ETV Bharat / state

ಹಾಸನ ಪೆನ್​ ಡ್ರೈವ್​ ಪ್ರಕರಣ: ಎಸ್​ಐಟಿ ತಂಡಕ್ಕೆ ಹೆಚ್ಚುವರಿಯಾಗಿ 8 ಮಂದಿ ನೇಮಕ - Hassan pen drive case

author img

By ETV Bharat Karnataka Team

Published : May 4, 2024, 3:55 PM IST

ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ತಂಡಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 8 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಿದೆ.
government-has-appointed-8-additional-members-to-the-sit-team
ಹಾಸನ ಪೆನ್​ ಡ್ರೈವ್​ ಪ್ರಕರಣ: ಎಸ್​ಐಟಿ ತಂಡಕ್ಕೆ ಹೆಚ್ಚುವರಿಯಾಗಿ 8 ಮಂದಿ ನೇಮಿಸಿದ ಸರ್ಕಾರ (Etv Bharat)

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 8 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಿದೆ.

ಎಸ್‌ಪಿ ಸಿ.ಎ.ಸೈಮನ್. ಪಿಐ ರಾವ್ ಗಣೇಶ್ ಜರ್ನಾಧನ್, ಸಿಪಿಐ ಶ್ರೀಧರ್.ಬಿ.ಎಸ್, ಎಎಸ್ಐ ಅಲ್ಲಾಬಕ್ಷ, ಹೆಡ್​ ಕಾನ್​ಸ್ಟೇಬಲ್ ಸರಸ್ವತಿ, ಕಾನ್​ಸ್ಟೇಬಲ್​ಗಳಾದ ಎಸ್ ಎನ್. ಮಮತಾ, ಜಾಫರ್ ಸಾಧಿಕ್ ಹಾಗೂ ಹರೀಶ್ ಬಾಬು ಅವರನ್ನ‌ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತನಿಖೆ ಮುಖ್ಯಸ್ಥರಾಗಿರುವ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದ ತಂಡಕ್ಕೆ ಕಳೆದ ವಾರ‌ 18 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದೆ, ಶೀಘ್ರ ಪ್ರಜ್ವಲ್​ ಬಂಧಿಸಲು ಕ್ರಮ: ಸಿಎಂಗೆ ಎಸ್​ಐಟಿ ಮಾಹಿತಿ - HASSAN PEN DRIVE CASE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.