ETV Bharat / state

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಮಗು ಸೇರಿ ಮೂವರಿಗೆ ಗಂಭೀರ ಗಾಯ

author img

By ETV Bharat Karnataka Team

Published : Feb 13, 2024, 7:01 PM IST

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ

ಬೈಕ್​ ಮೇಲೆ ಮರದ ಕೊಂಬೆ ಬಿದ್ದು ಒಂದೇ ಕುಟುಂಬದ ಮೂವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿಯ ಗೊಂದಿ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭದ್ರಾವತಿ ತಾಲೂಕು ಸನ್ಯಾಸಿ ಕೊಡಮಗ್ಗಿ ಗ್ರಾಮದ ಮಹಮ್ಮದ್ ಶಫಿವುಲ್ಲಾ(55), ಇವರ ಸೊಸೆ ಪ್ಯಾರಿ ಬೀ(22) ಹಾಗೂ 1 ವರ್ಷದ ಮಗು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಮೂವರು ಬೈಕ್​ನಲ್ಲಿ ಹೊಳಲೂರು ಗ್ರಾಮದ ಮೂಲಕ ಶಿವಮೊಗ್ಗ ನಗರಕ್ಕೆ ಬರುವಾಗ ಗೊಂದಿ ಚಟ್ನಳ್ಳಿ ಗ್ರಾಮದ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರದ ಕೊಂಬೆ ತುಂಡಾಗಿ ಏಕಾಏಕಿ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್​ ಮೇಲಿಂದ ಮೂವರು ಕೆಳಬಿದ್ದು ಗಾಯಗೊಂಡಿದ್ದಾರೆ. ಘಟನೆ ವೇಳೆ ಬೈಕ್​ನ ಹಿಂದೆ ಲಾರಿಕೂಡ ಬರುತ್ತಿತ್ತು. ಆದರೆ ಲಾರಿ ಮೇಲೂ ಮರದ ಕೊಂಬೆ ಬಿದ್ದಿದ್ದರಿಂದ ಚಾಲಕ ಕೂಡಲೇ ಬ್ರೇಕ್​ ಹಾಕಿದ್ದಾನೆ. ಇದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ, ಹೋರಿ ತಿವಿದು ಯುವಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.