ETV Bharat / state

ಕೆಆರ್​ಎಸ್​ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಒತ್ತಾಯ; ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ - Protest For Water

author img

By ETV Bharat Karnataka Team

Published : Apr 5, 2024, 10:40 PM IST

Updated : Apr 5, 2024, 10:51 PM IST

ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸುವಂತೆ ಒತ್ತಾಯಿಸಿ ಮರಿಲಿಂನದೊಡ್ಡಿ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿದರು.

fasting-satyagraha-by-villagers-demanding-water-from-krs-reservoir-to-drain-into-canals
KRS ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

ಮಂಡ್ಯ: ಬರದಿಂದ ತತ್ತರಿಸಿರುವ ಜನ-ಜಾನುವಾರುಗಳಿಗೆ ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸುವಂತೆ ಒತ್ತಾಯಿಸಿ ತಾಲೂಕಿನ ಮರಿಲಿಂನದೊಡ್ಡಿ ಗ್ರಾಮಸ್ಥರು ಇಂದು ಉಪವಾಸ ಸತ್ಯಾಗ್ರಹ ನಡೆಸಿದರು. ಗ್ರಾಮದ ಬಸ್ ನಿಲ್ದಾಣದ ಬಳಿ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮಳೆ ಕೊರತೆಯಿಂದಾಗಿ ನೀರಿನ ಅಭಾವ ಸೃಷ್ಟಿಯಾಗಿದೆ. ಜನ-ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಕೊರತೆ ಇರುವುದರಿಂದ ರೈತರು ಹೊಸ ಬೆಳೆ ಹಾಕಬಾರದು ಎಂದು ಸರ್ಕಾರ ನಿರ್ಬಂಧ ಹಾಕಿದ್ದರಿಂದ ಯಾವುದೇ ಬೆಳೆಯನ್ನು ರೈತರು ಬೆಳೆದಿಲ್ಲ. ಇರುವ ನೀರನ್ನೆಲ್ಲಾ ತಮಿಳುನಾಡಿಗೆ ಹರಿಸಿದ ಪರಿಣಾಮ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಬೆಳೆದು ನಿಂತಿರುವ ಬೆಳೆ ರಕ್ಷಣೆ ಹಾಗೂ ಕುಡಿಯುವ ನೀರಿಗಾಗಿ 90 ಅಡಿ ಇದ್ದಾಗ ನಾಲೆಗಳಿಗೆ ಒಂದು ಕಂತು ನೀರು ಬಿಡಬೇಕಾಗಿತ್ತು. ಆದರೆ ಸರ್ಕಾರ ನಾಲೆಗಳಿಗೆ ನೀರು ಹರಿಸದೆ ತೊಂದರೆ ಉಂಟುಮಾಡಿದೆ ಎಂದು ಪ್ರತಿಭಟನಾಕಾರರು ದೂರಿದರು.

ಇದೇ ವೇಳೆ, ಕನ್ನಂಬಾಡಿ ಜಲಾಶಯದಲ್ಲಿ 84 ಅಡಿ ನೀರಿದ್ದರೂ ನಾಲೆಯಲ್ಲಿ ನೀರು ಹರಿಸದೆ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಯೋಗೇಶ್, ರಾಜೇಶ್, ಅನಿಲ್, ಮೋಹನ್, ಬೋರಪ್ಪ, ಶಿವಲಿಂಗೇಗೌಡ, ರಾಮಲಿಂಗೇಗೌಡ ಮತ್ತು ಅನು ಕುಮಾರ್, ಕುಳ್ಳಪ್ಪ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಗ್ರಾಮಕ್ಕೆ ಉಚಿತವಾಗಿ ಕುಡಿಯುವ ನೀರು ಪೂರೈಸುತ್ತಿರುವ ಯುವಕರ ತಂಡ; ಇವರ ನಿಸ್ವಾರ್ಥ ಸೇವೆಗೆ ಜನಮೆಚ್ಚುಗೆ - Youths supplying free water

Last Updated : Apr 5, 2024, 10:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.