ETV Bharat / state

ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿ ಹತ್ಯೆ: ಹು-ಧಾ ಪೊಲೀಸ್​ ಕಮಿಷನರ್​ ಪ್ರತಿಕ್ರಿಯೆ

author img

By ETV Bharat Karnataka Team

Published : Feb 6, 2024, 10:42 PM IST

Updated : Feb 6, 2024, 10:58 PM IST

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹು-ಧಾ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.

police-commissioner-renuka-sukumar-reaction-on-murder-of-a-man-by-his-wife
ಅನೈತಿಕ ಸಂಬಂಧಕ್ಕೆ ಪ್ರೀಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿ ಹತ್ಯೆ: ಹು-ಧಾ ಪೊಲೀಸ್​ ಕಮಿಷನರ್​ ಹೇಳಿದ್ದೇನು?

ಹು-ಧಾ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್ ಹೇಳಿಕೆ

ಹುಬ್ಬಳ್ಳಿ: "ಅಮರಗೋಳದ ಹೊರವಲಯದಲ್ಲಿ ಜನವರಿ 14ರಂದು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವಾಗಲೇ ಮಹತ್ವದ ಮಾಹಿತಿ ಲಭ್ಯವಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ಅಂಶ ಬೆಳಕಿಗೆ ಬಂದಿದೆ" ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್​ ರೇಣುಕಾ ಸುಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಹುಬ್ಬಳ್ಳಿ ಗೋಕುಲ್ ರಸ್ತೆಯ ಬಂಜಾರ ಕಾಲೊನಿಯ ನಿವಾಸಿಯಾದ ಚಂದ್ರಶೇಖರ ಲಮಾಣಿ (47) ಎಂಬ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದ. ಈ ಕುರಿತಂತೆ ಪತ್ನಿ ಮಂಜುಳಾ ದೂರು ನೀಡಿದ್ದರು. ಆದರೆ ಇದು ಕೊಲೆ ಎಂದು ಮೃತನ ಸಹೋದರ ಸುರೇಶ್ ಲಮಾಣಿ ಕೂಡ ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸಿದಾಗ ಚಂದ್ರಶೇಖರ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಈ ಕೃತ್ಯ ಎಸಗಿರುವುದು ಕಂಡುಬಂದಿದೆ" ಎಂದು ತಿಳಿಸಿದರು.

ಪ್ರಕರಣವೇನು?: ಜನವರಿ 14ರಂದು ಎಪಿಎಂಸಿ ಮಾರಡಗಿ ರೋಡ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದರು. ಮೃತನನ್ನು ಬಂಜಾರ ಕಾಲೊನಿ ನಿವಾಸಿ ಚಂದ್ರಶೇಖರ ಲಮಾಣಿ(40) ಎಂದು ಗುರುತಿಸಲಾಗಿತ್ತು. ಪತ್ನಿ ಮಂಜುಳಾ, ತನ್ನ ಗಂಡನ ಸಾವಿನ ಬಗ್ಗೆ ಸಂಶಯ ಇದೆ ಎಂದು ನವನಗರ ಪೊಲೀಸ್ ಠಾಣೆಗೆ ದೂರು‌ ನೀಡಿದ್ದಳು‌. ಪೊಲೀಸರು ಎಲ್ಲ ಮೂಲಗಳಿಂದ ತನಿಖೆ ಮಾಡಿ ಸತ್ಯಾಂಶ ಹೊರಹಾಕಿದ್ದಾರೆ.

ಮಂಜುಳಾ ಮತ್ತು ಪ್ರಿಯಕರ ರಿಯಾಜ್ ಅಹ್ಮದ್ ಕೊಲೆ ಮಾಡಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿದೆ. ಇವರಿಬ್ಬರ ವಿವಾಹೇತರ ಸಂಬಂಧಕ್ಕೆ ಪತಿ ವಿರೋಧ ವ್ಯಕ್ತಪಡಿಸಿದ್ದ. ವಿಷಯ ಗೊತ್ತಾದ ನಂತರ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದ. ತಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂದು ಪ್ರಿಯಕರನಿಗೆ ಹೇಳಿ ಕೊಲೆ ಮಾಡಿಸಿರುವುದಾಗಿ ಪೊಲೀಸರೆದುರು ಪತ್ನಿ ಸತ್ಯ ಬಿಚ್ಚಿಟ್ಟಿದ್ದಾಳೆ. ಆರೋಪಿ ರಿಯಾಜ್ ಅಹ್ಮದ್, ನಾನೇ ಚಂದ್ರಶೇಖರನನ್ನು ಕರೆದೊಯ್ದು ಕೊಲೆ ಮಾಡಿದ್ದೇನೆ ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ.

ಕಳೆದ ಐದು ವರ್ಷಗಳಿಂದ ನಮ್ಮಿಬ್ಬರ ನಡುವೆ ವಿವಾಹೇತರ ಸಂಬಂಧ ಇತ್ತು. ಇದಕ್ಕೆ ಚಂದ್ರಶೇಖರ ವಿರೋಧ ಮಾಡ್ತಿದ್ದ. ಆದ್ದರಿಂದ ಕೊಲೆ ಮಾಡಿರುವುದಾಗಿ ರಿಯಾಜ್ ಅಹ್ಮದ್ ತಿಳಿಸಿದ್ದಾನೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ: ಮೂವರು ಮಕ್ಕಳು ಅನಾಥ

Last Updated :Feb 6, 2024, 10:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.