ETV Bharat / state

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಉಗ್ರ 7 ದಿನ ಎನ್ಐಎ ವಶಕ್ಕೆ - Rameshwaram Cafe Blast Case

author img

By ETV Bharat Karnataka Team

Published : Mar 29, 2024, 11:42 AM IST

ಎನ್ಐಎ
ಎನ್ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಬಂಧಿತ ಶಂಕಿತ ಉಗ್ರನನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಕಾಲ ಎನ್ಐಎ ತನ್ನ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಮುಜಾಮಿಲ್‌ ಪಾಷಾ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮುನ್ನ ಆತನನ್ನು ನಗರದ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈತ ಕೆಫೆ ಸ್ಫೋಟದ ಪ್ರಮುಖ ಆರೋಪಿಗೆ ಬಾಂಬ್ ತಯಾರಿಸಲು ಬೇಕಾದ ಕಚ್ಚಾ ವಸ್ತುಗಳನ್ನು ಸಾಗಿಸಿರುವ ಜತೆಗೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿರುವ ಮಾಹಿತಿ ಲಭ್ಯವಾಗಿದೆ‌. ಹೀಗಾಗಿ ಹೆಚ್ಚಿನ ವಿಚಾರಣೆಗೆ ಅನುಮತಿ ನೀಡುವಂತೆ ಮಾಡಿಕೊಂಡ ಮನವಿ ಪುರಸ್ಕರಿಸಿದ ಕೋರ್ಟ್‌, ಶಂಕಿತನನ್ನು ಏಳು ದಿನಗಳ ಕಾಲ ಎನ್ಐಎ ಕಸ್ಟಡಿಗೆ ಒಪ್ಪಿಸಿದೆ.

ಬಾಂಬ್ ಸ್ಫೋಟದ ಆರೋಪಿಗೆ ಬೇಕಾದ ಕಚ್ಚಾವಸ್ತು ಪೂರೈಕೆ ಸೇರಿದಂತೆ ಬೇಕಾದ ಮೂಲಸೌಕರ್ಯ ಒದಗಿಸಿದ ಆರೋಪದ ಮೇರೆಗೆ ಚಿಕ್ಕಮಗಳೂರಿನ ಮೂಡಿಗೆರೆ ಮೂಲದ ಮುಜಾಮಿಲ್ ಷರೀಫ್‌ನನ್ನು ಗುರುವಾರ ಬಂಧಿಸಲಾಗಿತ್ತು‌. ಕಳೆದ ಆರು ತಿಂಗಳ ಹಿಂದೆ ಬೆಂಗಳೂರು ತೊರೆದು ಮೂಡಿಗೆರೆಯ ಚಿಕನ್ ಕೌಂಟಿಯಲ್ಲಿ ಈತ ಕೆಲಸ ಮಾಡುತ್ತಿದ್ದನು. ತೀರ್ಥಹಳ್ಳಿಯ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನಾಗಿರುವ ಅಬ್ದುಲ್ ಮತೀನ್ ತಾಹಾ ಹಾಗು ಮುಜಾಮಿಲ್​ ಎಸ್​ಎಸ್ಎಲ್​ಸಿವರೆಗೂ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡಿದ್ದರು ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಶಂಕಿತನನ್ನು ಬಂಧಿಸಿದ ಎನ್​ಐಎ - Rameshwaram Cafe Blast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.