ETV Bharat / state

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ FIR ದಾಖಲು - Dingaleshwara Swamiji

author img

By ETV Bharat Karnataka Team

Published : May 5, 2024, 12:54 PM IST

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ
ದಿಂಗಾಲೇಶ್ವರ ಸ್ವಾಮೀಜಿ (Etv Bharat)

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ತಮ್ಮ ಜಾತಿಯವರನ್ನು ಪ್ರೀತಿಸಿದಷ್ಟು ಬೇರಾವುದೇ ಜಾತಿಯವರನ್ನು ಪ್ರೀತಿಸುವುದಿಲ್ಲ ಎಂದು ದಿಂಗಾಲೇಶ್ವರ ಸ್ವಾಮೀಜಿ ಭಾಷಣ ಮಾಡುವಾಗ ಹೇಳಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರ ಮಧ್ಯೆ ವೈರತ್ವ ಮತ್ತು ದ್ವೇಷ ಉಂಟುಮಾಡುವ ಹೇಳಿಕೆ ನಿಡಿದ್ದಾರೆ ಎಂದು ಆರ್.ಕುಮಾರಸ್ವಾಮಿ ಎಂಬವರು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನವಲಗುಂದ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿಗಳ ಕಾಯ್ದೆ 1950, 1951, 1989 (u/s-123 (3A), 125), IPC 1890 (u/s-505(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವೇರುತ್ತಿದೆ. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಪಕ್ಷೇತರರಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದುಕೊಂಡಿದ್ದರು. ಹೀಗಿದ್ದರೂ ಅವರು ಪ್ರಹ್ಲಾದ್ ಜೋಶಿ ವಿರುದ್ದ ವಾಗ್ದಾಳಿ ಮುಂದುವರೆಸಿದ್ದಾರೆ.

ಮೇ 2ರಂದು ನವಲಗುಂದ ಪಟ್ಟಣದ ಗಾಂಧಿ ಮಾರ್ಕೆಟ್​ನಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಸ್ವಾಮೀಜಿ ಭಾಗವಹಿಸಿ, ಭಕ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಹ್ಲಾದ್ ಜೋಶಿ ವಿರುದ್ಧ ಟೀಕಾಸಮರ ನಡೆಸಿದ್ದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಸಜ್ಜು; ಚುನಾವಣಾ ಸಿಬ್ಬಂದಿಗೆ ಮತಯಂತ್ರದೊಂದಿಗೆ ಆರೋಗ್ಯ ಕಿಟ್ ವಿತರಣೆ - Lok Sabha Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.