ETV Bharat / state

ನಿಡಗುಂದಿಯಲ್ಲಿ ಭೀಕರ ರಸ್ತೆ ಅಪಘಾತ: ಬಿಎಸ್​ಎಫ್ ಯೋಧ​, ಆಂಬ್ಯುಲೆನ್ಸ್​ ಚಾಲಕ ಸಾವು - ROAD ACCIDENT

ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ, ಬಿಎಸ್​ಎಫ್​ ಯೋಧ ಮತ್ತು ಆಂಬ್ಯುಲೆನ್ಸ್​ ಚಾಲಕ ಸಾವನ್ನಪ್ಪಿದ್ದಾರೆ.

NIDAGUNDI ACCIDENT
ಭೀಕರ ರಸ್ತೆ ಅಪಘಾತ (ETV Bharat)
author img

By ETV Bharat Karnataka Team

Published : April 9, 2025 at 3:41 PM IST

1 Min Read

ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ (ಎನ್ ಹೆಚ್ 50)ಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಿಎಸ್​ಎಫ್​ ಯೋಧ ಮತ್ತು ಅಂಬ್ಯುಲೆನ್ಸ್ ಚಾಲಕ ಸಾವನ್ನಪ್ಪಿ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.

ರಸ್ತೆ ದಾಟುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಲಾರಿಯು ಬೈಕ್ಅನ್ನು ಎಳೆದುಕೊಂಡು ಮುಂದಕ್ಕೆ ಹೋಗಿದೆ. ಅಲ್ಲದೆ, ಎದುರಿಗೆ ಬರುತ್ತಿದ್ದ ಅಂಬ್ಯುಲೆನ್ಸ್ ಗೂ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಚಾಲಕ ಮತ್ತು ಬೈಕ್​ನಲ್ಲಿದ್ದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ (35) ಮೃತ ಯೋಧ ಎಂದು ಗುರುತಿಸಲಾಗಿದೆ.

ರಸ್ತೆ ಅಪಘಾತದಿಂದ ಟ್ರಾಫಿಕ್​ ಜಾಮ್​
ರಸ್ತೆ ಅಪಘಾತದಿಂದ ಟ್ರಾಫಿಕ್​ ಜಾಮ್​ (ETV Bharat)

ಲಾರಿ ರಭಸವಾಗಿ ಎದುರಿನಿಂದ ಗುದ್ದಿದ ಪರಿಣಾಮ ಅಂಬ್ಯುಲೆನ್ಸ್ ಸಹ ನಜ್ಜುಗುಜ್ಜಾಗಿದೆ. ಆಂಬ್ಯುಲೆನ್ಸ್​ನಲ್ಲಿ ಸಿಲುಕಿದ್ದ ಚಾಲಕ ಸಹಾಯಕನನ್ನು ಕ್ರೇನ್​ ಸಹಾಯದಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರಣಿ ರಸ್ತೆ ಅಪಘಾತ
ಸರಣಿ ರಸ್ತೆ ಅಪಘಾತ (ETV Bharat)

ಅಂಬ್ಯುಲೆನ್ಸ್​​ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ್​ ಪ್ರಸಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಹೀಗಾಗಿ ಅಪಘಾತಕ್ಕೀಡಾದ ಲಾರಿ, ಆಂಬ್ಯುಲೆನ್ಸ್​ ಹಾಗೂ ಬೈಕ್ಅನ್ನು ಸ್ಥಳದಿಂದ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Nidagundi Accident
ಭೀಕರ ಸರಣಿ ಅಪಘಾತ (ETV Bharat)

ಘಟನೆಯಲ್ಲಿ ಆಂಬ್ಯುಲೆನ್ಸ್​​ ಸಹಾಯಕ ಮತ್ತು ಲಾರಿ ಕ್ಲೀನರ್​ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ನಿಡಗುಂದಿ‌ ಪೊಲೀಸರು ಅಪಘಾತದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಏರ್​​ಪೋರ್ಟ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ; ಇಂಡಿಗೋ ಸಿಬ್ಬಂದಿ ಸಾವು

ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ (ಎನ್ ಹೆಚ್ 50)ಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಿಎಸ್​ಎಫ್​ ಯೋಧ ಮತ್ತು ಅಂಬ್ಯುಲೆನ್ಸ್ ಚಾಲಕ ಸಾವನ್ನಪ್ಪಿ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.

ರಸ್ತೆ ದಾಟುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದ ಲಾರಿಯು ಬೈಕ್ಅನ್ನು ಎಳೆದುಕೊಂಡು ಮುಂದಕ್ಕೆ ಹೋಗಿದೆ. ಅಲ್ಲದೆ, ಎದುರಿಗೆ ಬರುತ್ತಿದ್ದ ಅಂಬ್ಯುಲೆನ್ಸ್ ಗೂ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಂಬ್ಯುಲೆನ್ಸ್ ಚಾಲಕ ಮತ್ತು ಬೈಕ್​ನಲ್ಲಿದ್ದ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಬಿಎಸ್ಎಫ್ ಯೋಧ ಮೌನೇಶ ರಾಠೋಡ್ (35) ಮೃತ ಯೋಧ ಎಂದು ಗುರುತಿಸಲಾಗಿದೆ.

ರಸ್ತೆ ಅಪಘಾತದಿಂದ ಟ್ರಾಫಿಕ್​ ಜಾಮ್​
ರಸ್ತೆ ಅಪಘಾತದಿಂದ ಟ್ರಾಫಿಕ್​ ಜಾಮ್​ (ETV Bharat)

ಲಾರಿ ರಭಸವಾಗಿ ಎದುರಿನಿಂದ ಗುದ್ದಿದ ಪರಿಣಾಮ ಅಂಬ್ಯುಲೆನ್ಸ್ ಸಹ ನಜ್ಜುಗುಜ್ಜಾಗಿದೆ. ಆಂಬ್ಯುಲೆನ್ಸ್​ನಲ್ಲಿ ಸಿಲುಕಿದ್ದ ಚಾಲಕ ಸಹಾಯಕನನ್ನು ಕ್ರೇನ್​ ಸಹಾಯದಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರಣಿ ರಸ್ತೆ ಅಪಘಾತ
ಸರಣಿ ರಸ್ತೆ ಅಪಘಾತ (ETV Bharat)

ಅಂಬ್ಯುಲೆನ್ಸ್​​ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ರಿತೇಶ್​ ಪ್ರಸಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಹೀಗಾಗಿ ಅಪಘಾತಕ್ಕೀಡಾದ ಲಾರಿ, ಆಂಬ್ಯುಲೆನ್ಸ್​ ಹಾಗೂ ಬೈಕ್ಅನ್ನು ಸ್ಥಳದಿಂದ ತೆರವು ಮಾಡಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Nidagundi Accident
ಭೀಕರ ಸರಣಿ ಅಪಘಾತ (ETV Bharat)

ಘಟನೆಯಲ್ಲಿ ಆಂಬ್ಯುಲೆನ್ಸ್​​ ಸಹಾಯಕ ಮತ್ತು ಲಾರಿ ಕ್ಲೀನರ್​ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ನಿಡಗುಂದಿ‌ ಪೊಲೀಸರು ಅಪಘಾತದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಏರ್​​ಪೋರ್ಟ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ; ಇಂಡಿಗೋ ಸಿಬ್ಬಂದಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.