ETV Bharat / state

ಗಂಗಾವತಿ: ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು - Students Fall Sick

author img

By ETV Bharat Karnataka Team

Published : Apr 2, 2024, 8:35 PM IST

CONSUMING FOOD  ADMITTED TO HOSPITAL  KOPPAL
ಮಕ್ಕಳ ಸ್ಥಿತಿ ಕಂಡು ಆಸ್ಪತ್ರಗೆ ದಾಖಲಿಸಿದ ಪಾಲಕರು

ಗಂಗಾವತಿಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗಾವತಿ(ಕೊಪ್ಪಳ): ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥರಾದ ಘಟನೆ ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.

ಒಂದರಿಂದ ಐದನೇ ತರಗತಿವರೆಗಿನ ಒಟ್ಟು 32 ಮಕ್ಕಳು ಮಂಗಳವಾರ ಶಾಲೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಿಸಿಯೂಟ ಮಾಡಿದ ಬಳಿಕ ಕೆಲವರಿಗೆ ವಾಂತಿಯಾಗಿದ್ದು, ಇನ್ನು ಕೆಲವರಿಗೆ ತಲೆಸುತ್ತು ಬಂದಿದೆ. ಮಕ್ಕಳು ಬಳಲುತ್ತಿರುವುದನ್ನು ಗಮನಿಸಿದ ಪೋಷಕರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ ಆರು ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಒಳ ರೋಗಿಗಳನ್ನಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ.

ಸ್ಥಳಕ್ಕೆ ಡಿಎಚ್ಒ ಲಿಂಗರಾಜ, ಸಹಾಯಕ ಆಯುಕ್ತ ಮಹೇಶ್ ಕುಮಾರ್, ತಹಸೀಲ್ದಾರ್ ನಾಗರಾಜ್‌ ಸೇರಿದಂತೆ ತಾಲ್ಲೂಕು ಹಂತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: ಕೋವಿಡ್‌ನಿಂದಾಗಿ ಲಸಿಕೆ ವಿತರಣೆಗೆ ಅಡ್ಡಿ; ಜಗತ್ತಿನೆಲ್ಲೆಡೆ 50 ಸಾವಿರಕ್ಕೂ ಹೆಚ್ಚು ಸಾವು ಸಾಧ್ಯತೆ - Disruptions To Immunization

ETV Bharat Logo

Copyright © 2024 Ushodaya Enterprises Pvt. Ltd., All Rights Reserved.