ನೆಲಮಂಗಲ(ಬೆಂಗಳೂರು): ನೆಲಮಂಗಲ ತಾಲೂಕಿನ ಮೊದಲಕೋಟೆ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಸರ್ಕಾರಿ ಶಾಲೆಯ ಮೇಲ್ಛಾವಣಿ ಶೀಟ್ಗಳು ಹಾರಿ ಹೋಗಿವೆ. ಶೀಟ್ಗಳು ಹಾರಿಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಂದು ಮಧ್ಯಾಹ್ನದ ವೇಳೆ ಘಟನೆ ನಡೆಯಿತು. 20ಕ್ಕೂ ಹೆಚ್ಚು ಕಬ್ಬಿಣದ ಶೀಟ್ಗಳು ರಸ್ತೆಗೆ ಬಿದ್ದಿವೆ. ಮಳೆ ಬರುತ್ತಿದ್ದಾಗ ರಸ್ತೆಯಲ್ಲಿ ಯಾರೂ ಓಡಾಟ ನಡೆಸದ್ದರಿಂದ ಪ್ರಾಣಹಾನಿ ಸಂಭವಿಸಿಲ್ಲ.
ದಾಬಸ್ ಪೇಟೆಯ ದೊಡ್ಡಬಳ್ಳಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿಗೆ ಮರಗಳು ಉರುಳಿ ಬಿದ್ದಿವೆ. ಇದರಿಂದಾಗಿ ದೊಡ್ಡಬಳ್ಳಾಪುರ-ದಾಬಸ್ ಪೇಟೆ ಮಾರ್ಗ, ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆಂಬ್ಯುಲೆನ್ಸ್ಗಳು ರಸ್ತೆಯಲ್ಲಿಯೇ ಸಿಲುಕಿದ್ದವು.
ರಸ್ತೆಯಲ್ಲಿ ಬಿದ್ದ ಮರಗಳನ್ನು ತೆರವು ಮಾಡಿದ ಪೊಲೀಸರು ಟ್ರಾಫಿಕ್ ಸಮಸ್ಯೆ ಬಗೆಹರಿಸಿದರು.
ಇದನ್ನೂ ಓದಿ: ಕೊಪ್ಪಳ: ಅಕಾಲಿಕ ಮಳೆಗೆ ಬೆಳೆ ಹಾನಿ, ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ - CROP DAMAGE