ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದವರಿಗೆ ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿ-2023ನೇ ಸಾಲಿನ ಪಟ್ಟಿಯನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗೆ ತಲಾ ಇಬ್ಬರನ್ನು ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಹಾಗಾಗಿ, 30 ಸಾಧಕರ ಹೆಸರುಗಳನ್ನು ಪ್ರಕಟಿಸಲಾಗಿದೆ.
ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದವರಿಗೆ ಸರ್ಕಾರ ನೀಡುತ್ತಿದ್ದ ಪ್ರಶಸ್ತಿಯ ಮೊತ್ತವನ್ನು ತಲಾ 10 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಮತ್ತು ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ 25 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಪ್ರಶಸ್ತಿ ಮೊತ್ತವನ್ನು ಏರಿಕೆ ಮಾಡಲಾಗಿದೆ.

ಸೋಮವಾರ ಪ್ರಶಸ್ತಿ ಪ್ರದಾನ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ) ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಹಯೋಗದೊಂದಿಗೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ-2025 ಹಾಗೂ 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: