ETV Bharat / state

ವಿ.ಸೋಮಣ್ಣಗೆ ಬಿಜೆಪಿ ಟಿಕೆಟ್ ನೀಡದಂತೆ ಆಗ್ರಹಿಸಿ ರಸ್ತೆ ತಡೆ, ಗೋ ಬ್ಯಾಕ್ ಘೋಷಣೆ

author img

By ETV Bharat Karnataka Team

Published : Mar 10, 2024, 10:55 PM IST

ತುಮಕೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ.ಸೋಮಣ್ಣ ವಿರುದ್ಧ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮಾಧುಸ್ವಾಮಿ ಬೆಂಬಲಿಗರು ರಸ್ತೆ ತಡೆದು ಗೋ ಬ್ಯಾಕ್ ಸೋಮಣ್ಣ ಘೋಷಣೆ ಕೂಗಿದರು.

Activists protested
ವಿ ಸೋಮಣ್ಣಗೆ ಬಿಜೆಪಿ ಟಿಕೆಟ್ ನೀಡದಂತೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟಿಸಿದರು.

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ಪಕ್ಕಾ ಎಂಬಂತೆ ಈಗಾಗಲೇ ಅಂತಿಮ ಹಂತದ ಪ್ರಕ್ರಿಯೆ ನಡೆದಿದೆ. ಈ ವಿಷಯ ತುಮಕೂರು ಜಿಲ್ಲೆಯ ಬಿಜೆಪಿ ವಲಯದಲ್ಲಿ ಮಿಂಚಿನ ಸಂಚಾರ ಉಂಟು ಮಾಡಿದ್ದು ಅಲ್ಲಲ್ಲಿ ಗೋ ಬ್ಯಾಕ್ ಸೋಮಣ್ಣ ಎಂಬ ಘೋಷಣೆಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಗುಬ್ಬಿ ತಾಲೂಕಿನಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಗೋ ಬ್ಯಾಕ್ ಸೋಮಣ್ಣ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಬಾರದು ಎಂದು ಪರೋಕ್ಷವಾಗಿ ಒತ್ತಾಯಿಸಿದ್ದಾರೆ.

ಇನ್ನೊಂದೆಡೆ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲೂ ಬಿಜೆಪಿ ಕಾರ್ಯಕರ್ತರು ಗೋ ಬ್ಯಾಕ್ ಸೋಮಣ್ಣ ಎಂದು ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಾಧುಸ್ವಾಮಿ ಬೆಂಬಲಿಗರಿಂದ ಟೈರ್​ಗೆ ಬೆಂಕಿ: ಮಾಧುಸ್ವಾಮಿ ಬೆಂಬಲಿಗರು ರಸ್ತೆ ತಡೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಸೋಮಣ್ಣ ತೊಲಗಿಸಿ ಎಂದು ಘೋಷಣೆ ಕೂಗಿದರು. ಅಲ್ಲದೆ ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ಸ್ಥಳೀಯ ನಾಯಕರಿಗೆ ಟಿಕೆಟ್ ನೀಡಿದರೆ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಾರೆ. ಆದರೆ ಸೋಮಣ್ಣ ಹೊರ ಜಿಲ್ಲೆಯಿಂದ ಬಂದು ಇಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಬೇಡ, ವಾಪಸ್ ಹೋಗಲಿ ಎಂದು ತುಮಕೂರು-ಶಿವಮೊಗ್ಗ ರಸ್ತೆ ತಡೆ ನಡೆಸಿದರು.

ತುಮಕೂರು ನಗರದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಸಭೆ ಸೇರಿ ಹಕ್ಕೊತ್ತಾಯ ಮಂಡಿಸಿದ್ದಾರೆ.

ಇದನ್ನೂಓದಿ: ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ನಿರಾಕರಿಸಿದ ಹೆಚ್​ಡಿಕೆ, ನಿಖಿಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.