ETV Bharat / state

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ: ವಿವಿಧೆಡೆ ಸಿಡಿಲಿಗೆ ಹಲವರು ಬಲಿ - TRIGGER CAUTION AMID GUSTY WINDS

ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸಿಡಿಲಿಗೆ ಹಲವು ಜೀವಗಳು ಬಲಿಯಾಗಿವೆ.

Pre Monsoon Showers Bring Relief to Bengaluru, Trigger Caution Amid Gusty Winds
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ: ರಾಜ್ಯದ ವಿವಿಧೆಡೆ ಸಿಡಿಲಿಗೆ ಹಲವರು ಬಲಿ (ETV Bharat)
author img

By ETV Bharat Karnataka Team

Published : May 13, 2025 at 10:49 PM IST

2 Min Read

ಬೆಂಗಳೂರು: ಬೆಂಗಳೂರಿನ ಹಲವಾರು ಭಾಗಗಳಲ್ಲಿ ಸೋಮವಾರ ಪೂರ್ವ ಮಾನ್ಸೂನ್ ಮಳೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ನಗರವನ್ನು ಆವರಿಸಿದ್ದ ಬಿಸಿಲಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್​ ನೀಡಿದೆ. ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯು ಮೇ ಮಧ್ಯಭಾಗದ ವಿಶಿಷ್ಟ ಹವಾಮಾನ ಬದಲಾವಣೆಗಳ ಆರಂಭಕ್ಕೆ ಮುನ್ನುಡಿ ಬರೆದಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಹಿಂದೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಮುನ್ಸೂಚನೆಯಂತೆ, ಬೆಳಗಿನ ಜಾವದ ವೇಳೆಗೆ ಆಕಾಶ ಮೋಡ ಕವಿದಿತ್ತು ಮತ್ತು ವೈಟ್‌ಫೀಲ್ಡ್, ಜಯನಗರ ಮತ್ತು ಯಶವಂತಪುರದಂತಹ ಪ್ರದೇಶಗಳಲ್ಲಿ ಮಳೆಯಾಗಿದೆ.

ರಾತ್ರಿಯೂ ನಗರದಲ್ಲಿ ಮಳೆ ಸುರಿದಿದೆ. ಮಾನ್ಸೂನ್ ಪೂರ್ವ ಚಟುವಟಿಕೆಗೆ ಅನುಗುಣವಾಗಿ ಹವಾಮಾನ ಮಾದರಿ ಇದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಪ್ರತ್ಯೇಕ ಗುಡುಗು ಸಹಿತ ಮಳೆಯಾಗಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಗರದ ಕೆಲವು ಭಾಗಗಳಲ್ಲಿ 35°C ದಾಟಿದ್ದ ತಾಪಮಾನದ ಏರಿಕೆಯಾಗಿತ್ತು. ಆ ತಾಪಮಾನ ಮಳೆಯಿಂದಾಗಿ ದಿಢೀರ್​ ಕುಸಿತ ಕಂಡಿದೆ. ಈ ಮೂಲಕ ನಗರದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಗಳಿವು: ಮಳೆ ತಾತ್ಕಾಲಿಕವಾಗಿವಾಗಿ ತಂಪೆರೆದಿದ್ದರೂ ಹೊಸ ಸವಾಲುಗಳನ್ನು ಒಡ್ಡಿದೆ. ಸಂಚಾರ ದಟ್ಟಣೆ, ತಾತ್ಕಾಲಿಕ ವಿದ್ಯುತ್ ಕಡಿತ ಮತ್ತು ಗಾಳಿಯಿಂದಾಗಿ ಮರದ ಕೊಂಬೆಗಳು ದುರ್ಬಲವಾಗಿ ಕುಸಿಯುವ ಅಪಾಯದಂತಹ ಸಂಭಾವ್ಯ ಅಡಚಣೆಗಳ ಬಗ್ಗೆ ಐಎಂಡಿ ಎಚ್ಚರಿಸಿದೆ. ಜಾರು ರಸ್ತೆಗಳಲ್ಲಿ ಪ್ರಯಾಣಿಕರು ಎಚ್ಚರಿಕೆಯಿಂದ ಮುಂದುವರಿಯುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನರು ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು ಮತ್ತು ಬಿರುಗಾಳಿಯ ಸಮಯದಲ್ಲಿ ಎಲ್ಲಾ ಕಿಟಕಿಗಳು ಮತ್ತು ಬಾಗಿಲುಗಳು ಸುರಕ್ಷಿತವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಐಎಂಡಿಯ ಸಲಹೆ ನೀಡಿದೆ.

ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ನೀಡಿದ ಮಳೆಯ ಸೂಚನೆ ಇದು: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ವಿಶೇಷವಾಗಿ ಸಂಜೆಯ ಸಮಯದಲ್ಲಿ ಲಘು ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಮತ್ತು ದಾವಣಗೆರೆಯಂತಹ ಜಿಲ್ಲೆಗಳು ಸಹ ಇದೇ ರೀತಿಯ ಪರಿಸ್ಥಿತಿಗಳನ್ನು ಕಾಣಬಹುದು.

ವಿವಿಧ ಜಿಲ್ಲೆಗಳಲ್ಲಿ ಮಳೆ ಹಲವು ಜೀವಗಳು ಬಲಿ: ಹಾವೇರಿಯಲ್ಲೂ ವ್ಯಾಪಕ ಮಳೆ ಆಗಿದೆ. ಇಲ್ಲೂ ಸಿಡಿಲಿಗೆ ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾದರೆ, ರಾಯಚೂರಿನಲ್ಲಿ ಒಬ್ಬ ಬಲಿಯಾಗಿದ್ದಾನೆ. ಉಳಿದಂತೆ ಬಳ್ಳಾರಿ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಮಳೆ ಆಗಿದೆ. ಇಲ್ಲೂ ಮಳೆಗೆ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿದೆ.

ಇದನ್ನು ಓದಿ:ಹುಬ್ಬಳ್ಳಿ- ಹೈದರಾಬಾದ್ ನಡುವೆ "ಐರಾವತ" ವೋಲ್ವೊ ಎಸಿ ಬಸ್ ಸಂಚಾರ ಆರಂಭ!

ಕೊಪ್ಪಳ: ಸಿಡಿಲು ಬಡಿದು ಇಬ್ಬರ ಸಾವು, ರಾಯಚೂರಿನಲ್ಲೂ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿ

ಬೆಂಗಳೂರು: ಬೆಂಗಳೂರಿನ ಹಲವಾರು ಭಾಗಗಳಲ್ಲಿ ಸೋಮವಾರ ಪೂರ್ವ ಮಾನ್ಸೂನ್ ಮಳೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ನಗರವನ್ನು ಆವರಿಸಿದ್ದ ಬಿಸಿಲಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್​ ನೀಡಿದೆ. ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯು ಮೇ ಮಧ್ಯಭಾಗದ ವಿಶಿಷ್ಟ ಹವಾಮಾನ ಬದಲಾವಣೆಗಳ ಆರಂಭಕ್ಕೆ ಮುನ್ನುಡಿ ಬರೆದಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಹಿಂದೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಮುನ್ಸೂಚನೆಯಂತೆ, ಬೆಳಗಿನ ಜಾವದ ವೇಳೆಗೆ ಆಕಾಶ ಮೋಡ ಕವಿದಿತ್ತು ಮತ್ತು ವೈಟ್‌ಫೀಲ್ಡ್, ಜಯನಗರ ಮತ್ತು ಯಶವಂತಪುರದಂತಹ ಪ್ರದೇಶಗಳಲ್ಲಿ ಮಳೆಯಾಗಿದೆ.

