ETV Bharat / state

ಸಿದ್ದರಾಮಯ್ಯ, ಡಿಕೆಶಿ ಸೇರಿ ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ: ಪ್ರಹ್ಲಾದ್ ‌ಜೋಶಿ - Prahlad Joshi

author img

By ETV Bharat Karnataka Team

Published : Apr 7, 2024, 3:56 PM IST

Minister Prahlad Joshi spoke to the media.
ಚಿವ ಪ್ರಹ್ಲಾದ್ ಜೋಶಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

ಸಚಿವ ಪ್ರಹ್ಲಾದ್ ‌ಜೋಶಿ‌ ಪ್ರತಿಕ್ರಿಯೆ

ಹುಬ್ಬಳ್ಳಿ: ಕರ್ನಾಟಕವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ. ಹನುಮಾನ್ ಚಾಲೀಸ್ ಶುರು ಮಾಡಿದವರ ಮೇಲೆ ಎಫ್‌ಐಆರ್ ಹಾಕ್ತೀರಾ?, ಇದು ತುಷ್ಟೀಕರಣದ ಪರಾಕಾಷ್ಠೆ ಎಂದು‌ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ‌ ಟೀಕಿಸಿದರು.

ಚೀನಾಗೆ ಭೂಮಿ ಬಿಟ್ಟುಕೊಟ್ಟಿದ್ದು ಯಾರು?: ಚೀನಾಗೆ ಭೂಮಿ ಬಿಟ್ಟುಕೊಟ್ಟಿದ್ದು ಯಾರು? ನೀವೇನು ಸತ್ಯಹರಿಶ್ಚಂದ್ರರಾ?, ಹಾಗಿದ್ದರೆ ಜನ ಯಾಕೆ ನಿಮ್ಮನ್ನು ಮೂಲೆಗುಂಪು ಮಾಡಿದರು?. ನಿಮ್ಮ ಪರಿಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.

ಇನ್ನು ಅನುದಾನ ವಿಚಾರಕ್ಕೆ, ನಮ್ಮ ಕಾಲದ ಅನುದಾನ, ಅವರ ಕಾಲದ ಅನುದಾನ ಚರ್ಚೆಯಾಗಲಿ. ಕಾಂಗ್ರೆಸ್​​ನವರು ಮೋಸಗಾರರು. ಸುಳ್ಳು ಹೇಳಿ ರಾಹುಲ್ ಗಾಂಧಿ ವಿದೇಶಕ್ಕೆ ಹೋಗ್ತಾರೆ. ನೀವು 75 ವರ್ಷ 65 ವರ್ಷ ಸುಳ್ಳು ಹೇಳಿದ್ದಾರೆ. ಗಾಜಿ‌ನ ಮನೆಯಲ್ಲಿ ಕೂತು ಕಲ್ಲು ಹೊಡೆಯಬೇಡಿ ಎಂದರು.

ಇದೇ ವೇಳೆ, ದಿಂಗಾಲೇಶ್ವರ ಸ್ವಾಮೀಜಿ ಬಗ್ಗೆ ನನಗೇನೂ ಗೊತ್ತಿಲ್ಲ. ಅದರ ಬಗ್ಗೆ ನಾನು ಏನೂ ಮಾತಾಡಲ್ಲ ಎಂದು ತಿಳಿಸಿದರು.

ಇದನ್ನೂಓದಿ: ಬಿಜೆಪಿಯವರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಕರಂದ್ಲಾಜೆ ಇಲ್ಲಿಗೆ ಬಂದಿದ್ದಾರೆ, ಇಲ್ಲಿಂದಲೂ ನೀವು ವಾಪಸ್ ಕಳಿಸಿ: ಸಿಎಂ - Lok Sabha Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.