ETV Bharat / state

ಕಾರು ಅಪಫಾತ: ಕೊಳ್ಳೇಗಾಲ ಶಾಸಕ ಅದೃಷ್ಟವಶಾತ್ ಅಪಾಯದಿಂದ ಪಾರು - MLA Car tyre blast

author img

By ETV Bharat Karnataka Team

Published : Apr 25, 2024, 9:53 AM IST

Etv Bharat
Etv Bharat

ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ.

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಕೊಳ್ಳೇಗಾಲದಿಂದ ಶಾಸಕರು ಮೈಸೂರಿನತ್ತ ತೆರಳುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಬದಿ ಹಳ್ಳಕೆ ಇಳಿದು ನಿಂತಿದೆ. ಯಾವುದೇ ಬೇರೆ ವಾಹನಗಳು ಆ ವೇಳೆ ಇಲ್ಲದಿರುವುದು ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದೇವೆ. ಯಾರಿಗೂ ಯಾವ ಅಪಾಯವೂ ಆಗಿಲ್ಲ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಚೇತನ್ ತಿಳಿಸಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಬಾಲಕಿ ಸೇರಿ ಆರು ಮಂದಿ ದುರ್ಮರಣ - Six killed in accident in Telangana

ETV Bharat Logo

Copyright © 2024 Ushodaya Enterprises Pvt. Ltd., All Rights Reserved.