ಬೆಂಗಳೂರು: ಬೆಂಗಳೂರಿನಲ್ಲಿನ ರಸ್ತೆಯೊಂದರಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ದಾಖಲಾಗಿರುವ ಕೊಲೆ ಯತ್ನ ಪ್ರಕರಣದಲ್ಲಿ ಭಾರತೀಯ ವಾಯುಸೇನೆಯ (ಐಎಎಫ್) ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ವಿರುದ್ಧ ಬಲವಂತ ಕ್ರಮಕೈಕ್ಕೆ ಮುಂದಾಗಬಾರದು ಎಂದು ಆದೇಶಿಸಿರುವ ಹೈಕೋರ್ಟ್, ಬೋಸ್ ಅವರು ತನಿಖೆಗೆ ಸಹಕರಿಸಬೇಕು ಎಂದು ನಿರ್ದೇಶನ ನೀಡಿದೆ.
ಬೆಂಗಳೂರಿನ ಬೈಪ್ಪನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತದರ ಕುರಿತ ನ್ಯಾಯಿಕ ಪ್ರಕ್ರಿಯೆ ರದ್ದತಿ ಕೋರಿ ಪಶ್ಚಿಮ ಬಂಗಾಳದ ಐಎಎಫ್ ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಕಾನೂನಿನ ಪ್ರಕಾರವೇ ಎಲ್ಲ ನಡೆಯಬೇಕು: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀರು, ಬೈಯಪ್ಪನಹಳ್ಳಿ ಪೊಲೀಸರು ಶೀಲಾದಿತ್ಯ ಬೋಸ್ ವಿರುದ್ದ ಬಲವಂತದ ಕ್ರಮಕೈಗೊಳ್ಳಬಾರದು. ಕಾನೂನು ಪರಿಪಾಲಿಸದೇ ಅರ್ಜಿದಾರರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಬಾರದು. ಅರ್ಜಿದಾರರು ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಅನುಮತಿ ಪಡೆಯದೇ ಆರೋಪ ಪಟ್ಟಿಯನ್ನು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಬಾರದು ಎಂದು ಸೂಚನೆ ನೀಡಿದೆ. ಜತೆಗೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಬೈಯಪ್ಪನಹಳ್ಳಿ ಪೊಲೀಸರಿಗೆ ನೋಟಿಸ್ ಮತ್ತು ದೂರುದಾರ ಎಸ್ ಜೆ ವಿಕಾಸ್ ಕುಮಾರ್ಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ.
ಪ್ರಕರಣದ ಹಿನ್ನೆಲೆ : ಬೆಂಗಳೂರಿನ 26 ವರ್ಷದ ಎಸ್ ಜೆ ವಿಕಾಸ್ ಕುಮಾರ್ ನೀಡಿದ ದೂರಿನ ಅನ್ವಯ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು ಶೀಲಾದಿತ್ಯ ಬೋಸ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ಗಳಾದ 109 (ಕೊಲೆ ಯತ್ನ), 115(2) (ಸ್ವಇಚ್ಛೆಯಿಂದ ಹಾನಿ ಮಾಡುವುದು), 304 (ಕಳವು ಮಾಡಲು ಕಿತ್ತುಕೊಳ್ಳುವುದು), 324 (ಕಿರುಕುಳ), 351 (ಬೆದರಿಕೆ), 352 (ಶಾಂತಿಗೆ ಭಂಗ ಉಂಟು ಮಾಡಲು ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.
ಶೀಲಾದಿತ್ಯ ವೈದ್ಯಕೀಯ ತುರ್ತಿನ ಹಿನ್ನೆಲೆಯಲ್ಲಿ ಕೋಲ್ಕತ್ತಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿ ವಿ ರಾಮನ್ ನಗರದಲ್ಲಿ ವಾಹನಕ್ಕೆ ಟಚ್ ಆದ ವಿಚಾರಕ್ಕೆ ದೂರುದಾರ ವಿಕಾಸ್ ಮತ್ತು ಶೀಲಾದಿತ್ಯ ಬೋಸ್ ನಡುವೆ ಕಲಹ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಬೋಸ್ ಪತ್ನಿ ವಾಹನ ಚಲಾಯಿಸುತ್ತಿದ್ದರು. ಘಟನೆಯ ಬಳಿಕ ಬೋಸ್ ಪತ್ನಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಿಗೇ ಬೋಸ್ ಅವರು ವಿಕಾಸ್ ಕುಮಾರ್ ಕನ್ನಡದಲ್ಲಿ ತನ್ನನ್ನು ನಿಂದಿಸಿ ಬೈಕ್ ಕೀ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದರು.
ಪ್ರಕರಣ ಸಂಬಂಧ ಆರಂಭದಲ್ಲಿ ಪೊಲೀಸರು ವಿಕಾಸ್ ಕುಮಾರ್ ಬಂಧಿಸಿ ಅವರ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಘಟನೆಯ ಕುರಿತಾದ ಸಿಸಿಟಿವಿ ತುಣುಕು ಪರಿಶೀಲಿಸಿ, ಸಮೀಪದಲ್ಲಿದ್ದವರಿಂದ ಮಾಹಿತಿ ಪಡೆದು ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿ, ಆತ ಕೆಳಗೆ ಬಿದ್ದಾಗ ಒದ್ದಿದ್ದಾರೆ ಎಂಬ ವಿಚಾರ ಬಹಿರಂಗವಾಗಿತ್ತು.
ಪ್ರಕರಣ ಸಂಬಂಧ ಆರಂಭದಲ್ಲಿ ಪೊಲೀಸರು ವಿಕಾಸ್ ಕುಮಾರ್ ಬಂಧಿಸಿ ಅವರ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಘಟನೆಯ ಕುರಿತಾದ ಸಿಸಿಟಿವಿ ತುಣುಕು ಪರಿಶೀಲಿಸಿ, ಸಮೀಪದಲ್ಲಿದ್ದವರಿಂದ ಮಾಹಿತಿ ಪಡೆದು ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿ, ಆತ ಕೆಳಗೆ ಬಿದ್ದಾಗ ಒದ್ದಿದ್ದಾರೆ ಎಂಬ ವಿಚಾರ ಬಹಿರಂಗವಾಗಿತ್ತು.ಈ ಎರಡೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದನ್ನು ಓದಿ:ಉಚಿತ ವಿದ್ಯುತ್ ಕೊಡಿ ಎಂದು ಯಾರು ಕೇಳಿದ್ರು?: ಸ್ಮಾರ್ಟ್ ಮೀಟರ್ ಬೆಲೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಖ್ಯಾತ ವಿಜ್ಞಾನಿ ಕಸ್ತೂರಿರಂಗನ್ ನಿಧನಕ್ಕೆ ಪ್ರಧಾನಿ ಮೋದಿ, ದೇವೇಗೌಡ ಸೇರಿ ಗಣ್ಯರ ಸಂತಾಪ