ETV Bharat / state

ಸೋನು ಶ್ರೀನಿವಾಸ್ ಗೌಡ ದತ್ತು ಕಾಯ್ದೆ ಉಲ್ಲಂಘನೆ ಪ್ರಕರಣ; ರಾಯಚೂರಿನಲ್ಲಿ ಸ್ಥಳ ಮಹಜರು - Sonu Shrinivas Gowda

author img

By ETV Bharat Karnataka Team

Published : Mar 24, 2024, 10:53 AM IST

Updated : Mar 24, 2024, 12:20 PM IST

ಮಗು ದತ್ತು ಪಡೆದ ಮನೆಯಲ್ಲಿ ಆರೋಪಿ
ಮಗು ದತ್ತು ಪಡೆದ ಮನೆಯಲ್ಲಿ ಆರೋಪಿ

ದತ್ತು ಕಾಯ್ದೆ ಉಲ್ಲಂಘಿಸಿ ಮಗು ದತ್ತು ಪಡೆದಿರುವ ಆರೋಪ ಪ್ರಕರಣ ಎದುರಿಸುತ್ತಿರುವ ಸೋನು ಶ್ರೀನಿವಾಸ್​ ಗೌಡ ಅವರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ರಾಯಚೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.

ಬೆಂಗಳೂರು/ರಾಯಚೂರು: ಕಾನೂನುಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣ ಎದುರಿಸುತ್ತಿರುವ ಆರೋಪಿ, ಬಿಗ್‌ಬಾಸ್ ಒಟಿಟಿ ರಿಯಾಲಿಟಿ ಶೋ ಜನಪ್ರಿಯತೆಯ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಇಂದು ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿ ವಾಪಸ್ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಗಾರೆ ಕೆಲಸ ಮಾಡಿಕೊಂಡಿದ್ದ ದಂಪತಿಯಿಂದ ಸೋನು ಶ್ರೀನಿವಾಸ್​ ಗೌಡ ಮಗು ಪಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಗುರುತು ಬಹಿರಂಗಪಡಿಸಿ ಕಾಯಿದೆ ಉಲ್ಲಂಘಿಸಿರುವ ಆರೋಪ ಎದುರಿಸುತ್ತಿದ್ದಾರೆ.

ಇಂದು ಬಾಲಕಿ ಮನೆಯಲ್ಲಿ ಕೆಲವೇ ಕ್ಷಣಗಳಲ್ಲಿ ಮಹಜರ್ ಮುಗಿಸಿದ ಪೊಲೀಸರು ಪೋಷಕರ ಹೇಳಿಕೆ ದಾಖಲಿಸಿಕೊಂಡರು. ಈ ವೇಳೆ ಆರೋಪಿ ಜೊತೆ ಮಾತಾಡಬೇಕು ಎಂದು ಜನರು ಗಲಾಟೆ ಮಾಡಿದರು‌.

ಪ್ರಕರಣ ಸಂಬಂಧ ಹಣ ಪಡೆದು ಮಗು ಮಾರಾಟ ಮಾಡಲಾಗಿದೆಯೇ ಎಂಬ ಕುರಿತು ಪರಿಶೀಲನೆ ನಡೆಯುತ್ತಿದೆ. ಒಂದು ವೇಳೆ ಹಣ ಪಡೆದು ಪೋಷಕರು ಮಗುವನ್ನು ಹಸ್ತಾಂತರಿಸಿದ್ದರೆ ಮಾನವ ಕಳ್ಳಸಾಗಾಣಿಕೆ ಪ್ರಕರಣ ದಾಖಲಾಗಲಿದೆ.

ಇದನ್ನೂ ಓದಿ: ಮಗು ದತ್ತು ಪಡೆದ ಪ್ರಕರಣ: ಸೋನುಗೌಡರನ್ನ ನಾಲ್ಕು ದಿನಗಳ ಕಸ್ಟಡಿಗೆ ಪಡೆದ ಪೊಲೀಸರು - ನಟಿ ಹೇಳಿದ್ದಿಷ್ಟು - violation of Hindu Adoption Act

Last Updated :Mar 24, 2024, 12:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.