ETV Bharat / state

ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ಸಾವು - Mother Daughter Death

author img

By ETV Bharat Karnataka Team

Published : May 1, 2024, 12:03 PM IST

mother-and-daughter-died
ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ಸಾವು

ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದ ತಾಯಿ, ಮಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ಇಬ್ಬರೂ ನೀರಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಬೈತಖೋಲ್ ಗ್ರಾಮದಲ್ಲಿ ಬುಧವಾರ ನಡೆದಿದೆ.

ಬೈತಖೋಲದ ರೇಣುಕಾ ಹಾಗೂ ಸುಜಾತ ಮೃತ ತಾಯಿ - ಮಗಳಾಗಿದ್ದಾರೆ. ಮುಂಜಾನೆ ಕಾಳಿ ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ನದಿಯಲ್ಲಿ ಇಳಿದಾಗ ಈ‌ ದುರ್ಘಟನೆ ಸಂಭವಿಸಿದೆ. ಮೃತದೇಹಗಳನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಹುಡುಕಿ ದಡಕ್ಕೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಮನಗರ: ಒಬ್ಬರನ್ನು ಕಾಪಾಡಲು ಹೋಗಿ ಪ್ರಾಣ ಕಳೆದುಕೊಂಡ ಐವರು ವಿದ್ಯಾರ್ಥಿಗಳು - Five Students Died

ETV Bharat Logo

Copyright © 2024 Ushodaya Enterprises Pvt. Ltd., All Rights Reserved.