ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆ 2: ಅರ್ಜಿ ಸಲ್ಲಿಕೆಗೆ ಪರಿಷ್ಕೃತ ದಿನಾಂಕ ಮುಂದೂಡಿಕೆ - SSLC Exam 2

author img

By ETV Bharat Karnataka Team

Published : May 18, 2024, 7:42 PM IST

ಎಸ್​​ಎಸ್​ಎಲ್​ಸಿ ಪರೀಕ್ಷೆ 2ಕ್ಕೆ ಅರ್ಜಿ ಸಲ್ಲಿಸಲು ಪರಿಷ್ಕೃತ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ETV Bharat)

ಬೆಂಗಳೂರು: ಎಸ್‌ಎಸ್ಎಲ್‌ಸಿ ಪರೀಕ್ಷೆ 1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ 2ಕ್ಕೆ ಅರ್ಜಿ ಸಲ್ಲಿಸಲು ಹಾಗೂ ಪರೀಕ್ಷೆಯ ಪರಿಷ್ಕೃತ ದಿನಾಂಕಗಳನ್ನು ಮುಂದೂಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರಲ್ಲಿ ಫೇಲ್‌ ಆಗಿ ಸಿ ಮತ್ತು ಸಿ+ ಪಡೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗುವಂತೆ ಸಿದ್ಧಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮೇ 15 ರಿಂದ ಜೂನ್ 05 ರವರೆಗೆ ಆಯಾ ವಿಷಯ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ನಡೆಸಲು ಉದ್ದೇಶಿಸಿತ್ತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಕ್ಕೆ ಅರ್ಜಿ ಸಲ್ಲಿಸಲು ಪರಿಷ್ಕೃತ ವೇಳಾಪಟ್ಟಿ:

  • ಮಂಡಳಿ ಜಾಲತಾಣದ ಶಾಲಾ ಲಾಗಿನ್‌ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‌ಲೋಡ್‌ ಮಾಡಲು ನಿಗದಿಪಡಿಸಿರುವ ಅಂತಿಮ ದಿನಾಂಕ: 19-05-2024 ರ ರಾತ್ರಿ 12 ಗಂಟೆವರೆಗೆ.
  • ಪರೀಕ್ಷಾ ಶುಲ್ಕದ ಚಲನ್‌ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ: 21-05-2024.
  • ಚಲನ್ ಮುದ್ರಿಸಿಕೊಂಡು ಬ್ಯಾಂಕ್‌ಗೆ ಜಮೆ ಮಾಡಲು ನಿಗದಿಪಡಿಸಿದ ಕೊನೆ ದಿನಾಂಕ: 23-05-2024.ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದರೂ ಪರೀಕ್ಷೆ 2ಕ್ಕೆ ಅರ್ಜಿ ಹಾಕಬಹುದು ಎಂದು ಮಂಡಳಿ ತಿಳಿಸಿದೆ.

2024ರ ಎಸ್‌ಎಸ್ಎಲ್‌ಸಿ ಪರೀಕ್ಷೆ -1 ರಲ್ಲಿ ತೇರ್ಗಡೆ ಹೊಂದಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮೂಲ ಶಾಲೆಯಿಂದ ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದರೂ ಸಹ, ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ಕ್ಕೆ ಹಾಜರಾಗಲು ಇಚ್ಛಿಸಿದಲ್ಲಿ ಅಂತಹ ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸಿ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಕ್ಕೆ ನೋಂದಾಯಿಸಲು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆಗಳನ್ನು ಇಲಾಖೆ ನೀಡಿದೆ.

2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-02ವನ್ನು 14/06/2024 ರಿಂದ ಪ್ರಾರಂಭಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದ್ದು, ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಅವರು ಪ್ರತ್ಯೇಕ ಪ್ರಕಟಣೆಯನ್ನು ಹೊರಡಿಸಲಿದ್ದಾರೆ ಎಂದು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆ 1 ರ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣುರು ಎಂಬ ವಿದ್ಯಾರ್ಥಿನಿ 625ಕ್ಕೆ 625 ಅಂಕ ಪಡೆದ ರಾಜ್ಯಕ್ಕೆ ಮೊದಲ ಶ್ರೇಯಾಂಕ ಗಳಿಸಿದ್ದಾರೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡದಂತೆ ಸಿಎಂ ಸೂಚನೆ - CM Siddaramaih

ETV Bharat Logo

Copyright © 2024 Ushodaya Enterprises Pvt. Ltd., All Rights Reserved.