ETV Bharat / state

ಮಹದಾಯಿ ಯೋಜನೆ ಜಾರಿಗೆ ರಾಜ್ಯ ಉತ್ಸುಕ, ಕೇಂದ್ರ ಸಹಕರಿಸುತ್ತಿಲ್ಲ: ಡಿ.ಕೆ.ಶಿವಕುಮಾರ್

author img

By ETV Bharat Karnataka Team

Published : Feb 15, 2024, 8:19 PM IST

DCM D K Shivakumar
ಡಿಸಿಎಂ ಡಿ ಕೆ ಶಿವಕುಮಾರ್​

ಮಹದಾಯಿ ಯೋಜನೆ ಕಾಮಗಾರಿಗೆ ಪರವಾನಗಿ ಸಿಕ್ಕಾಗ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ್ದ ಕೇಂದ್ರದ ಬಿಜೆಪಿ ಸರ್ಕಾರ ಈಗ ಸಹಕಾರ ನೀಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

ಮಹದಾಯಿ ಯೋಜನೆ: ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿಕೆ

ಹುಬ್ಬಳ್ಳಿ: "ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, "ಅಂದು ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಗಿ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿ‌ ಹಂಚಿ ವಿಜಯೋತ್ಸವ ಆಚರಿಸಿದ್ದರು. ಆದರೆ ಈಗ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ" ಎಂದರು.

ಇದೇ ವೇಳೆ ರಾಜ್ಯ ಬಜೆಟ್‌ ಬಗ್ಗೆ ಮಾತನಾಡುತ್ತಾ, "ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ. ಆಶಾದಾಯಕವಾಗಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ" ಎಂದು ಹೇಳಿದರು.

ಲೋಕಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿ, "ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ ನಡೆದಿದೆ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ" ಎಂದು ತಿಳಿಸಿದರು.

ನಿಗಮ, ಮಂಡಳಿ ನೇಮಕಾತಿ ವಿಚಾರಕ್ಕೆ, "ಬಜೆಟ್ ನಂತರವೇ ನಿಗಮ, ಮಂಡಳಿಗೆ ನೇಮಕ ಮಾಡಲಾಗುವುದು. ಈ ಬಗ್ಗೆ ಯಾರೂ ಅಸಮಾಧಾನಗೊಂಡಿಲ್ಲ" ಎಂದು ಹೇಳಿದರು.

ಇದನ್ನೂ ಓದಿ: ಒಪಿಎಸ್ ಮರುಜಾರಿ ಸೇರಿ ಹಲವು ಬೇಡಿಕೆ: ಸಿದ್ದರಾಮಯ್ಯ ಬಜೆಟ್​ನಲ್ಲಿ ಈಡೇರುತ್ತಾ ಸರ್ಕಾರಿ ನೌಕರರ ನಿರೀಕ್ಷೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.