಪಕ್ಷದ ವರಿಷ್ಟರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ. ಶಾಸಕರ ಸಭೆಗೆ ಸಿಎಂ, ಡಿಸಿಎಂ ನನ್ನನ್ನು ಕರೆದಿರಲಿಲ್ಲ.‌ ಸಂಧಾನ ಸಭೆ ಯಶಸ್ವಿಯಾಗಿದೆ ಅನ್ನುತ್ತಿದ್ದಾರೆ. ಕೋಲಾರ ಶಾಸಕರ ಜೊತೆಗಿನ ಸಂಧಾನ ಸಭೆಯಲ್ಲಿ ಹೈಕಮಾಂಡ್ ಹೇಳಿದ ಅಭ್ಯರ್ಥಿ ಪರ ಕೆಲಸ ಮಾಡುವ ಬಗ್ಗೆ ತೀರ್ಮಾನವಾಗಿದೆ. ಒಳ್ಳೆಯ ಬೆಳವಣಿಗೆ ಆಗಿದೆ. ನನ್ನ ಅಭಿಪ್ರಾಯವನ್ನು ಮತ್ತೆ ಸಿಎಂಗೆ ಹೇಳುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆ ಸಮರ: ಮೊದಲ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆ - LOK SABHA ELECTION NOMINATION

ETV Bharat Logo

Copyright © 2024 Ushodaya Enterprises Pvt. Ltd., All Rights Reserved.