ETV Bharat / state

ಬಳ್ಳಾರಿಯಲ್ಲಿ ಕಲ್ಲು ತೂರಾಟ ಪಿಎಸ್​ಐ ಸೇರಿ ಮೂವರಿಗೆ ಗಾಯ: 144 ಸೆಕ್ಷನ್​ ಜಾರಿ - SECTION 144

author img

By ETV Bharat Karnataka Team

Published : Apr 8, 2024, 10:39 AM IST

Updated : Apr 8, 2024, 11:27 AM IST

ಬಳ್ಳಾರಿಯಲ್ಲಿ ಕಲ್ಲುತೂರಾಟ ಪಿಎಸ್​ಐ ಸೇರಿ ಮೂವರಿಗೆ ಗಾಯ
ಬಳ್ಳಾರಿಯಲ್ಲಿ ಕಲ್ಲುತೂರಾಟ ಪಿಎಸ್​ಐ ಸೇರಿ ಮೂವರಿಗೆ ಗಾಯ

ಬಳ್ಳಾರಿ ತಾಲೂಕಿನ ಕೊಳಗಲ್​ ಗ್ರಾಮದಲ್ಲಿ ಕಲ್ಲು ತೂರಾಟ ನಡೆದಿದೆ.

ಬಳ್ಳಾರಿ: ದೇವರ ವಿಗ್ರಹ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿ ಕಲ್ಲು ತೂರಾಡಿರುವ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್​ ಗ್ರಾಮದಲ್ಲಿ ನಡೆದಿದೆ.

ಪವಾಡ ಪುರುಷ ಎರ್ರಿತಾತ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಗಲಾಟೆ ನಡೆದಿದೆ. ಈ ವಿಚಾರ ತಿಳಿದು ಘಟನಾ ಸ್ಥಳಕ್ಕೆ ಪಿಎಸ್​ಐ ಸಂತೋಷ್ ಡಬ್ಬಿನ್, ಸಿಪಿಐ ಸತೀಶ್ ಸೇರಿದಂತೆ ಪೊಲೀಸ್​ ಸಿಬ್ಬಂದಿಗಳು ಆಗಮಿಸಿದರು. ಇದನ್ನು ಕಂಡ ಕಿಡಿಗೇಡಿಗಳು ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಪಿಎಸ್​ಐ ಸಂತೋಷ್​, ಸಿಪಿಐ ಸತೀಶ್​ ಸೇರಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು 144 ಸೆಕ್ಷನ್​ ಜಾರಿ ಮಾಡಲಾಗಿದೆ.

ಗಾಯಾಳು ಪೊಲೀಸ್​ ಸಿಬ್ಬಂದಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಡಿಎಆರ್, ಕೆಎಸ್​ಆರ್​ಪಿ ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ನಕಲಿ ಜಾತಿ ಪ್ರಮಾಣಪತ್ರ ಆರೋಪ ತಳ್ಳಿ ಹಾಕಿದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ - Raja Amareshwara Naik

Last Updated :Apr 8, 2024, 11:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.