ರಾತ್ರಿಯೂ ನಗರದಲ್ಲಿ ಮಳೆ ಸುರಿದಿದೆ. ಮಾನ್ಸೂನ್ ಪೂರ್ವ ಚಟುವಟಿಕೆಗೆ ಅನುಗುಣವಾಗಿ ಹವಾಮಾನ ಮಾದರಿ ಇದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಪ್ರತ್ಯೇಕ ಗುಡುಗು ಸಹಿತ ಮಳೆಯಾಗಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಗರದ ಕೆಲವು ಭಾಗಗಳಲ್ಲಿ 35°C ದಾಟಿದ್ದ ತಾಪಮಾನದ ಏರಿಕೆಯಾಗಿತ್ತು. ಆ ತಾಪಮಾನ ಮಳೆಯಿಂದಾಗಿ ದಿಢೀರ್​ ಕುಸಿತ ಕಂಡಿದೆ. ಈ ಮೂಲಕ ನಗರದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಗಳಿವು: ಮಳೆ ತಾತ್ಕಾಲಿಕವಾಗಿವಾಗಿ ತಂಪೆರೆದಿದ್ದರೂ ಹೊಸ ಸವಾಲುಗಳನ್ನು ಒಡ್ಡಿದೆ. ಸಂಚಾರ ದಟ್ಟಣೆ, ತಾತ್ಕಾಲಿಕ ವಿದ್ಯುತ್ ಕಡಿತ ಮತ್ತು ಗಾಳಿಯಿಂದಾಗಿ ಮರದ ಕೊಂಬೆಗಳು ದುರ್ಬಲವಾಗಿ ಕುಸಿಯುವ ಅಪಾಯದಂತಹ ಸಂಭಾವ್ಯ ಅಡಚಣೆಗಳ ಬಗ್ಗೆ ಐಎಂಡಿ ಎಚ್ಚರಿಸಿದೆ. ಜಾರು ರಸ್ತೆಗಳಲ್ಲಿ ಪ್ರಯಾಣಿಕರು ಎಚ್ಚರಿಕೆಯಿಂದ ಮುಂದುವರಿಯುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನರು ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು ಮತ್ತು ಬಿರುಗಾಳಿಯ ಸಮಯದಲ್ಲಿ ಎಲ್ಲಾ ಕಿಟಕಿಗಳು ಮತ್ತು ಬಾಗಿಲುಗಳು ಸುರಕ್ಷಿತವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಐಎಂಡಿಯ ಸಲಹೆ ನೀಡಿದೆ.

ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ನೀಡಿದ ಮಳೆಯ ಸೂಚನೆ ಇದು: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ವಿಶೇಷವಾಗಿ ಸಂಜೆಯ ಸಮಯದಲ್ಲಿ ಲಘು ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಮತ್ತು ದಾವಣಗೆರೆಯಂತಹ ಜಿಲ್ಲೆಗಳು ಸಹ ಇದೇ ರೀತಿಯ ಪರಿಸ್ಥಿತಿಗಳನ್ನು ಕಾಣಬಹುದು.

ವಿವಿಧ ಜಿಲ್ಲೆಗಳಲ್ಲಿ ಮಳೆ ಹಲವು ಜೀವಗಳು ಬಲಿ: ಹಾವೇರಿಯಲ್ಲೂ ವ್ಯಾಪಕ ಮಳೆ ಆಗಿದೆ. ಇಲ್ಲೂ ಸಿಡಿಲಿಗೆ ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾದರೆ, ರಾಯಚೂರಿನಲ್ಲಿ ಒಬ್ಬ ಬಲಿಯಾಗಿದ್ದಾನೆ. ಉಳಿದಂತೆ ಬಳ್ಳಾರಿ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಮಳೆ ಆಗಿದೆ. ಇಲ್ಲೂ ಮಳೆಗೆ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿದೆ.

ಇದನ್ನು ಓದಿ:ಹುಬ್ಬಳ್ಳಿ- ಹೈದರಾಬಾದ್ ನಡುವೆ "ಐರಾವತ" ವೋಲ್ವೊ ಎಸಿ ಬಸ್ ಸಂಚಾರ ಆರಂಭ!

ಕೊಪ್ಪಳ: ಸಿಡಿಲು ಬಡಿದು ಇಬ್ಬರ ಸಾವು, ರಾಯಚೂರಿನಲ್ಲೂ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.